ಜೆಡಿಎಸ್ ತೊರೆದು ಬಿಜೆಪಿ‌ ಸೇರಿದ ಹಾಡೋನಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷೆ‌ ಮತ್ತು ಅವರ ಬೆಂಬಲಿಗರು

ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ನಾಗಮ್ಮ ಮತ್ತು ಅವರ ಬೆಂಬಲಿಗರು ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.

ತಾಲೂಕಿನ ತೂಬಗೆರೆ ಬಿಜೆಪಿ ಕಚೇರಿಯಲ್ಲಿ ನಾಗಮ್ಮ ಮತ್ತು ಅವರ ಬೆಂಬಲಿಗಾರದ ನೂರಕ್ಕೂ ಹೆಚ್ಚು ಮಹಿಳೆಯರು ಸೇರ್ಪಡೆಯಾದರು.

ಬಳಿಕ ಮಾತನಾಡಿದ ಅವರು, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ಕಳೆದ 5 ವರ್ಷಗಳಲ್ಲಿ ಈ ಭಾಗಕ್ಕೆ ಮೂಲ ಸೌಕರ್ಯಗಳನ್ನು ಒದಗಿಸದೇ ಕಡೆಗಣಿಸಿದ್ದಾರೆ. ಇದರಿಂದ ಬೇಸತ್ತು ನಾನು ಮತ್ತು ಪಕ್ಷದ ಬೆಂಬಲಿಗರು ಬಿಜೆಪಿ ಸಿದ್ಧಾಂತ ಒಪ್ಪಿ, ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇವೆ ಎಂದು ಹೇಳಿದರು.

ವಕೀಲ ಪ್ರತಾಪ್ ಮಾತನಾಡಿ, ನಮ್ಮ ಪಕ್ಷಕ್ಕೆ ಬರುವವರು ನಮ್ಮ ಸಿದ್ಧಾಂತ ಒಪ್ಪಿ ಬಂದರೆ ಅವರಿಗೆ ಸಂಪೂರ್ಣ ಸಹಕಾರ ಕೊಡುತ್ತೇವೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳ್ಳೆಯ ವ್ಯಕ್ತಿ ಎಂದರೆ ಪಿಳ್ಳ ಮುನಿಶಾಮಪ್ಪ. ಅವರು ಕಳೆದ ಐದು ವರ್ಷಗಳಲ್ಲಿ ಪ್ರತಿ ಗ್ರಾಮದಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಅವರಿಗೆ ನಿಮ್ಮ ಅಮೂಲ್ಯ ಮತಗಳನ್ನು ನೀಡಬೇಕು. ಎಲ್ಲಾ ಗ್ರಾಮಗಳಿಗೆ ತೆರಳಿ ಬಿಜೆಪಿಗೆ ಮತ ನೀಡಬೇಕೆಂದು ಪ್ರಚಾರ ಮಾಡಬೇಕು. ಆಗ ಮಾತ್ರ ಬಿಜೆಪಿ ಗೆಲ್ಲಲು ಸಾಧ್ಯವಾಗುತ್ತದೆ ಎಂದರು.

ಇಂದು ನಮ್ಮ ಕಚೇರಿಯಲ್ಲಿ ಜೆಡಿಎಸ್ ಪಕ್ಷದಲ್ಲೇ ಸುಮಾರು ವರ್ಷಗಳಿಂದ ಇದ್ದು, ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ತುಂಬಾ ಸಂತೋಷದ ವಿಷಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತೂಬಗೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಸುರೇಶ್ ಬಾಬು, ಆನಂದ್, ಸದಸ್ಯ ಗಂಗರಾಜು, ಕೃಷ್ಣಪ್ಪ, ತೂಬಗೆರೆ ಹೋಬಳಿ ಬಿಜೆಪಿ ಅಧ್ಯಕ್ಷ ವಾಸುದೇವ್ ಹಾಗೂ ಪೆರಮಗೊಂಡಹಳ್ಳಿ ಗ್ರಾಮದ ಮಹಿಳೆಯರು, ಯುವಕರು ಹಾಜರಿದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

7 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago