ಜೆಡಿಎಸ್ ಕಚೇರಿಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

ಇಂದು ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ನಗರದ ಜೆಡಿಎಸ್‌ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡರ ನೇತೃತ್ವದಲ್ಲಿ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯನ್ನು ಆಚರಿಸಲಾಯಿತು.

ಎತ್ತಿನಗಾಡಿಯನ್ನು ಕಬ್ಬಿನ ಜೊಲ್ಲೆಗಳಿಂದ ಸಿಂಗರಿಸಿ, ಗೋ ಪೂಜೆ ನೆರವೇರಿಸಿ, ಎತ್ತುಗಳಿಗೆ ಗೆಣಸು, ಕಡಲೆಕಾಯಿ, ಕಬ್ಬು, ಅವರೆಕಾಯಿ ತಿನ್ನಿಸಿ, ಕಬ್ಬಿನ ಜೊಲ್ಲೆಗಳನ್ನು ಹಿಡಿದು ಮುನೇಗೌಡರೊಂದಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿ ಬಿ.ಮುನೇಗೌಡ ಅವರು, ರೈತ ಬೆಳೆದ ಬೆಳೆಗಳ ರಾಶಿ ಹಾಗೂ ಜಾನುವಾರುಗಳನ್ನು ಪೂಜೆಸುವ ಮಹತ್ವದ ದಿನವೇ ಸಂಕ್ರಾಂತಿ ಆಚರಣೆಯಾಗಿದೆ. ಜೆಡಿಎಸ್‌ ಪಕ್ಷಕ್ಕೂ ರೈತರಿಗೆ ಅವಿನಾಭಾವ ಸಂಬಂಧವಿದೆ. ಆ ಕಾರಣವೇ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರನ್ನು ಮಣ್ಣಿನ ಮಗ ಎಂದು ರಾಷ್ಟ್ರ ಮಟ್ಟದಲ್ಲಿ ಕರೆಯಲಾಗಿದೆ ಎಂದರು.

ಅಲ್ಲದೆ ಪಂಜಾಬ್‌ನ ರೈತರು, ಅವರ ಕೃಷಿ ಪರ ಕಾಳಜಿಗೆ ಗೌರವ ಸೂಚಕವಾಗಿ ‘ದೇವೇಗೌಡ’ ಎಂಬ ಹೆಸರಿನ ಅಕ್ಕಿ ತಳಿಯೊಂದನ್ನು ನಾಮಕರಣ ಮಾಡಿದ್ದಾರೆ ಇದು ಜೆಡಿಎಸ್‌ ವರಿಷ್ಠರಿಗೆ ರೈತರ ಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸುಮಾರು 25 ಸಾವಿರ ಕೋಟಿ ಸಾಲ ಮನ್ನ ಮಾಡಿ ರೈತರ ನೆರವಿಗೆ ಬಂದವರು. ಅಂದಿನಿಂದ ಮಾಧ್ಯಮಗಳಲ್ಲಿ ರೈತರ ಆತ್ಮಹತ್ಯೆಯ ವರದಿಗಳು ಕಡಿಮೆಯಾಗಿದೆ ಎಂದರು.

ಇನ್ನೂ ಇತ್ತೀಚಿಗಿನ ದೊಡ್ಡಬಳ್ಳಾಪುರ ಜೆಡಿಎಸ್‌ ಮುಖಂಡರ ಬಣ ಬಡಿದಾಟದ ಕುರಿತಂತೆ ಕಾಂಗ್ರೆಸ್ ಲೇವಡಿ ಮಾಡಿರುವ ಕುರಿತಂತೆ ಪ್ರತಿಕ್ರಿಯೆ ನೀಡಿದ ಬಿ.ಮುನೇಗೌಡ ಅವರು, ಮನೆ ಎಂದ ಮೇಲೆ ಅಲ್ಪಸ್ವಲ್ಪ ಬೇಸರ ಇರುತ್ತೆ.. ಆದರೆ ಎಲ್ಲರೂ ಒಂದಾಗಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಬದ್ದರಾಗಿದ್ದೇವೆ. ಆದರೆ ಕಾಂಗ್ರೆಸ್ ನವರ ಕುರ್ಚಿ ಕದನ ನೋಡಿದರೆ, 2028 ರ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ಅವರಿಗೆ ಇಲ್ಲವಾಗಿದ್ದು ಕುಮಾರಸ್ವಾಮಿ ಅವರಿಗೆ ಈ ಮೂಲಕ ಆಹ್ವಾನ ನೀಡುತ್ತಿದ್ದಾರೆ ಎಂದರು.

ಈ ವೇಳೆ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ವಕ್ತಾರ ಕುಂಟನಹಳ್ಳಿ ಮಂಜುನಾಥ್, ನಗರಸಭೆ ಸದಸ್ಯರಾದ ತ.ನ.ಪ್ರಭುದೇವ್, ವಡ್ಡರಹಳ್ಳಿ ರವಿಕುಮಾರ್, ಮುಖಂಡರಾದ ರಾಜಘಟ್ಟ ಹರೀಶ್, ತಳವಾರ ನಾಗರಾಜ್, ಜಗನ್ನಾಥ ಚಾರ್, ಸತೀಶ್, ಭಾಗ್ಯಮ್ಮ ಶಶಿಕಲಾ, ರಾಮಕೃಷ್ಣ, ಸಂತೋಷ್, ಭಾನು, ಕೆಂಪೇಗೌಡ, ವಿನಯ್, ಸುರೇಶ ಉಪಸ್ಥಿತರಿದ್ದರು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

8 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

10 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago