Categories: ಕೋಲಾರ

ಜೆಡಿಎಸ್‌ ತಾಲೂಕು ಮಟ್ಟದ ಕಾರ್ಯಕರ್ತರ ಸಭೆ: ಅಧಿಕಾರದ ಆಸೆ ಬಿಡಿ ಪಕ್ಷನಿಷ್ಠೆಗೆ ಒತ್ತು ನೀಡಲು ಸಿಎಂಆರ್ ಶ್ರೀನಾಥ್ ಮನವಿ

ಕೋಲಾರ: ಅಧಿಕಾರದ ಆಸೆ ಬಿಟ್ಟು ಪಕ್ಷದ ಸಂಘಟನೆಗೆ ಒತ್ತು ನೀಡಿ, ಪಕ್ಷನಿಷ್ಠೆಯಿಂದ ಪ್ರಾಮಾಣಿವಾಗಿ ಕೆಲಸ ಮಾಡಿದರೆ ಮಾತ್ರವೇ ಅಧಿಕಾರದ ಸ್ಥಾನಮಾನಗಳು ಸಿಗುತ್ತವೆ ಎಂದು ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ತಿಳಿಸಿದರು.

ತಾಲೂಕಿನ ಕಾಮಧೇನಹಳ್ಳಿಯಲ್ಲಿ ಬುಧವಾರ ಜೆಡಿಎಸ್‌ ತಾಲೂಕು ಘಟಕದಿಂದ ಮುಂಬರುವ ಜಿಪಂ ತಾಪಂ ಹಾಗೂ ಎಪಿಎಂಸಿ ಚುನಾವಣೆ ಮತ್ತು ಪಕ್ಷದ ಪದಾಧಿಕಾರಿಗಳ ಆಯ್ಕೆ ಸಂಬಂಧಿಸಿದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮ್ಮ ತಮ್ಮ ಗ್ರಾಮಗಳಲ್ಲಿ ಸಮಸ್ಯೆಗಳ ಆಧಾರದಲ್ಲಿ ಜೆಡಿಎಸ್‌ ಪಕ್ಷವನ್ನು ಸಂಘಟಿಸಬೇಕಾಗಿದೆ. ಹಣ ಬಲವಿದ್ದರೆ ಅಷ್ಟೇ ಸಾಲದು ವಿರೋಧ ಪಕ್ಷಗಳ ತಂತ್ರ ಪ್ರತಿತಂತ್ರಗಳಿಗೆ ಪ್ರತಿರೋಧ ವ್ಯಕ್ತಪಡಿಸವಂತ ನಾಯಕತ್ವ ಗುಣಗಳು ಕಾರ್ಯಕರ್ತರಲ್ಲಿ ಬರಬೇಕು. ಪಕ್ಷದ ನಿಷ್ಠೆಗೆ ಮತ್ತು ಸಿದ್ದಾಂತಕ್ಕೆ ಪ್ರತಿಯೊಬ್ಬರೂ ಗೌರವ ಕೊಡಬೇಕಾಗಿದೆ ಎಂದರು.

ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಎದುರಿಸುತ್ತಿರುವ ಕಷ್ಟಗಳನ್ನು ರಾಜ್ಯ ಮಟ್ಟದಲ್ಲಿ ಕೂಡ ಚರ್ಚೆ ನಡೆದಿದೆ ಯಾವುದೇ ಒಬ್ಬ ವ್ಯಕ್ತಿಯ ಮತ್ತು ಪಕ್ಷದ ಭಾನವನೆಗಳಿಗೆ ಧಕ್ಕೆಯಾಗದಂತೆ ತಮ್ಮ ಅಭಿಪ್ರಾಯ, ಅನಿಸಿಕೆಗಳನ್ನು ವ್ಯಕ್ತಪಡಿಸಬೇಕು ಅಧಿಕಾರ ಪಡೆದು ನಂಬಿಕೆ ದ್ರೋಹ ಬಗೆದವರಿಗೆ ದೊಡ್ಡ ಮಟ್ಟದಲ್ಲಿ ಉತ್ತರ ನೀಡಬೇಕಾಗಿದೆ ಇದಕ್ಕೆ ಒಗ್ಗಟ್ಟಿನಿಂದ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಬೇಕು ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಮಾತನಾಡಿ ಪಕ್ಷದ ರಾಜ್ಯ ಉಸ್ತುವಾರಿಯ ಆದೇಶದಂತೆ ಸದಸ್ಯತ್ವ ಅಭಿಯಾನ ಮತ್ತು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಅದರಂತೆ ಪ್ರತಿ ಗ್ರಾಮದಲ್ಲಿ ಬೂತ್ ಸಮಿತಿ ಸೇರಿದಂತೆ ಹೋಬಳಿ, ತಾಲೂಕು ಘಟಕಗಳನ್ನು ರಚನೆ ಮಾಡಬೇಕು ಮುಂಬರಲಿರುವ ಪ್ರತಿಯೊಂದು ಚುನಾವಣೆಯಲ್ಲಿ ಸಹ ಗೆಲುವು ಸಾಧಿಸಲು ಪಕ್ಷದ ನಾಯಕರು ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿ ಇರಬೇಕು ಮುಂದಿನ ದಿನಗಳಲ್ಲಿ ಪಕ್ಷದ ನಿಷ್ಠಾವಂತರಿಗೆ ಮೊದಲ ಅಧ್ಯತೆ ನೀಡಲಾಗುತ್ತದೆ ಎಂದರು,

ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು ಮಾತನಾಡಿ ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷವು ಬಲಿಷ್ಠವಾಗಿ ಇದ್ದರೂ ಅಧಿಕಾರ ಪಡೆಯುವ ಸಂದರ್ಭದಲ್ಲಿ ಪಕ್ಷವು ತೊಂದರೆಗಳನ್ನು ಅನುಭವಿಸಬೇಕಾಯಿತು ಹಿಂದೆ ಆಗಿರುವ ನೋವು ಸೋಲುಗಳನ್ನು ಬಿಟ್ಟು ಮುಂದೆ ಎಚ್ಚರಿಕೆಯಿಂದ ಪಕ್ಷವನ್ನು ಕಟ್ಟೋಣ ಹೋಬಳಿ ಮಟ್ಟದಲ್ಲಿ ಸಭೆಗಳನ್ನು ಮಾಡಿ ಅ ಮೂಲಕ ಸಮಿತಿಗಳನ್ನು ಆಯ್ಕೆ ಮಾಡುವುದು ಸೂಕ್ತ ಎಂದರು.

ಈ ಸಂದರ್ಭದಲ್ಲಿ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಜೆಡಿಎಸ್‌ ಪಕ್ಷದ ಚಿಹ್ನೆಯಲ್ಲಿ ಗೆದ್ದು ಬೇರೆ ಪಕ್ಷಕ್ಕೆ ಹೋದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಜಿಲ್ಲಾ ಕೇಂದ್ರದಲ್ಲಿ ಪಕ್ಷದ ಕಛೇರಿ ಕಟ್ಟಲು ಮುಂದಾಗಬೇಕು ಮೈತ್ರಿ ಪಕ್ಷಗಳ ಜಂಟಿ ಸಭೆ ಮಾಡಬೇಕು ಸಹಕಾರಿ ಸಂಘಗಳ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ಬಿಡಬೇಕು ಚುನಾವಣೆಯಲ್ಲಿ ಬೂತ್ ಗಳಲ್ಲಿ ವೋಟ್ ಹಾಕಿಸುವವರನ್ಮು ಗುರುತಿಸಬೇಕು ಕೇವಲ ಸಭೆಗಳಲ್ಲಿ ಭಾಷಣ ಮಾಡುವವರನ್ನು ಅಲ್ಲ ಪಕ್ಷದ ಸಿದ್ದಾಂತದಂತೆ ಒಬ್ಬರಿಗೆ ಒಂದು ಹುದ್ದೆ ಜಾರಿ ಮಾಡಿಸಬೇಕು ಎಂದು ನಾಯಕರನ್ನು ಒತ್ತಾಯಿಸಿದರು.

ಸಭೆಯ ಅಧ್ಯಕ್ಷೆ ವಹಿಸದ್ದ ಜೆಡಿಎಸ್‌ ತಾಲೂಕು ಅಧ್ಯಕ್ಷ ಬಾಬು ಮೌನಿ ಮಾತನಾಡಿ, ಚುನಾವಣೆಯಲ್ಲಿ ಗೆಲ್ಲಲು ಗ್ರಾಮಗಳಲ್ಲಿ ಸದಸ್ಯತ್ವ ಮಾಡಿಸಿ ಪ್ರತಿ ಹೋಬಳಿ ಮಟ್ಟದಲ್ಲಿ ಘಟಕಗಳನ್ನು ರಚನೆ ಮಾಡಲಾಗುತ್ತದೆ ಪಕ್ಷದಲ್ಲಿ ಸುಮಾರು 21 ವಿವಿಧ ವಿಭಾಗಗಳ ಸಮಿತಿಗಳನ್ನು ರಚಿಸಲಾಗುತ್ತದೆ ಎಲ್ಲರಿಗೂ ಅವಕಾಶವಿದ್ದು ಪಕ್ಷದ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸುವಂತೆ ತಿಳಿಸಿದರು.

ಸಭೆಯಲ್ಲಿ ಮಾಜಿ ಜಿಪಂ ಸದಸ್ಯ ಬಾಲಾಜಿ ಚನ್ನಯ್ಯ, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ತಾಲೂಕು ಕಾರ್ಯಾಧ್ಯಕ್ಷ ಜನಪನಹಳ್ಳಿ ಆನಂದ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಯಲವಾರ ಸೊಣ್ಣೇಗೌಡ, ಮೂರಂಡಹಳ್ಳಿ ಗೋಪಾಲಪ್ಪ, ಮುಖಂಡರಾದ ಪುಸ್ಥಿ ನಾರಾಯಣಸ್ವಾಮಿ, ಖಾಜಿಕಲ್ಲಹಳ್ಳಿ ಹರೀಶ್, ಮುನಿಸ್ವಾಮಿಗೌಡ, ಮೀನಾಕ್ಷಿ, ರತ್ನಮ್ಮ, ಲೋಕೇಶ್ ಮರಿಯಪ್ಪ, ವಿ.ಕೆ ರಾಜೇಶ್, ಗಿರೀಶ್, ಜೆಟ್ ಅಶೋಕ್, ವಿಜಯ್ ಗೌಡ, ಮುಂತಾದವರು ಇದ್ದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

7 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

8 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

9 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

11 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

18 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

18 hours ago