ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ. ನಮ್ಮ ಪಕ್ಷಕ್ಕೆ, ಕಾರ್ಯಕರ್ತರಿಗೆ ತನ್ನದೇ ಆದ ಶಕ್ತಿ ಇದೆ. ನಮ್ಮರನ್ನ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವುದನ್ನ ಇಲ್ಲಿಗೆ ಬಿಡಿ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ ಮಂಜುನಾಥ್ ಹೇಳಿದರು..
ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ನಂತರ ಮೊದಲ ಬಾರಿಗೆ ದೊಡ್ಡಬಳ್ಳಾಪುರಕ್ಕೆ ಆಗಮಿಸಿ ಮಾತನಾಡಿದರು.
ಪಕ್ಷದ ಸಂಘಟನೆಗೆ ಒತ್ತು ನೀಡಲಾಗುವುದು, ಮುಖಂಡರು, ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.
ಯಾವುದನ್ನು ಮನಸ್ಸಿನಲ್ಲಿ ಇಟ್ಟಿಕೊಳ್ಳದೇ ಪಕ್ಷದ ಸಂಘಟನೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು. ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಮಾಜಿ ಜಿಲ್ಲಾಧ್ಯಕ್ಷ ಬಿ.ಮುನೇಗೌಡರನ್ನ ಒಳಗೊಂಡಂತೆ ಎಲ್ಲರೂ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇವೆ. ಜಿಲ್ಲಾವಾರು ಪ್ರವಾಸ ಮಾಡುತ್ತೇನೆ. ನಾನು ಪ್ರತಿನಿತ್ಯ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಹೇಳಿದರು.
ಎಲ್ಲರೂ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಬೇಕು. ಜಾತ್ಯಾತೀತವಾಗಿ ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು. ಎಲ್ಲಾ ಧರ್ಮ, ಜಾತಿಯವರನ್ನ ಒಗ್ಗೂಡಿಸುವುದೇ ನಮ್ಮ ಪಕ್ಷದ ಗುರಿ. ಮುಂದಿನ ದಿನಗಳಲ್ಲಿ ಜಿಲ್ಲಾ, ತಾಲೂಕು, ಹೋಬಳಿ, ಬೂತ್ ಸಮಿತಿ ಮಾಡಿ ಪಕ್ಷ ಬಲವರ್ಧನೆ ಮಾಡುತ್ತೇವೆ ಎಂದು ತಿಳಿಸಿದರು.
ಎನ್ ಡಿಎ ಮೈತ್ರಿಕೂಟ ಇದೆ, ಆದರೆ ಪಕ್ಷಾಂತರ ಇಲ್ಲ. ನಾನು ಯಾರಿಂದಲೂ ಒತ್ತಡ ಹಾಕಿಸಿ ಅಧ್ಯಕ್ಷನಾಗಿಲ್ಲ. ಪಕ್ಷದ ವರಿಷ್ಠರು ನನ್ನ ಪಕ್ಷ ನಿಷ್ಠೆ ನೋಡಿ ಈ ಒಂದು ಸ್ಥಾನಮಾನಕೊಟ್ಟಿದ್ದಾರೆ. ಮುಂದಿನ 20 ದಿನಗಳಲ್ಲಿ ತಾಲೂಕು ಸಮಿತಿ ರಚನೆ ಮಾಡುತ್ತೇವೆ ಎಂದರು.
ಈ ವೇಳೆ ಹರೀಶ್ ಗೌಡ, ಡಾ.ವಿಜಯ್ ಕುಮಾರ್, ತ.ನಾ ಪ್ರಭುದೇವ್, ವೆಂಕಟೇಶ್ ಬಾಬು, ಸತ್ಯನಾರಾಯಣ ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…