ಜೆಡಿಎಸ್ ಕಚೇರಿಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

ಇಂದು ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ನಗರದ ಜೆಡಿಎಸ್‌ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡರ ನೇತೃತ್ವದಲ್ಲಿ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯನ್ನು ಆಚರಿಸಲಾಯಿತು.

ಎತ್ತಿನಗಾಡಿಯನ್ನು ಕಬ್ಬಿನ ಜೊಲ್ಲೆಗಳಿಂದ ಸಿಂಗರಿಸಿ, ಗೋ ಪೂಜೆ ನೆರವೇರಿಸಿ, ಎತ್ತುಗಳಿಗೆ ಗೆಣಸು, ಕಡಲೆಕಾಯಿ, ಕಬ್ಬು, ಅವರೆಕಾಯಿ ತಿನ್ನಿಸಿ, ಕಬ್ಬಿನ ಜೊಲ್ಲೆಗಳನ್ನು ಹಿಡಿದು ಮುನೇಗೌಡರೊಂದಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿ ಬಿ.ಮುನೇಗೌಡ ಅವರು, ರೈತ ಬೆಳೆದ ಬೆಳೆಗಳ ರಾಶಿ ಹಾಗೂ ಜಾನುವಾರುಗಳನ್ನು ಪೂಜೆಸುವ ಮಹತ್ವದ ದಿನವೇ ಸಂಕ್ರಾಂತಿ ಆಚರಣೆಯಾಗಿದೆ. ಜೆಡಿಎಸ್‌ ಪಕ್ಷಕ್ಕೂ ರೈತರಿಗೆ ಅವಿನಾಭಾವ ಸಂಬಂಧವಿದೆ. ಆ ಕಾರಣವೇ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರನ್ನು ಮಣ್ಣಿನ ಮಗ ಎಂದು ರಾಷ್ಟ್ರ ಮಟ್ಟದಲ್ಲಿ ಕರೆಯಲಾಗಿದೆ ಎಂದರು.

ಅಲ್ಲದೆ ಪಂಜಾಬ್‌ನ ರೈತರು, ಅವರ ಕೃಷಿ ಪರ ಕಾಳಜಿಗೆ ಗೌರವ ಸೂಚಕವಾಗಿ ‘ದೇವೇಗೌಡ’ ಎಂಬ ಹೆಸರಿನ ಅಕ್ಕಿ ತಳಿಯೊಂದನ್ನು ನಾಮಕರಣ ಮಾಡಿದ್ದಾರೆ ಇದು ಜೆಡಿಎಸ್‌ ವರಿಷ್ಠರಿಗೆ ರೈತರ ಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸುಮಾರು 25 ಸಾವಿರ ಕೋಟಿ ಸಾಲ ಮನ್ನ ಮಾಡಿ ರೈತರ ನೆರವಿಗೆ ಬಂದವರು. ಅಂದಿನಿಂದ ಮಾಧ್ಯಮಗಳಲ್ಲಿ ರೈತರ ಆತ್ಮಹತ್ಯೆಯ ವರದಿಗಳು ಕಡಿಮೆಯಾಗಿದೆ ಎಂದರು.

ಇನ್ನೂ ಇತ್ತೀಚಿಗಿನ ದೊಡ್ಡಬಳ್ಳಾಪುರ ಜೆಡಿಎಸ್‌ ಮುಖಂಡರ ಬಣ ಬಡಿದಾಟದ ಕುರಿತಂತೆ ಕಾಂಗ್ರೆಸ್ ಲೇವಡಿ ಮಾಡಿರುವ ಕುರಿತಂತೆ ಪ್ರತಿಕ್ರಿಯೆ ನೀಡಿದ ಬಿ.ಮುನೇಗೌಡ ಅವರು, ಮನೆ ಎಂದ ಮೇಲೆ ಅಲ್ಪಸ್ವಲ್ಪ ಬೇಸರ ಇರುತ್ತೆ.. ಆದರೆ ಎಲ್ಲರೂ ಒಂದಾಗಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಬದ್ದರಾಗಿದ್ದೇವೆ. ಆದರೆ ಕಾಂಗ್ರೆಸ್ ನವರ ಕುರ್ಚಿ ಕದನ ನೋಡಿದರೆ, 2028 ರ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ಅವರಿಗೆ ಇಲ್ಲವಾಗಿದ್ದು ಕುಮಾರಸ್ವಾಮಿ ಅವರಿಗೆ ಈ ಮೂಲಕ ಆಹ್ವಾನ ನೀಡುತ್ತಿದ್ದಾರೆ ಎಂದರು.

ಈ ವೇಳೆ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ವಕ್ತಾರ ಕುಂಟನಹಳ್ಳಿ ಮಂಜುನಾಥ್, ನಗರಸಭೆ ಸದಸ್ಯರಾದ ತ.ನ.ಪ್ರಭುದೇವ್, ವಡ್ಡರಹಳ್ಳಿ ರವಿಕುಮಾರ್, ಮುಖಂಡರಾದ ರಾಜಘಟ್ಟ ಹರೀಶ್, ತಳವಾರ ನಾಗರಾಜ್, ಜಗನ್ನಾಥ ಚಾರ್, ಸತೀಶ್, ಭಾಗ್ಯಮ್ಮ ಶಶಿಕಲಾ, ರಾಮಕೃಷ್ಣ, ಸಂತೋಷ್, ಭಾನು, ಕೆಂಪೇಗೌಡ, ವಿನಯ್, ಸುರೇಶ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

8 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

9 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

13 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

14 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

19 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

21 hours ago