oplus_0
ದೊಡ್ಡಬಳ್ಳಾಪುರ ನಗರ ಉಪ ವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ತಮ್ಮ ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಿ ಸ್ನೇಹಪೂರ್ವಕವಾಗಿ ಪರಿಹರಿಸಿಕೊಳ್ಳಲು ಉತ್ತಮ ಸಲಹೆ/ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ ಕಂಪನಿಯ ಆದೇಶದಂತೆ ಜೂ.21ರ ಶನಿವಾರದಂದು ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಹಾಗೂ ಸುರಕ್ಷತಾ ದಿನವನ್ನು ಆಯೋಜಿಸಲಾಗುತ್ತಿದೆ.
ಜೂ.21 ರಂದು ಮಧ್ಯಾಹ್ನ 3:00 ಗಂಟೆಗೆ ಬೆಸ್ಕಾಂ, ದೊಡ್ಡಬಳ್ಳಾಪುರ ನಗರ ಉಪವಿಭಾಗ ಕಚೇರಿ, ಎ.ಪಿ.ಎಂ.ಸಿ ಯಾರ್ಡ್ ಎದುರು, ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಸಭೆಯನ್ನು ಏರ್ಪಡಿಸಿರುವುದರಿಂದ, ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ (o&M-1, o&M-2, ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆ) ವಿದ್ಯುತ್ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಬೇಕಾಗಿ ಬೆಸ್ಕಾಂ ಇಲಾಖೆ ಕೋರಿದೆ.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…