ಕೋಲಾರ: ನಗರದ ನಚಿಕೇತನ ನಿಲಯದಲ್ಲಿ ಜೆಡಿಎಸ್ ಜಿಲ್ಲಾ ಎಸ್ಸಿ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 68 ನೇ ಪರಿನಿರ್ವಾಣ ದಿನದ ಪ್ರಯುಕ್ತ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಮಾತನಾಡಿ ದೇಶದಲ್ಲಿ ತಾಂಡವಾಡುತ್ತಿದ್ದ ಅಸೃಶ್ಯತೆ ಮತ್ತು ಜಾತೀಯತೆ ವಿರುದ್ಧ ಸಾಕಷ್ಟು ಹೋರಾಟ ನಡೆಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ದಲಿತ ಸಮುದಾಯಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.ಇಡೀ ವಿಶ್ವಕ್ಕೆ ಮೆಚ್ಚುವಂತಹ ಸಂವಿಧಾನ ರಚಿಸಿದ್ದಾರೆ ಅವರು ಕೇವಲ ಒಂದು ಜಾತಿಗೆ ಸೀಮಿತ ಅಲ್ಲ ಮನುಕುಲಕ್ಕೆ ಅವರ ಕೊಡುಗೆ ಅಪಾರವಾದದ್ದು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಿದ್ದಾರೆ ಅಂಬೇಡ್ಕರ್ ರವರ ವಿಚಾರ ಧಾರೆಗಳನ್ನು ಅರ್ಥ ಮಾಡಿಕೊಂಡರೆ ಯುವ ಪೀಳಿಗೆಯ ಭವಿಷ್ಯ ಉಜ್ವಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಟಮಕ ಜಯಚಂದ್ರ, ವಾಲ್ಮೀಕಿ ಮಹಾಸಭಾ ಜಿಲ್ಲಾ ಅಧ್ಯಕ್ಷ ನರಸಿಂಹಯ್ಯ, ಖಜಾಂಚಿ ಮುನಿಯಪ್ಪ, ಮುಖಂಡರಾದ ಹಾರೋಹಳ್ಳಿ ನಾಗರಾಜ್, ರಾಜಪ್ಪ, ಅಲೇರಿ ಮುನಿರಾಜು ಮುಂತಾದವರು ಇದ್ದರು.
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…