ಕೋಲಾರ: ನಗರದ ನಚಿಕೇತನ ನಿಲಯದಲ್ಲಿ ಜೆಡಿಎಸ್ ಜಿಲ್ಲಾ ಎಸ್ಸಿ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 68 ನೇ ಪರಿನಿರ್ವಾಣ ದಿನದ ಪ್ರಯುಕ್ತ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಮಾತನಾಡಿ ದೇಶದಲ್ಲಿ ತಾಂಡವಾಡುತ್ತಿದ್ದ ಅಸೃಶ್ಯತೆ ಮತ್ತು ಜಾತೀಯತೆ ವಿರುದ್ಧ ಸಾಕಷ್ಟು ಹೋರಾಟ ನಡೆಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ದಲಿತ ಸಮುದಾಯಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.ಇಡೀ ವಿಶ್ವಕ್ಕೆ ಮೆಚ್ಚುವಂತಹ ಸಂವಿಧಾನ ರಚಿಸಿದ್ದಾರೆ ಅವರು ಕೇವಲ ಒಂದು ಜಾತಿಗೆ ಸೀಮಿತ ಅಲ್ಲ ಮನುಕುಲಕ್ಕೆ ಅವರ ಕೊಡುಗೆ ಅಪಾರವಾದದ್ದು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಿದ್ದಾರೆ ಅಂಬೇಡ್ಕರ್ ರವರ ವಿಚಾರ ಧಾರೆಗಳನ್ನು ಅರ್ಥ ಮಾಡಿಕೊಂಡರೆ ಯುವ ಪೀಳಿಗೆಯ ಭವಿಷ್ಯ ಉಜ್ವಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಟಮಕ ಜಯಚಂದ್ರ, ವಾಲ್ಮೀಕಿ ಮಹಾಸಭಾ ಜಿಲ್ಲಾ ಅಧ್ಯಕ್ಷ ನರಸಿಂಹಯ್ಯ, ಖಜಾಂಚಿ ಮುನಿಯಪ್ಪ, ಮುಖಂಡರಾದ ಹಾರೋಹಳ್ಳಿ ನಾಗರಾಜ್, ರಾಜಪ್ಪ, ಅಲೇರಿ ಮುನಿರಾಜು ಮುಂತಾದವರು ಇದ್ದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…