ಜೂ.7ರಂದು ಬಕ್ರೀದ್ ಹಬ್ಬವನ್ನು ಅರ್ಥಪೂರ್ಣವಾಗಿ ಸಂಭ್ರಮದಿಂದ ಆಚರಿಸಲು ಮುಸ್ಲಿಂ ಬಾಂಧವರು ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದಾರೆ. ಇದರ ನಡುವೆ ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಭೆಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ.
ಸಾಮೂಹಿಕ ಪ್ರಾರ್ಥನೆ, ಅತಿಥಿ ಸತ್ಕಾರದ ಇಫ್ತಿಯಾರ್ ಕೂಟ ಸೇರಿದಂತೆ ಧಾರ್ಮಿಕ ವಿವಿಧ ಸೇವಾ ಚಟುವಟಿಕೆಯ ಮೂಲಕ ಭಗವಂತನನ್ನು ಪ್ರಾರ್ಥಿಸಲಾಗುತ್ತದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಅಮರೇಶ್ ಗೌಡ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಮುಖಂಡರ ಸಭೆಯನ್ನು ನಡೆಸಿ, ಹಬ್ಬದ ವೇಳೆ ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಲಾಯಿತು.
ಇಸ್ಲಾಂ ಧರ್ಮದ ಪದ್ಧತಿಯಂತೆ ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು. ಯಾವುದೇ ಅಹಿತಕರ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಯಾವುದೇ ಧರ್ಮದ ಹಬ್ಬ ಹರಿದಿನವಾಗಲಿ, ಮತ್ತೊಂದು ಧರ್ಮದವರಿಗೆ ತೊಡಕು ಉಂಟಾಗದ ರೀತಿಯಲ್ಲಿ ಆಚರಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಯಿತು.
ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಶಾಂತಿಯಿಂದ ಹಬ್ಬವನ್ನು ಆಚರಿಸಬೇಕು. ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಹಿಂದಿನಿಂದಲೂ ಎಲ್ಲಾ ಮಸೀದಿಗಳಲ್ಲಿ ಶಾಂತಿ, ಸೌಹಾರ್ದತೆಯಿಂದ ಹಬ್ಬಗಳು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲೂ ಕೂಡಾ ಇದೇ ಸಂಸ್ಕೃತಿ ಮುಂದುವರೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.
ಈ ವೇಳೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕೃಷ್ಣಪ್ಪ, ಅಧಿಕಾರಿಗಳು, ಸಿಬ್ಬಂದಿ, ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…