‘ಜೂ.28ರಿಂದ 30ರವರೆಗೆ ಶ್ರೀ ರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆ: ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ’- ಬಜರಂಗದಳ ಕೋಲಾರ ವಿಭಾಗಿಯ ಸಂಯೋಜಕ ನರೇಶ್ ರೆಡ್ಡಿ ಮನವಿ

ದೊಡ್ಡಬಳ್ಳಾಪುರ: ಧಾರ್ಮಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆಯುಳ್ಳ ಹಿಂದು ಬಾಂಧವರ ಸಂಘಟನೆ, ಹಿಂದೂಗಳ ಒಗ್ಗೂಡುವಿಕೆಗಾಗಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ವತಿಯಿಂದ ನಗರದ ಭಗತ್ ಸಿಂಗ್ ಮೈದಾನದಲ್ಲಿ ಶ್ರೀ ರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯನ್ನು ಜೂನ್ 28ರಿಂದ ಮೂರು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಬಜರಂಗದಳ ಕೋಲಾರ ವಿಭಾಗಿಯ ಸಂಯೋಜಕ ನರೇಶ್ ರೆಡ್ಡಿ  ತಿಳಿಸಿದರು.

ನಗರದ ಬಜರಂಗದಳ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ 9 ವರ್ಷಗಳಿಂದ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯನ್ನು ಅದ್ಧೂರಿಯಾಗಿ ನಡೆಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಚುನಾವಣೆಗಳ ಹಿನ್ನೆಲೆಯಲ್ಲಿ ತಡವಾಗಿದೆ. ಈ ಕಾರ್ಯಕ್ರಮವನ್ನು ಪಕ್ಷಾತೀತವಾಗಿ ಯಾವುದೇ ವ್ಯಕ್ತಿಯನ್ನು ವೈಭವೀಕರಿಸದೇ ವಿಜೃಂಭಣೆಯಿಂದ ಹಾಗೂ ಹೆಚ್ಚು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಲಕ್ಷಕ್ಕೂ ಹೆಚ್ಚು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಜೂನ್ 28ರ ಸಂಜೆ 4 ಗಂಟೆಗೆ ನಗರದ ಶ್ರೀ ಮುತ್ಯಾಲಮ್ಮ ದೇವಾಲಯದ ಬಳಿಯಿಂದ ಬೈಕ್, ಕಾರು ಸೇರಿದಂತೆ ವಿವಿಧ ವಾಹನಗಳ ಜಾಥಾ ಪ್ರಾರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ. ಸಂಜೆ 7 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಜೂನ್ 29ರಂದು ಬೆಳಿಗ್ಗೆ 7 ಗಂಟೆಯಿಂದ ಗೋ ಪೂಜೆ, ಮಹಾ ಸುದರ್ಶನ ಹೋಮ, ಶ್ರೀ ರಾಮ ತಾರಕ ಹೋಮ, ಗ್ರಾಮ ದೇವತೆ ಹೋಮ, ಮಧ್ಯಾಹ್ನ ಸಾವಿರಾರು ಮಹಿಳೆಯರಿಂದ ಲಲಿತ ಸಹಸ್ರನಾಮ ಮತ್ತು ಹನುಮಾನ್ ಚಾಲಿಸ್ ಸಾಮೂಹಿಕ ಪಠಣ ನಡೆಯಲಿದೆ. ಸಂಜೆ 4 ಗಂಟೆಗೆ ಕಲ್ಯಾಣೋತ್ಸವ ನಡೆಯಲಿದ್ದು, ಕಲ್ಯಾಣೋತ್ಸದಲ್ಲಿ ದಂಪತಿಗಳು ಭಾಗವಹಿಸಲು ಅವಕಾಶವಿದೆ. ನಂತರ ಗೋ ಆರತಿ ನಡೆಯಲಿದೆ ಎಂದು ತಿಳಿಸಿದರು.

ಜೂನ್ 30ರ ಮಧ್ಯಾಹ್ನ 12.30ಕ್ಕೆ ಭಗತ್ ಸಿಂಗ್ ಕ್ರೀಡಾಂಗಣದಿಂದ ಬೃಹತ್ ಶೋಭಾ ಯಾತ್ರೆ ನಡೆಯಲಿದೆ. ಮೆರವಣಿಗೆಯಲ್ಲಿ ಭಾರತ ಮಾತೆ, ಶ್ರೀರಾಮ, ಹನುಮ, ಶಿವ ಪ್ರತಿಮೆಗಳೊಂದಿಗೆ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಭುವನೇಶ್ವರಿದೇವಿಯ ಮೆರವಣಿಗೆ ವಿವಿಧ ಕಲಾತಂಡಗಳೊಡನೆ ನಡೆಯಲಿದೆ. ನಂತರ ಕಾರ್ಕಳದ ಶೀಕಾಂತ್ ಶೆಟ್ಟಿ ಅವರಿಂದ ದಿಕ್ಸೂಚಿ ಭಾಷಣವಿದೆ. ಸಂಜೆ ರಾಮಾಯಣ ಕಥೆಯ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಕಾರ್ಯಕ್ರಮಗಳಿವೆ ಎಂದು ಹೇಳಿದರು.

ಹಿಂದೂ ಸಮಾಜದ ಪ್ರತೀಕವಾಗಿ ಶಕ್ತಿ ತೋರಿಸುವ ಈ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ರವಿ ಕುಮಾರ್, ಉಪಾಧ್ಯಕ್ಷ  ಎಸ್.ಎಂ.ಸದಾಶಿವಯ್ಯ, ಬಜರಂಗದಳ ಸತ್ಸಂಗದ ಪ್ರಮುಖ ಭಾಸ್ಕರ್ ಭಗತ್,  ವಿಶ್ವ ಹಿಂದೂ ಪರಿಷತ್ ನಗರ ಘಟಕದ ಅಧ್ಯಕ್ಷ ಮಧುಸೂದನ್, ಕಾರ್ಯದರ್ಶಿ ಮಂಜುಳಾ, ತಾಲೂಕು ಸಂಯೋಜಕ ವಿರಾಜ್ ಹಾಜರಿದ್ದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

12 minutes ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

8 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

9 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago