ಜೂ.7ರಂದು ಬಕ್ರೀದ್ ಹಬ್ಬ: ಡಿಸಿ,‌ ಎಸ್ಪಿ ನೇತೃತ್ವದಲ್ಲಿ ಶಾಂತಿ ಸಭೆ: ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಹಬ್ಬ ಆಚರಿಸಿ- ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಜೂ.7ರಂದು ಬಕ್ರೀದ್ ಹಬ್ಬವನ್ನು ಅರ್ಥಪೂರ್ಣವಾಗಿ ಸಂಭ್ರಮದಿಂದ ಆಚರಿಸಲು ಮುಸ್ಲಿಂ ಬಾಂಧವರು ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಪೊಲೀಸ್‌ ಠಾಣೆಗಳಲ್ಲಿ ಶಾಂತಿ ಸಭೆಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ.

ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಬ್ಬ ಆಚರಣೆ ವೇಳೆ ಕೆಲವು ಕಾನೂನಾತ್ಮಕ ಕ್ರಮಗಳನ್ನು ಅಳವಡಿಸಿಕೊಳ್ಳುವ ಕುರಿತು ಹಿಂದೂ ಮುಸ್ಲಿಂ ಮುಖಂಡರಿಗೆ ಸಲಹೆ ಸೂಚನೆಗಳನ್ನು ನೀಡಲು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಮಟ್ಟದ ಶಾಂತಿ ಸಭೆಯನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಬಕ್ರೀದ್ ಹಬ್ಬದ ಸಮಯದಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ಹಾಗೂ ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ಹಬ್ಬವನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಪ್ರಚೋನಕಾರಿ ವಿಡಿಯೋ, ಆಡಿಯೋ ಮತ್ತು ವಾಟ್ಸಾಪ್ ಯೂನಿವರ್ಸಿಟಿಯ ಸಂದೇಶಗಳ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಅದರಿಂದ ಪ್ರಚೋದನೆಗೆ ಒಳಗಾಗಬೇಡಿ. ಅದನ್ನು ನೋಡಿಕೊಳ್ಳಲು ಪೊಲೀಸ್ ಇಲಾಖೆ ಇದೆ. ನೀವು ಶಾಂತಿ ಸೌಹಾರ್ದತೆಯಿಂದ, ಪರಸ್ಪರ ಪ್ರೀತಿ ವಿಶ್ವಾಸದಿಂದ ದೇವರ ಧ್ಯಾನ ಮಾಡಿ. ಅಶಕ್ತರಿಗೆ ನಿಮ್ಮ ಕೈಲಾದಷ್ಟು ಧಾನ ನೀಡಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿ ಎಂದು ಕರೆಕೊಟ್ಟರು.

ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಮಾತನಾಡಿ, ಸಾಮೂಹಿಕ ಪ್ರಾರ್ಥನೆ, ಅತಿಥಿ ಸತ್ಕಾರದ ಇಫ್ತಿಯಾರ್ ಕೂಟ ಸೇರಿದಂತೆ ಧಾರ್ಮಿಕ ವಿವಿಧ ಸೇವಾ ಚಟುವಟಿಕೆಯ ಮೂಲಕ ಭಗವಂತನನ್ನು ಪ್ರಾರ್ಥಿಸಲಾಗುತ್ತದೆ. ಹಬ್ಬದ ವೇಳೆ ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಬ್ಬ ಆಚರಿಸಬೇಕು ಎಂದರು.

ಇಸ್ಲಾಂ ಧರ್ಮದ ಪದ್ಧತಿಯಂತೆ ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು. ಯಾವುದೇ ಅಹಿತಕರ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಕೂಡಲೇ ಪೊಲೀಸ್‌ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಯಾವುದೇ ಧರ್ಮದ ಹಬ್ಬ ಹರಿದಿನವಾಗಲಿ, ಮತ್ತೊಂದು ಧರ್ಮದವರಿಗೆ ತೊಡಕು ಉಂಟಾಗದ ರೀತಿಯಲ್ಲಿ ಆಚರಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಯಿತು.

ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಶಾಂತಿಯಿಂದ ಹಬ್ಬವನ್ನು ಆಚರಿಸಬೇಕು. ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಹಿಂದಿನಿಂದಲೂ ಎಲ್ಲಾ ಮಸೀದಿಗಳಲ್ಲಿ ಶಾಂತಿ, ಸೌಹಾರ್ದತೆಯಿಂದ ಹಬ್ಬಗಳು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲೂ ಕೂಡಾ ಇದೇ ಸಂಸ್ಕೃತಿ ಮುಂದುವರೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಈ ವೇಳೆ ವಿವಿಧ ಪೊಲೀಸ್ ಠಾಣೆಗಳ ಇನ್ಸ್ ಪೆಕ್ಟರ್ ಗಳು, ತಹಶೀಲ್ದಾರ್ ವಿದ್ಯಾವಿಭಾ ರಾಠೋಡ್, ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

7 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

13 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

16 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

17 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

19 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

21 hours ago