ಜೆಡಿಎಸ್ ತೊರೆದು ಬಿಜೆಪಿ‌ ಸೇರಿದ ಹಾಡೋನಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷೆ‌ ಮತ್ತು ಅವರ ಬೆಂಬಲಿಗರು

ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ನಾಗಮ್ಮ ಮತ್ತು ಅವರ ಬೆಂಬಲಿಗರು ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.

ತಾಲೂಕಿನ ತೂಬಗೆರೆ ಬಿಜೆಪಿ ಕಚೇರಿಯಲ್ಲಿ ನಾಗಮ್ಮ ಮತ್ತು ಅವರ ಬೆಂಬಲಿಗಾರದ ನೂರಕ್ಕೂ ಹೆಚ್ಚು ಮಹಿಳೆಯರು ಸೇರ್ಪಡೆಯಾದರು.

ಬಳಿಕ ಮಾತನಾಡಿದ ಅವರು, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ಕಳೆದ 5 ವರ್ಷಗಳಲ್ಲಿ ಈ ಭಾಗಕ್ಕೆ ಮೂಲ ಸೌಕರ್ಯಗಳನ್ನು ಒದಗಿಸದೇ ಕಡೆಗಣಿಸಿದ್ದಾರೆ. ಇದರಿಂದ ಬೇಸತ್ತು ನಾನು ಮತ್ತು ಪಕ್ಷದ ಬೆಂಬಲಿಗರು ಬಿಜೆಪಿ ಸಿದ್ಧಾಂತ ಒಪ್ಪಿ, ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇವೆ ಎಂದು ಹೇಳಿದರು.

ವಕೀಲ ಪ್ರತಾಪ್ ಮಾತನಾಡಿ, ನಮ್ಮ ಪಕ್ಷಕ್ಕೆ ಬರುವವರು ನಮ್ಮ ಸಿದ್ಧಾಂತ ಒಪ್ಪಿ ಬಂದರೆ ಅವರಿಗೆ ಸಂಪೂರ್ಣ ಸಹಕಾರ ಕೊಡುತ್ತೇವೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳ್ಳೆಯ ವ್ಯಕ್ತಿ ಎಂದರೆ ಪಿಳ್ಳ ಮುನಿಶಾಮಪ್ಪ. ಅವರು ಕಳೆದ ಐದು ವರ್ಷಗಳಲ್ಲಿ ಪ್ರತಿ ಗ್ರಾಮದಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಅವರಿಗೆ ನಿಮ್ಮ ಅಮೂಲ್ಯ ಮತಗಳನ್ನು ನೀಡಬೇಕು. ಎಲ್ಲಾ ಗ್ರಾಮಗಳಿಗೆ ತೆರಳಿ ಬಿಜೆಪಿಗೆ ಮತ ನೀಡಬೇಕೆಂದು ಪ್ರಚಾರ ಮಾಡಬೇಕು. ಆಗ ಮಾತ್ರ ಬಿಜೆಪಿ ಗೆಲ್ಲಲು ಸಾಧ್ಯವಾಗುತ್ತದೆ ಎಂದರು.

ಇಂದು ನಮ್ಮ ಕಚೇರಿಯಲ್ಲಿ ಜೆಡಿಎಸ್ ಪಕ್ಷದಲ್ಲೇ ಸುಮಾರು ವರ್ಷಗಳಿಂದ ಇದ್ದು, ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ತುಂಬಾ ಸಂತೋಷದ ವಿಷಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತೂಬಗೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಸುರೇಶ್ ಬಾಬು, ಆನಂದ್, ಸದಸ್ಯ ಗಂಗರಾಜು, ಕೃಷ್ಣಪ್ಪ, ತೂಬಗೆರೆ ಹೋಬಳಿ ಬಿಜೆಪಿ ಅಧ್ಯಕ್ಷ ವಾಸುದೇವ್ ಹಾಗೂ ಪೆರಮಗೊಂಡಹಳ್ಳಿ ಗ್ರಾಮದ ಮಹಿಳೆಯರು, ಯುವಕರು ಹಾಜರಿದ್ದರು.

Ramesh Babu

Journalist

Recent Posts

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

3 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

6 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

18 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

1 day ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

1 day ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

2 days ago