ಕೋಲಾರ: ನಗರದ ನಚಿಕೇತನ ನಿಲಯದಲ್ಲಿ ಜೆಡಿಎಸ್ ಜಿಲ್ಲಾ ಎಸ್ಸಿ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 68 ನೇ ಪರಿನಿರ್ವಾಣ ದಿನದ ಪ್ರಯುಕ್ತ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಮಾತನಾಡಿ ದೇಶದಲ್ಲಿ ತಾಂಡವಾಡುತ್ತಿದ್ದ ಅಸೃಶ್ಯತೆ ಮತ್ತು ಜಾತೀಯತೆ ವಿರುದ್ಧ ಸಾಕಷ್ಟು ಹೋರಾಟ ನಡೆಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ದಲಿತ ಸಮುದಾಯಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.ಇಡೀ ವಿಶ್ವಕ್ಕೆ ಮೆಚ್ಚುವಂತಹ ಸಂವಿಧಾನ ರಚಿಸಿದ್ದಾರೆ ಅವರು ಕೇವಲ ಒಂದು ಜಾತಿಗೆ ಸೀಮಿತ ಅಲ್ಲ ಮನುಕುಲಕ್ಕೆ ಅವರ ಕೊಡುಗೆ ಅಪಾರವಾದದ್ದು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಿದ್ದಾರೆ ಅಂಬೇಡ್ಕರ್ ರವರ ವಿಚಾರ ಧಾರೆಗಳನ್ನು ಅರ್ಥ ಮಾಡಿಕೊಂಡರೆ ಯುವ ಪೀಳಿಗೆಯ ಭವಿಷ್ಯ ಉಜ್ವಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಟಮಕ ಜಯಚಂದ್ರ, ವಾಲ್ಮೀಕಿ ಮಹಾಸಭಾ ಜಿಲ್ಲಾ ಅಧ್ಯಕ್ಷ ನರಸಿಂಹಯ್ಯ, ಖಜಾಂಚಿ ಮುನಿಯಪ್ಪ, ಮುಖಂಡರಾದ ಹಾರೋಹಳ್ಳಿ ನಾಗರಾಜ್, ರಾಜಪ್ಪ, ಅಲೇರಿ ಮುನಿರಾಜು ಮುಂತಾದವರು ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…