ಜೆಡಿಎಸ್ ಕಚೇರಿಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

ಇಂದು ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ನಗರದ ಜೆಡಿಎಸ್‌ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡರ ನೇತೃತ್ವದಲ್ಲಿ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯನ್ನು ಆಚರಿಸಲಾಯಿತು.

ಎತ್ತಿನಗಾಡಿಯನ್ನು ಕಬ್ಬಿನ ಜೊಲ್ಲೆಗಳಿಂದ ಸಿಂಗರಿಸಿ, ಗೋ ಪೂಜೆ ನೆರವೇರಿಸಿ, ಎತ್ತುಗಳಿಗೆ ಗೆಣಸು, ಕಡಲೆಕಾಯಿ, ಕಬ್ಬು, ಅವರೆಕಾಯಿ ತಿನ್ನಿಸಿ, ಕಬ್ಬಿನ ಜೊಲ್ಲೆಗಳನ್ನು ಹಿಡಿದು ಮುನೇಗೌಡರೊಂದಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿ ಬಿ.ಮುನೇಗೌಡ ಅವರು, ರೈತ ಬೆಳೆದ ಬೆಳೆಗಳ ರಾಶಿ ಹಾಗೂ ಜಾನುವಾರುಗಳನ್ನು ಪೂಜೆಸುವ ಮಹತ್ವದ ದಿನವೇ ಸಂಕ್ರಾಂತಿ ಆಚರಣೆಯಾಗಿದೆ. ಜೆಡಿಎಸ್‌ ಪಕ್ಷಕ್ಕೂ ರೈತರಿಗೆ ಅವಿನಾಭಾವ ಸಂಬಂಧವಿದೆ. ಆ ಕಾರಣವೇ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರನ್ನು ಮಣ್ಣಿನ ಮಗ ಎಂದು ರಾಷ್ಟ್ರ ಮಟ್ಟದಲ್ಲಿ ಕರೆಯಲಾಗಿದೆ ಎಂದರು.

ಅಲ್ಲದೆ ಪಂಜಾಬ್‌ನ ರೈತರು, ಅವರ ಕೃಷಿ ಪರ ಕಾಳಜಿಗೆ ಗೌರವ ಸೂಚಕವಾಗಿ ‘ದೇವೇಗೌಡ’ ಎಂಬ ಹೆಸರಿನ ಅಕ್ಕಿ ತಳಿಯೊಂದನ್ನು ನಾಮಕರಣ ಮಾಡಿದ್ದಾರೆ ಇದು ಜೆಡಿಎಸ್‌ ವರಿಷ್ಠರಿಗೆ ರೈತರ ಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸುಮಾರು 25 ಸಾವಿರ ಕೋಟಿ ಸಾಲ ಮನ್ನ ಮಾಡಿ ರೈತರ ನೆರವಿಗೆ ಬಂದವರು. ಅಂದಿನಿಂದ ಮಾಧ್ಯಮಗಳಲ್ಲಿ ರೈತರ ಆತ್ಮಹತ್ಯೆಯ ವರದಿಗಳು ಕಡಿಮೆಯಾಗಿದೆ ಎಂದರು.

ಇನ್ನೂ ಇತ್ತೀಚಿಗಿನ ದೊಡ್ಡಬಳ್ಳಾಪುರ ಜೆಡಿಎಸ್‌ ಮುಖಂಡರ ಬಣ ಬಡಿದಾಟದ ಕುರಿತಂತೆ ಕಾಂಗ್ರೆಸ್ ಲೇವಡಿ ಮಾಡಿರುವ ಕುರಿತಂತೆ ಪ್ರತಿಕ್ರಿಯೆ ನೀಡಿದ ಬಿ.ಮುನೇಗೌಡ ಅವರು, ಮನೆ ಎಂದ ಮೇಲೆ ಅಲ್ಪಸ್ವಲ್ಪ ಬೇಸರ ಇರುತ್ತೆ.. ಆದರೆ ಎಲ್ಲರೂ ಒಂದಾಗಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಬದ್ದರಾಗಿದ್ದೇವೆ. ಆದರೆ ಕಾಂಗ್ರೆಸ್ ನವರ ಕುರ್ಚಿ ಕದನ ನೋಡಿದರೆ, 2028 ರ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ಅವರಿಗೆ ಇಲ್ಲವಾಗಿದ್ದು ಕುಮಾರಸ್ವಾಮಿ ಅವರಿಗೆ ಈ ಮೂಲಕ ಆಹ್ವಾನ ನೀಡುತ್ತಿದ್ದಾರೆ ಎಂದರು.

ಈ ವೇಳೆ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ವಕ್ತಾರ ಕುಂಟನಹಳ್ಳಿ ಮಂಜುನಾಥ್, ನಗರಸಭೆ ಸದಸ್ಯರಾದ ತ.ನ.ಪ್ರಭುದೇವ್, ವಡ್ಡರಹಳ್ಳಿ ರವಿಕುಮಾರ್, ಮುಖಂಡರಾದ ರಾಜಘಟ್ಟ ಹರೀಶ್, ತಳವಾರ ನಾಗರಾಜ್, ಜಗನ್ನಾಥ ಚಾರ್, ಸತೀಶ್, ಭಾಗ್ಯಮ್ಮ ಶಶಿಕಲಾ, ರಾಮಕೃಷ್ಣ, ಸಂತೋಷ್, ಭಾನು, ಕೆಂಪೇಗೌಡ, ವಿನಯ್, ಸುರೇಶ ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 hour ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

23 hours ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago