2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ, ಈಗಾಗಲೇ ಆಯಾ ಪಕ್ಷಗಳಿಂದ ಟಿಕೆಟ್ ಪಡೆದ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ.
ಏಪ್ರಿಲ್ 15ರ ಶನಿವಾರದಂದು ತಾಲೂಕಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ, ಸತತವಾಗಿ ಮೂರು ಬಾರಿ ಸ್ಪರ್ಧಿಸಿ ಹ್ಯಾಟ್ರಿಕ್ ಸೋಲನ್ನ ಅನುಭವಿಸಿ, ನಾಲ್ಕನೇ ಬಾರಿಗೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ.
ಬಿ.ಮುನೇಗೌಡ ಸ್ಪರ್ಧೆಗೆ ಸ್ವಪಕ್ಷದಿಂದಲೇ ಅಪಸ್ವರ ಕೇಳಿ ಬಂದಿತ್ತು ವರಿಷ್ಠರು ಮಧ್ಯಸ್ಥಿಕೆ ವಹಿಸಿ ಭಿನ್ನಮತ ಶಮನ ಮಾಡಿ ಕೊನೆಗೆ ಮುನೇಗೌಡರಿಗೆ ಟಿಕೆಟ್ ನೀಡಿತು. ಒಂದು ಕಡೆ ಕ್ಷೇತ್ರದ ಮತದಾರರು ಅನುಕಂಪ ಆಧಾರದ ಮೇಲೆ ಮತ ನೀಡುತ್ತಾರೆ ಎಂದು ವರಿಷ್ಠರು ಗಮನಿಸಿ ಟಿಕೆಟ್ ನೀಡಿದ್ದಾರೆ ಎಂಬ ಕೂಗು ಸಹ ಕೇಳಿಬರುತ್ತಿದೆ. ಏನೇ ಆಗಲಿ ಈ ಬಾರಿ ಆದರೂ ಕ್ಷೇತ್ರದ ಜನತೆ ಬಿ.ಮುನೇಗೌಡರಿಗೆ ಆರ್ಶೀವಾದ ಮಾಡುತ್ತಾರಾ? ಎಂಬುದನ್ನು ಕಾದು ನೋಡಬೇಕಿದೆ.
ನಾಮಪತ್ರ ಸಲ್ಲಿಕೆ ವೇಳೆ ಮುನೇಗೌಡ ಪತ್ನಿ ಪದ್ಮಾವತಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…