ಜೆಡಿಎಸ್ ಕಚೇರಿಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

ಇಂದು ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ನಗರದ ಜೆಡಿಎಸ್‌ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡರ ನೇತೃತ್ವದಲ್ಲಿ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯನ್ನು ಆಚರಿಸಲಾಯಿತು.

ಎತ್ತಿನಗಾಡಿಯನ್ನು ಕಬ್ಬಿನ ಜೊಲ್ಲೆಗಳಿಂದ ಸಿಂಗರಿಸಿ, ಗೋ ಪೂಜೆ ನೆರವೇರಿಸಿ, ಎತ್ತುಗಳಿಗೆ ಗೆಣಸು, ಕಡಲೆಕಾಯಿ, ಕಬ್ಬು, ಅವರೆಕಾಯಿ ತಿನ್ನಿಸಿ, ಕಬ್ಬಿನ ಜೊಲ್ಲೆಗಳನ್ನು ಹಿಡಿದು ಮುನೇಗೌಡರೊಂದಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿ ಬಿ.ಮುನೇಗೌಡ ಅವರು, ರೈತ ಬೆಳೆದ ಬೆಳೆಗಳ ರಾಶಿ ಹಾಗೂ ಜಾನುವಾರುಗಳನ್ನು ಪೂಜೆಸುವ ಮಹತ್ವದ ದಿನವೇ ಸಂಕ್ರಾಂತಿ ಆಚರಣೆಯಾಗಿದೆ. ಜೆಡಿಎಸ್‌ ಪಕ್ಷಕ್ಕೂ ರೈತರಿಗೆ ಅವಿನಾಭಾವ ಸಂಬಂಧವಿದೆ. ಆ ಕಾರಣವೇ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರನ್ನು ಮಣ್ಣಿನ ಮಗ ಎಂದು ರಾಷ್ಟ್ರ ಮಟ್ಟದಲ್ಲಿ ಕರೆಯಲಾಗಿದೆ ಎಂದರು.

ಅಲ್ಲದೆ ಪಂಜಾಬ್‌ನ ರೈತರು, ಅವರ ಕೃಷಿ ಪರ ಕಾಳಜಿಗೆ ಗೌರವ ಸೂಚಕವಾಗಿ ‘ದೇವೇಗೌಡ’ ಎಂಬ ಹೆಸರಿನ ಅಕ್ಕಿ ತಳಿಯೊಂದನ್ನು ನಾಮಕರಣ ಮಾಡಿದ್ದಾರೆ ಇದು ಜೆಡಿಎಸ್‌ ವರಿಷ್ಠರಿಗೆ ರೈತರ ಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸುಮಾರು 25 ಸಾವಿರ ಕೋಟಿ ಸಾಲ ಮನ್ನ ಮಾಡಿ ರೈತರ ನೆರವಿಗೆ ಬಂದವರು. ಅಂದಿನಿಂದ ಮಾಧ್ಯಮಗಳಲ್ಲಿ ರೈತರ ಆತ್ಮಹತ್ಯೆಯ ವರದಿಗಳು ಕಡಿಮೆಯಾಗಿದೆ ಎಂದರು.

ಇನ್ನೂ ಇತ್ತೀಚಿಗಿನ ದೊಡ್ಡಬಳ್ಳಾಪುರ ಜೆಡಿಎಸ್‌ ಮುಖಂಡರ ಬಣ ಬಡಿದಾಟದ ಕುರಿತಂತೆ ಕಾಂಗ್ರೆಸ್ ಲೇವಡಿ ಮಾಡಿರುವ ಕುರಿತಂತೆ ಪ್ರತಿಕ್ರಿಯೆ ನೀಡಿದ ಬಿ.ಮುನೇಗೌಡ ಅವರು, ಮನೆ ಎಂದ ಮೇಲೆ ಅಲ್ಪಸ್ವಲ್ಪ ಬೇಸರ ಇರುತ್ತೆ.. ಆದರೆ ಎಲ್ಲರೂ ಒಂದಾಗಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಬದ್ದರಾಗಿದ್ದೇವೆ. ಆದರೆ ಕಾಂಗ್ರೆಸ್ ನವರ ಕುರ್ಚಿ ಕದನ ನೋಡಿದರೆ, 2028 ರ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ಅವರಿಗೆ ಇಲ್ಲವಾಗಿದ್ದು ಕುಮಾರಸ್ವಾಮಿ ಅವರಿಗೆ ಈ ಮೂಲಕ ಆಹ್ವಾನ ನೀಡುತ್ತಿದ್ದಾರೆ ಎಂದರು.

ಈ ವೇಳೆ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ವಕ್ತಾರ ಕುಂಟನಹಳ್ಳಿ ಮಂಜುನಾಥ್, ನಗರಸಭೆ ಸದಸ್ಯರಾದ ತ.ನ.ಪ್ರಭುದೇವ್, ವಡ್ಡರಹಳ್ಳಿ ರವಿಕುಮಾರ್, ಮುಖಂಡರಾದ ರಾಜಘಟ್ಟ ಹರೀಶ್, ತಳವಾರ ನಾಗರಾಜ್, ಜಗನ್ನಾಥ ಚಾರ್, ಸತೀಶ್, ಭಾಗ್ಯಮ್ಮ ಶಶಿಕಲಾ, ರಾಮಕೃಷ್ಣ, ಸಂತೋಷ್, ಭಾನು, ಕೆಂಪೇಗೌಡ, ವಿನಯ್, ಸುರೇಶ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

4 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago