ಜೂ.7ರಂದು ಬಕ್ರೀದ್ ಹಬ್ಬ: ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ: ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಹಬ್ಬ ಆಚರಿಸಿ- ಇನ್ಸ್ ಪೆಕ್ಟರ್ ಅಮರೇಶ್ ಗೌಡ

ಜೂ.7ರಂದು ಬಕ್ರೀದ್ ಹಬ್ಬವನ್ನು ಅರ್ಥಪೂರ್ಣವಾಗಿ ಸಂಭ್ರಮದಿಂದ ಆಚರಿಸಲು ಮುಸ್ಲಿಂ ಬಾಂಧವರು ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದಾರೆ. ಇದರ ನಡುವೆ ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಪೊಲೀಸ್‌ ಠಾಣೆಗಳಲ್ಲಿ ಶಾಂತಿ ಸಭೆಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ.

ಸಾಮೂಹಿಕ ಪ್ರಾರ್ಥನೆ, ಅತಿಥಿ ಸತ್ಕಾರದ ಇಫ್ತಿಯಾರ್ ಕೂಟ ಸೇರಿದಂತೆ ಧಾರ್ಮಿಕ ವಿವಿಧ ಸೇವಾ ಚಟುವಟಿಕೆಯ ಮೂಲಕ ಭಗವಂತನನ್ನು ಪ್ರಾರ್ಥಿಸಲಾಗುತ್ತದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ನಗರ ಪೊಲೀಸ್‌ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಅಮರೇಶ್ ಗೌಡ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಮುಖಂಡರ ಸಭೆಯನ್ನು ನಡೆಸಿ, ಹಬ್ಬದ ವೇಳೆ ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಲಾಯಿತು.

ಇಸ್ಲಾಂ ಧರ್ಮದ ಪದ್ಧತಿಯಂತೆ ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು. ಯಾವುದೇ ಅಹಿತಕರ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಕೂಡಲೇ ಪೊಲೀಸ್‌ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಯಾವುದೇ ಧರ್ಮದ ಹಬ್ಬ ಹರಿದಿನವಾಗಲಿ, ಮತ್ತೊಂದು ಧರ್ಮದವರಿಗೆ ತೊಡಕು ಉಂಟಾಗದ ರೀತಿಯಲ್ಲಿ ಆಚರಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಯಿತು.

ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಶಾಂತಿಯಿಂದ ಹಬ್ಬವನ್ನು ಆಚರಿಸಬೇಕು. ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಹಿಂದಿನಿಂದಲೂ ಎಲ್ಲಾ ಮಸೀದಿಗಳಲ್ಲಿ ಶಾಂತಿ, ಸೌಹಾರ್ದತೆಯಿಂದ ಹಬ್ಬಗಳು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲೂ ಕೂಡಾ ಇದೇ ಸಂಸ್ಕೃತಿ ಮುಂದುವರೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಈ ವೇಳೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕೃಷ್ಣಪ್ಪ, ಅಧಿಕಾರಿಗಳು, ಸಿಬ್ಬಂದಿ, ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

8 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

8 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

11 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

14 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

16 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

20 hours ago