ಜೆಡಿಎಸ್ ಪಕ್ಷಕ್ಕೆ ಹಳ್ಳಿರೈತ ಅಂಬರೀಶ್ ಗುಡ್ ಬೈ ಹೇಳಿದ್ದಾರೆ. ತೂಬಗೆರೆ ಹೋಬಳಿ ಜೆಡಿಎಸ್ ಪಕ್ಷದ ವಕ್ತಾರನಾಗಿ ಕೆಲಸ ಮಾಡುತ್ತಿದ್ದರು. ಇದೀಗ ವಕ್ತಾರ ಪದವಿಗೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಹಳ್ಳಿರೈತ ಅಂಬರೀಶ್, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದೀರಾ. ನಮ್ಮ ವಿರೋಧಿ ಪಕ್ಷಗಳ ಸಂಸದರು, ಶಾಸಕರಿಗೆ ಹಲಸಿನ ಹಣ್ಣು ನೀಡಲು ಹೋಗಿ ಅವರ ಜೊತೆ ಗುರುತಿಸಿಕೊಳ್ಳುತ್ತಿದ್ದೀರಾ. ಪಕ್ಷಕ್ಕೆ ಮುಜುಗರ ಆಗುವಂತೆ ನಡೆದುಕೊಳ್ಳುತ್ತಿದ್ದೀರಾ ಎಂದು ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರ ಮುಂದೆ ತೂಬಗೆರೆ ಹೋಬಳಿಯ ಯುವ ಜನತಾದಳದ ಅಧ್ಯಕ್ಷರು ಆರೋಪಿಸಿದ್ದರು ಎಂದು ಹೇಳಿದರು.
ನನಗೆ ಯಾವುದೇ ಪಕ್ಷ ಮುಖ್ಯವಲ್ಲ. ನನ್ನ ಹೋರಾಟ ಎಂದೆಂದಿಗೂ ರೈತರ ಪರ ಇರುತ್ತದೆ. ರೈತರಿಗಾಗಿ ನನ್ನ ಜೀವನ ಮುಡುಪಾಗಿಡುತ್ತೇನೆ. ನನ್ನ ಏಳಿಗೆ ಸಹಿಸದ ಕೆಲವರು ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಪಕ್ಷ ತೊರೆಯುವಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…