ಜೆಡಿಎಸ್ ಪಕ್ಷಕ್ಕೆ ಹಳ್ಳಿರೈತ ಅಂಬರೀಶ್ ಗುಡ್ ಬೈ ಹೇಳಿದ್ದಾರೆ. ತೂಬಗೆರೆ ಹೋಬಳಿ ಜೆಡಿಎಸ್ ಪಕ್ಷದ ವಕ್ತಾರನಾಗಿ ಕೆಲಸ ಮಾಡುತ್ತಿದ್ದರು. ಇದೀಗ ವಕ್ತಾರ ಪದವಿಗೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಹಳ್ಳಿರೈತ ಅಂಬರೀಶ್, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದೀರಾ. ನಮ್ಮ ವಿರೋಧಿ ಪಕ್ಷಗಳ ಸಂಸದರು, ಶಾಸಕರಿಗೆ ಹಲಸಿನ ಹಣ್ಣು ನೀಡಲು ಹೋಗಿ ಅವರ ಜೊತೆ ಗುರುತಿಸಿಕೊಳ್ಳುತ್ತಿದ್ದೀರಾ. ಪಕ್ಷಕ್ಕೆ ಮುಜುಗರ ಆಗುವಂತೆ ನಡೆದುಕೊಳ್ಳುತ್ತಿದ್ದೀರಾ ಎಂದು ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರ ಮುಂದೆ ತೂಬಗೆರೆ ಹೋಬಳಿಯ ಯುವ ಜನತಾದಳದ ಅಧ್ಯಕ್ಷರು ಆರೋಪಿಸಿದ್ದರು ಎಂದು ಹೇಳಿದರು.
ನನಗೆ ಯಾವುದೇ ಪಕ್ಷ ಮುಖ್ಯವಲ್ಲ. ನನ್ನ ಹೋರಾಟ ಎಂದೆಂದಿಗೂ ರೈತರ ಪರ ಇರುತ್ತದೆ. ರೈತರಿಗಾಗಿ ನನ್ನ ಜೀವನ ಮುಡುಪಾಗಿಡುತ್ತೇನೆ. ನನ್ನ ಏಳಿಗೆ ಸಹಿಸದ ಕೆಲವರು ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಪಕ್ಷ ತೊರೆಯುವಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…