ಜೆಡಿಎಸ್ ಕಚೇರಿಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

ಇಂದು ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ನಗರದ ಜೆಡಿಎಸ್‌ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡರ ನೇತೃತ್ವದಲ್ಲಿ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯನ್ನು ಆಚರಿಸಲಾಯಿತು.

ಎತ್ತಿನಗಾಡಿಯನ್ನು ಕಬ್ಬಿನ ಜೊಲ್ಲೆಗಳಿಂದ ಸಿಂಗರಿಸಿ, ಗೋ ಪೂಜೆ ನೆರವೇರಿಸಿ, ಎತ್ತುಗಳಿಗೆ ಗೆಣಸು, ಕಡಲೆಕಾಯಿ, ಕಬ್ಬು, ಅವರೆಕಾಯಿ ತಿನ್ನಿಸಿ, ಕಬ್ಬಿನ ಜೊಲ್ಲೆಗಳನ್ನು ಹಿಡಿದು ಮುನೇಗೌಡರೊಂದಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿ ಬಿ.ಮುನೇಗೌಡ ಅವರು, ರೈತ ಬೆಳೆದ ಬೆಳೆಗಳ ರಾಶಿ ಹಾಗೂ ಜಾನುವಾರುಗಳನ್ನು ಪೂಜೆಸುವ ಮಹತ್ವದ ದಿನವೇ ಸಂಕ್ರಾಂತಿ ಆಚರಣೆಯಾಗಿದೆ. ಜೆಡಿಎಸ್‌ ಪಕ್ಷಕ್ಕೂ ರೈತರಿಗೆ ಅವಿನಾಭಾವ ಸಂಬಂಧವಿದೆ. ಆ ಕಾರಣವೇ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರನ್ನು ಮಣ್ಣಿನ ಮಗ ಎಂದು ರಾಷ್ಟ್ರ ಮಟ್ಟದಲ್ಲಿ ಕರೆಯಲಾಗಿದೆ ಎಂದರು.

ಅಲ್ಲದೆ ಪಂಜಾಬ್‌ನ ರೈತರು, ಅವರ ಕೃಷಿ ಪರ ಕಾಳಜಿಗೆ ಗೌರವ ಸೂಚಕವಾಗಿ ‘ದೇವೇಗೌಡ’ ಎಂಬ ಹೆಸರಿನ ಅಕ್ಕಿ ತಳಿಯೊಂದನ್ನು ನಾಮಕರಣ ಮಾಡಿದ್ದಾರೆ ಇದು ಜೆಡಿಎಸ್‌ ವರಿಷ್ಠರಿಗೆ ರೈತರ ಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸುಮಾರು 25 ಸಾವಿರ ಕೋಟಿ ಸಾಲ ಮನ್ನ ಮಾಡಿ ರೈತರ ನೆರವಿಗೆ ಬಂದವರು. ಅಂದಿನಿಂದ ಮಾಧ್ಯಮಗಳಲ್ಲಿ ರೈತರ ಆತ್ಮಹತ್ಯೆಯ ವರದಿಗಳು ಕಡಿಮೆಯಾಗಿದೆ ಎಂದರು.

ಇನ್ನೂ ಇತ್ತೀಚಿಗಿನ ದೊಡ್ಡಬಳ್ಳಾಪುರ ಜೆಡಿಎಸ್‌ ಮುಖಂಡರ ಬಣ ಬಡಿದಾಟದ ಕುರಿತಂತೆ ಕಾಂಗ್ರೆಸ್ ಲೇವಡಿ ಮಾಡಿರುವ ಕುರಿತಂತೆ ಪ್ರತಿಕ್ರಿಯೆ ನೀಡಿದ ಬಿ.ಮುನೇಗೌಡ ಅವರು, ಮನೆ ಎಂದ ಮೇಲೆ ಅಲ್ಪಸ್ವಲ್ಪ ಬೇಸರ ಇರುತ್ತೆ.. ಆದರೆ ಎಲ್ಲರೂ ಒಂದಾಗಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಬದ್ದರಾಗಿದ್ದೇವೆ. ಆದರೆ ಕಾಂಗ್ರೆಸ್ ನವರ ಕುರ್ಚಿ ಕದನ ನೋಡಿದರೆ, 2028 ರ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ಅವರಿಗೆ ಇಲ್ಲವಾಗಿದ್ದು ಕುಮಾರಸ್ವಾಮಿ ಅವರಿಗೆ ಈ ಮೂಲಕ ಆಹ್ವಾನ ನೀಡುತ್ತಿದ್ದಾರೆ ಎಂದರು.

ಈ ವೇಳೆ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ವಕ್ತಾರ ಕುಂಟನಹಳ್ಳಿ ಮಂಜುನಾಥ್, ನಗರಸಭೆ ಸದಸ್ಯರಾದ ತ.ನ.ಪ್ರಭುದೇವ್, ವಡ್ಡರಹಳ್ಳಿ ರವಿಕುಮಾರ್, ಮುಖಂಡರಾದ ರಾಜಘಟ್ಟ ಹರೀಶ್, ತಳವಾರ ನಾಗರಾಜ್, ಜಗನ್ನಾಥ ಚಾರ್, ಸತೀಶ್, ಭಾಗ್ಯಮ್ಮ ಶಶಿಕಲಾ, ರಾಮಕೃಷ್ಣ, ಸಂತೋಷ್, ಭಾನು, ಕೆಂಪೇಗೌಡ, ವಿನಯ್, ಸುರೇಶ ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

12 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

14 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

15 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

19 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

21 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago