ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ ಇವರುಗಳ ಸವಿನೆನಪಿಗಾಗಿ ಜೂ.7ರ ಭಾನುವಾರ ಬೆಳಗ್ಗೆ 9:30ರಿಂದ ಸಂಜೆ 5ರವರೆಗೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗೇಟ್ ಸಮೀಪದ ಎಲ್.ಜಿ ಮಹಲ್ ನಲ್ಲಿ “ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕಾರೇಪುರ ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ ತಿಳಿಸಿದರು.

ತಾಲೂಕಿನ ಕಾರೇಪುರ ಗ್ರಾಮದಲ್ಲಿನ ಪೂತಮಾನಸ ಜ್ಯೋತಿಷ್ಯಾಲಯ ಕೇಂದ್ರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮವನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯದ ಜ್ಯೋತಿಷ್ಯರ ಹಾಗೂ ಜ್ಯೋತಿಷ್ಯ ಬೋಧನಾ ಸಂಸ್ಥೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗಜೇಂದ್ರಬಾಬು ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಅರ್.ಜಿ ವೆಂಕಟಾಚಲಯ್ಯ, ಶಾಸಕ ಧೀರಜ್ ಮುನಿರಾಜು, ಬೀದರ್ ದಕ್ಷಿಣ ಶಾಸಕ ಡಾ|| ಶೈಲೇಂದ್ರ ಬೆಲ್ಲಾಳ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಕಿಮ್ಸ್ ಮಾಜಿ ಅಧ್ಯಕ್ಷ ಮುನೇಗೌಡ, ಬೆಂಗಳೂರು ನಗರ ಮಾಜಿ ಜಿಲ್ಲಾ ಪಂಚಯಿತಿ ಅಧ್ಯಕ್ಷ ಜಿ.ಮರಿಸ್ವಾಮಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ಸೇರಿದಂತೆ ಇತರರು ಉಪಸ್ಥಿತಿ ಇರಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜ್ಯೋತಿಷ್ಯರು, ವಾಸ್ತು ತಜ್ಞನರಿಂದ ಜನರಿಗೆ ವಾಸ್ತು ಬಗ್ಗೆ ಜಾಗೃತಿ ಮೂಡಿಸಲಾಗುವುದು. ಜ್ಯೋತಿಷ್ಯ ತಾಯಿ, ವಾಸ್ತು ಮಗು ಇದ್ದಂತೆ. ಒಳ್ಳೆ ಸ್ಥಾನ ಮಾನ, ಕೀರ್ತಿ, ಯಶಸ್ಸು, ಆರ್ಥಿಕವಾಗಿ ಸದೃಢತೆ ಪಡೆಯಲು ಜ್ಯೋತಿಷ್ಯ ಮತ್ತು ವಾಸ್ತು ಅತಿ ಮುಖ್ಯ ಎಂದರು.

ಗ್ರಾಮದಲ್ಲಿ ವಾಸಿಸುವ ಜನತೆಯ ಮನೆಗಳನ್ನು ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ಸರಿಪಡಿಸಿ ಶಾಂತಿ, ನೆಮ್ಮದಿ, ಆರೋಗ್ಯವಂತರಾಗಿ ಜೀವನ ಶೈಲಿಯನ್ನು ರೂಪಿಸಿಕೊಳ್ಳಲು ಸಹಕಾರಿಯಾಗುವಂತೆ ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ ಎಂಬ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ ಎಂದರು.

ವಾಸ್ತು ವಿಜ್ಞಾನವು ನಗರವಾಸಿಗಳಿಗೆ ಮತ್ತು ಹಣವಂತರಿಗೆ ಮಾತ್ರ ಲಭ್ಯವಾಗಿರುತ್ತವೆ, ಆದರೆ, ರಾಜ್ಯದಲ್ಲಿ ಸುಮಾರು 30,000 ಗ್ರಾಮಗಳಿವೆ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಸುಮಾರು 296 ಗ್ರಾಮಗಳು, 3 ಪಟ್ಟಣಗಳು, ಎಲ್ಲಾ ವರ್ಗದ ಜನತೆಗೆ ವಾಸ್ತು ಜ್ಞಾನ ನೀಡುವ ಸಲುವಾಗಿ ಈ ಬೃಹತ್ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ಜ್ಯೋತಿಷ್ಯರ ಹಾಗೂ ಜ್ಯೋತಿಷ್ಯ ಬೋಧನಾ ಸಂಸ್ಥೆಗಳ ಒಕ್ಕೂಟ ಅಧ್ಯಕ್ಷ ಅನಂತ ರಾಘವನ್ ಬಿ.ಎನ್, ಖಜಾಂಚಿ ಕುಮಾರ ವಸಿಷ್ಠ, ವಾಸ್ತು ತಜ್ಞ ಗೊಟ್ಟಿಗೆರೆ ಶಿವಣ್ಣ, ಶಾರಧಾ ಮಣಿ, ಮೋಹನ್ ಕುಮಾರ್ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

18 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

20 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

21 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

1 day ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago