ಜೂ.7ರಂದು ಬಕ್ರೀದ್ ಹಬ್ಬ: ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ: ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಹಬ್ಬ ಆಚರಿಸಿ- ಇನ್ಸ್ ಪೆಕ್ಟರ್ ಅಮರೇಶ್ ಗೌಡ

ಜೂ.7ರಂದು ಬಕ್ರೀದ್ ಹಬ್ಬವನ್ನು ಅರ್ಥಪೂರ್ಣವಾಗಿ ಸಂಭ್ರಮದಿಂದ ಆಚರಿಸಲು ಮುಸ್ಲಿಂ ಬಾಂಧವರು ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದಾರೆ. ಇದರ ನಡುವೆ ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಪೊಲೀಸ್‌ ಠಾಣೆಗಳಲ್ಲಿ ಶಾಂತಿ ಸಭೆಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ.

ಸಾಮೂಹಿಕ ಪ್ರಾರ್ಥನೆ, ಅತಿಥಿ ಸತ್ಕಾರದ ಇಫ್ತಿಯಾರ್ ಕೂಟ ಸೇರಿದಂತೆ ಧಾರ್ಮಿಕ ವಿವಿಧ ಸೇವಾ ಚಟುವಟಿಕೆಯ ಮೂಲಕ ಭಗವಂತನನ್ನು ಪ್ರಾರ್ಥಿಸಲಾಗುತ್ತದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ನಗರ ಪೊಲೀಸ್‌ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಅಮರೇಶ್ ಗೌಡ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಮುಖಂಡರ ಸಭೆಯನ್ನು ನಡೆಸಿ, ಹಬ್ಬದ ವೇಳೆ ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಲಾಯಿತು.

ಇಸ್ಲಾಂ ಧರ್ಮದ ಪದ್ಧತಿಯಂತೆ ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು. ಯಾವುದೇ ಅಹಿತಕರ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಕೂಡಲೇ ಪೊಲೀಸ್‌ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಯಾವುದೇ ಧರ್ಮದ ಹಬ್ಬ ಹರಿದಿನವಾಗಲಿ, ಮತ್ತೊಂದು ಧರ್ಮದವರಿಗೆ ತೊಡಕು ಉಂಟಾಗದ ರೀತಿಯಲ್ಲಿ ಆಚರಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಯಿತು.

ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಶಾಂತಿಯಿಂದ ಹಬ್ಬವನ್ನು ಆಚರಿಸಬೇಕು. ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಹಿಂದಿನಿಂದಲೂ ಎಲ್ಲಾ ಮಸೀದಿಗಳಲ್ಲಿ ಶಾಂತಿ, ಸೌಹಾರ್ದತೆಯಿಂದ ಹಬ್ಬಗಳು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲೂ ಕೂಡಾ ಇದೇ ಸಂಸ್ಕೃತಿ ಮುಂದುವರೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಈ ವೇಳೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕೃಷ್ಣಪ್ಪ, ಅಧಿಕಾರಿಗಳು, ಸಿಬ್ಬಂದಿ, ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

13 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

20 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

23 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

24 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago