ಜೆಡಿಎಸ್ ಕಚೇರಿಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

ಇಂದು ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ನಗರದ ಜೆಡಿಎಸ್‌ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡರ ನೇತೃತ್ವದಲ್ಲಿ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯನ್ನು ಆಚರಿಸಲಾಯಿತು.

ಎತ್ತಿನಗಾಡಿಯನ್ನು ಕಬ್ಬಿನ ಜೊಲ್ಲೆಗಳಿಂದ ಸಿಂಗರಿಸಿ, ಗೋ ಪೂಜೆ ನೆರವೇರಿಸಿ, ಎತ್ತುಗಳಿಗೆ ಗೆಣಸು, ಕಡಲೆಕಾಯಿ, ಕಬ್ಬು, ಅವರೆಕಾಯಿ ತಿನ್ನಿಸಿ, ಕಬ್ಬಿನ ಜೊಲ್ಲೆಗಳನ್ನು ಹಿಡಿದು ಮುನೇಗೌಡರೊಂದಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿ ಬಿ.ಮುನೇಗೌಡ ಅವರು, ರೈತ ಬೆಳೆದ ಬೆಳೆಗಳ ರಾಶಿ ಹಾಗೂ ಜಾನುವಾರುಗಳನ್ನು ಪೂಜೆಸುವ ಮಹತ್ವದ ದಿನವೇ ಸಂಕ್ರಾಂತಿ ಆಚರಣೆಯಾಗಿದೆ. ಜೆಡಿಎಸ್‌ ಪಕ್ಷಕ್ಕೂ ರೈತರಿಗೆ ಅವಿನಾಭಾವ ಸಂಬಂಧವಿದೆ. ಆ ಕಾರಣವೇ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರನ್ನು ಮಣ್ಣಿನ ಮಗ ಎಂದು ರಾಷ್ಟ್ರ ಮಟ್ಟದಲ್ಲಿ ಕರೆಯಲಾಗಿದೆ ಎಂದರು.

ಅಲ್ಲದೆ ಪಂಜಾಬ್‌ನ ರೈತರು, ಅವರ ಕೃಷಿ ಪರ ಕಾಳಜಿಗೆ ಗೌರವ ಸೂಚಕವಾಗಿ ‘ದೇವೇಗೌಡ’ ಎಂಬ ಹೆಸರಿನ ಅಕ್ಕಿ ತಳಿಯೊಂದನ್ನು ನಾಮಕರಣ ಮಾಡಿದ್ದಾರೆ ಇದು ಜೆಡಿಎಸ್‌ ವರಿಷ್ಠರಿಗೆ ರೈತರ ಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸುಮಾರು 25 ಸಾವಿರ ಕೋಟಿ ಸಾಲ ಮನ್ನ ಮಾಡಿ ರೈತರ ನೆರವಿಗೆ ಬಂದವರು. ಅಂದಿನಿಂದ ಮಾಧ್ಯಮಗಳಲ್ಲಿ ರೈತರ ಆತ್ಮಹತ್ಯೆಯ ವರದಿಗಳು ಕಡಿಮೆಯಾಗಿದೆ ಎಂದರು.

ಇನ್ನೂ ಇತ್ತೀಚಿಗಿನ ದೊಡ್ಡಬಳ್ಳಾಪುರ ಜೆಡಿಎಸ್‌ ಮುಖಂಡರ ಬಣ ಬಡಿದಾಟದ ಕುರಿತಂತೆ ಕಾಂಗ್ರೆಸ್ ಲೇವಡಿ ಮಾಡಿರುವ ಕುರಿತಂತೆ ಪ್ರತಿಕ್ರಿಯೆ ನೀಡಿದ ಬಿ.ಮುನೇಗೌಡ ಅವರು, ಮನೆ ಎಂದ ಮೇಲೆ ಅಲ್ಪಸ್ವಲ್ಪ ಬೇಸರ ಇರುತ್ತೆ.. ಆದರೆ ಎಲ್ಲರೂ ಒಂದಾಗಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಬದ್ದರಾಗಿದ್ದೇವೆ. ಆದರೆ ಕಾಂಗ್ರೆಸ್ ನವರ ಕುರ್ಚಿ ಕದನ ನೋಡಿದರೆ, 2028 ರ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ಅವರಿಗೆ ಇಲ್ಲವಾಗಿದ್ದು ಕುಮಾರಸ್ವಾಮಿ ಅವರಿಗೆ ಈ ಮೂಲಕ ಆಹ್ವಾನ ನೀಡುತ್ತಿದ್ದಾರೆ ಎಂದರು.

ಈ ವೇಳೆ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ವಕ್ತಾರ ಕುಂಟನಹಳ್ಳಿ ಮಂಜುನಾಥ್, ನಗರಸಭೆ ಸದಸ್ಯರಾದ ತ.ನ.ಪ್ರಭುದೇವ್, ವಡ್ಡರಹಳ್ಳಿ ರವಿಕುಮಾರ್, ಮುಖಂಡರಾದ ರಾಜಘಟ್ಟ ಹರೀಶ್, ತಳವಾರ ನಾಗರಾಜ್, ಜಗನ್ನಾಥ ಚಾರ್, ಸತೀಶ್, ಭಾಗ್ಯಮ್ಮ ಶಶಿಕಲಾ, ರಾಮಕೃಷ್ಣ, ಸಂತೋಷ್, ಭಾನು, ಕೆಂಪೇಗೌಡ, ವಿನಯ್, ಸುರೇಶ ಉಪಸ್ಥಿತರಿದ್ದರು.

Ramesh Babu

Journalist

Recent Posts

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

2 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

6 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

11 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

12 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

13 hours ago