Categories: ಕೋಲಾರ

ಜೆಡಿಎಸ್‌ ಪಕ್ಷಕ್ಕೆ ನೈತಿಕತೆ ಇದ್ದರೆ ಪ್ರಜ್ವಲ್ ಅವರನ್ನು ಎಸ್ಐಟಿ ತನಿಖೆಗೆ ಒಪ್ಪಿಸಿ: ಕಾಂಗ್ರೆಸ್ ಪಕ್ಷದ ಬಗ್ಗೆ ಮಾತಾಡುವ ನೈತಿಕತೆ ಬಣಕನಹಳ್ಳಿ ನಟರಾಜ್ ಗೆ ಇಲ್ಲ: ಸೀಸಂದ್ರ ಗೋಪಾಲಗೌಡ ಟಾಂಗ್

ಕೋಲಾರ: ಮಾಜಿ ಸ್ಪೀಕರ್ ಹಾಗೂ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಮಾಜಿ‌ ಶಾಸಕ ಕೆ.ಆರ್ ರಮೇಶ್ ಕುಮಾರ್ ಅವರು ಒಕ್ಕಲಿಗ ಸಮುದಾಯದ ಬಗ್ಗೆ ಬಹಳ ನೋವಿನಿಂದ ಮಾತಾಡಿದ್ದಾರೆ ಅದಕ್ಕೆ ಸಂಬಂದಿಸಿದಂತೆ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅದಕ್ಕೆ ಉತ್ತರವು ಕೊಟ್ಟಿದ್ದಾರೆ ನಿಮ್ಮಿಂದ ಒಕ್ಕಲಿಗರ ಬಗ್ಗೆ ಹೇಳಿಸಿಕೊಳ್ಳುವ ಅಗತ್ಯ ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ಬಂದಿಲ್ಲ ಎಂದು ಜೆಡಿಎಸ್‌ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಹೇಳಿಕೆಗೆ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ತಿರುಗೇಟು ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಒಕ್ಕಲಿಗರು ಅಂದ ತಕ್ಷಣ ರೈತರು ಅಂತಹ ರೈತರಿಗೆ ಇವತ್ತು ಶ್ರೀನಿವಾಸಪುರ ಕ್ಷೇತ್ರದಲ್ಲಿ ಅನ್ಯಾಯವಾಗಿದೆ ಕೆಸಿ ವ್ಯಾಲಿ ನೀರು ಕೂಡ ಬರಲಿಲ್ಲ ರೈತರಿಗೆ ಸಹಕಾರಿ ಬ್ಯಾಂಕುಗಳಿಂದ ಸಾಲ ಸಿಗುತ್ತಾ ಇಲ್ಲ ಜಾತಿಯನ್ನು ಇಟ್ಟುಕೊಂಡು ವಿಧಾನಸಭಾ ಚುನಾವಣೆಯಲ್ಲಿ ಮತ ಕೇಳಿದ್ದೀರಾ ಅಲ್ಲವೇ ಯಾಕೆ ಇವತ್ತು ನೀರಿನ ಬಗ್ಗೆ ರೈತರ ಸಾಲಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಮಾಡಲಿಲ್ಲ ಎಂದು ರಮೇಶ್ ಕುಮಾರ್ ನೋವಿನಿಂದ ಮಾತಾಡಿದ್ದಾರೆ ಒಕ್ಕಲಿಗ ಸಮುದಾಯಕ್ಕೆ ನೋವು ಅವಮಾನವಾಗುವ ರೀತಿಯಲ್ಲಿ ಅವರು ಮಾತಾಡಿಲ್ಲ ಆದರೆ ಜೆಡಿಎಸ್‌ ಬಿಜೆಪಿ ಪಕ್ಷದವರು ಚುನಾವಣಾ ಬಂಡವಾಳವಾಗಿ ಮಾಡಿಕೊಳ್ಳಲು ಅಪ್ರಚಾರ ಮಾಡಿದ್ದನ್ನು ಎಂಎಲ್ಸಿ ಅನಿಲ್ ಕುಮಾರ್ ಅದಕ್ಕೆ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್, ರಮೇಶ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತಾಡುವ ನೈತಿಕ ಬಣಕನಹಳ್ಳಿ ನಟರಾಜ್ ಆಗಲಿ ಜೆಡಿಎಸ್‌ ಪಕ್ಷಕ್ಕೆ ಇಲ್ಲ ಜೆಡಿಎಸ್‌ ಪಕ್ಷದವರಿಗೆ ಏನಾದರೂ ನೈತಿಕತೆ ಇದ್ದರೆ ರಾಜ್ಯದ ಬಗ್ಗೆ ಗೌರವ ಇದ್ದು ಸಂವಿಧಾನಕ್ಕೆ ತಲೆಬಾಗಿದ್ದೇ ಆದರೆ ಮೊದಲು ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಲ್ಲಿದ್ದರೂ ಕರೆತಂದು ಎಸ್ಐಟಿ ತನಿಖೆಗೆ ಒಪ್ಪಿಸಿ ಅದನ್ನು ಬಿಟ್ಟು ಸುಖಾಸುಮ್ಮನೆ ಹೇಳಿಕೆ ಕೊಡುವುದು ಪ್ರತಿಭಟನೆ ನಡೆಸುವುದು ದೇಶದ ಪ್ರಧಾನ ಮಂತ್ರಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಪಕ್ಷಕ್ಕೆ ಶೋಭೆ ತರಲ್ಲ ಎಂದು ತಿಳಿಸಿದರು

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಕುರಿತಂತೆ ರಾಜ್ಯ ಸರ್ಕಾರ ಈಗಾಗಲೇ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿದೆ ನಿಮ್ಮದೇ ಪಕ್ಷದ ರಾಜ್ಯ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು, ತಪ್ಪು ಮಾಡಿದ್ದರೆ ಈ ನೆಲದ ಕಾನೂನು ಎಲ್ಲರಿಗೂ ಒಂದೇ ಶಿಕ್ಷೆಯಾಗುತ್ತದೆ, ಸರ್ಕಾರ ತನಿಖೆಗೆ ವಹಿಸಿದೆ, ತನಿಖೆಯಾಗಿ ವಾಸ್ತವಾಂಶ ಹೊರಬರಲಿ ಎಂದಿದ್ದರೂ ಇವತ್ತು ಯಾಕೆ ಪ್ರಜ್ವಲ್ ಅವರನ್ನು ತನಿಖೆಗೆ ಒಪ್ಪಸಲು ಹಿಂದೇಟು ಹಾಕಲಾಗುತ್ತಾ ಇದೆ ಇದರಿಂದ ಸತ್ಯ ಹೊರಬರುತ್ತದೆ ಎಂದು ಏನಾದರೂ ಭಯವೇ ಎಂದು ಬಣಕನಹಳ್ಳಿ ನಟರಾಜ್ ಅವರಿಗೆ ಗೋಪಾಲಗೌಡ ಟಾಂಗ್ ನೀಡಿದರು

Ramesh Babu

Journalist

Share
Published by
Ramesh Babu

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

3 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago