Categories: ಕೋಲಾರ

ಜೆಡಿಎಸ್‌ ಪಕ್ಷಕ್ಕೆ ನೈತಿಕತೆ ಇದ್ದರೆ ಪ್ರಜ್ವಲ್ ಅವರನ್ನು ಎಸ್ಐಟಿ ತನಿಖೆಗೆ ಒಪ್ಪಿಸಿ: ಕಾಂಗ್ರೆಸ್ ಪಕ್ಷದ ಬಗ್ಗೆ ಮಾತಾಡುವ ನೈತಿಕತೆ ಬಣಕನಹಳ್ಳಿ ನಟರಾಜ್ ಗೆ ಇಲ್ಲ: ಸೀಸಂದ್ರ ಗೋಪಾಲಗೌಡ ಟಾಂಗ್

ಕೋಲಾರ: ಮಾಜಿ ಸ್ಪೀಕರ್ ಹಾಗೂ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಮಾಜಿ‌ ಶಾಸಕ ಕೆ.ಆರ್ ರಮೇಶ್ ಕುಮಾರ್ ಅವರು ಒಕ್ಕಲಿಗ ಸಮುದಾಯದ ಬಗ್ಗೆ ಬಹಳ ನೋವಿನಿಂದ ಮಾತಾಡಿದ್ದಾರೆ ಅದಕ್ಕೆ ಸಂಬಂದಿಸಿದಂತೆ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅದಕ್ಕೆ ಉತ್ತರವು ಕೊಟ್ಟಿದ್ದಾರೆ ನಿಮ್ಮಿಂದ ಒಕ್ಕಲಿಗರ ಬಗ್ಗೆ ಹೇಳಿಸಿಕೊಳ್ಳುವ ಅಗತ್ಯ ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ಬಂದಿಲ್ಲ ಎಂದು ಜೆಡಿಎಸ್‌ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಹೇಳಿಕೆಗೆ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ತಿರುಗೇಟು ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಒಕ್ಕಲಿಗರು ಅಂದ ತಕ್ಷಣ ರೈತರು ಅಂತಹ ರೈತರಿಗೆ ಇವತ್ತು ಶ್ರೀನಿವಾಸಪುರ ಕ್ಷೇತ್ರದಲ್ಲಿ ಅನ್ಯಾಯವಾಗಿದೆ ಕೆಸಿ ವ್ಯಾಲಿ ನೀರು ಕೂಡ ಬರಲಿಲ್ಲ ರೈತರಿಗೆ ಸಹಕಾರಿ ಬ್ಯಾಂಕುಗಳಿಂದ ಸಾಲ ಸಿಗುತ್ತಾ ಇಲ್ಲ ಜಾತಿಯನ್ನು ಇಟ್ಟುಕೊಂಡು ವಿಧಾನಸಭಾ ಚುನಾವಣೆಯಲ್ಲಿ ಮತ ಕೇಳಿದ್ದೀರಾ ಅಲ್ಲವೇ ಯಾಕೆ ಇವತ್ತು ನೀರಿನ ಬಗ್ಗೆ ರೈತರ ಸಾಲಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಮಾಡಲಿಲ್ಲ ಎಂದು ರಮೇಶ್ ಕುಮಾರ್ ನೋವಿನಿಂದ ಮಾತಾಡಿದ್ದಾರೆ ಒಕ್ಕಲಿಗ ಸಮುದಾಯಕ್ಕೆ ನೋವು ಅವಮಾನವಾಗುವ ರೀತಿಯಲ್ಲಿ ಅವರು ಮಾತಾಡಿಲ್ಲ ಆದರೆ ಜೆಡಿಎಸ್‌ ಬಿಜೆಪಿ ಪಕ್ಷದವರು ಚುನಾವಣಾ ಬಂಡವಾಳವಾಗಿ ಮಾಡಿಕೊಳ್ಳಲು ಅಪ್ರಚಾರ ಮಾಡಿದ್ದನ್ನು ಎಂಎಲ್ಸಿ ಅನಿಲ್ ಕುಮಾರ್ ಅದಕ್ಕೆ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್, ರಮೇಶ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತಾಡುವ ನೈತಿಕ ಬಣಕನಹಳ್ಳಿ ನಟರಾಜ್ ಆಗಲಿ ಜೆಡಿಎಸ್‌ ಪಕ್ಷಕ್ಕೆ ಇಲ್ಲ ಜೆಡಿಎಸ್‌ ಪಕ್ಷದವರಿಗೆ ಏನಾದರೂ ನೈತಿಕತೆ ಇದ್ದರೆ ರಾಜ್ಯದ ಬಗ್ಗೆ ಗೌರವ ಇದ್ದು ಸಂವಿಧಾನಕ್ಕೆ ತಲೆಬಾಗಿದ್ದೇ ಆದರೆ ಮೊದಲು ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಲ್ಲಿದ್ದರೂ ಕರೆತಂದು ಎಸ್ಐಟಿ ತನಿಖೆಗೆ ಒಪ್ಪಿಸಿ ಅದನ್ನು ಬಿಟ್ಟು ಸುಖಾಸುಮ್ಮನೆ ಹೇಳಿಕೆ ಕೊಡುವುದು ಪ್ರತಿಭಟನೆ ನಡೆಸುವುದು ದೇಶದ ಪ್ರಧಾನ ಮಂತ್ರಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಪಕ್ಷಕ್ಕೆ ಶೋಭೆ ತರಲ್ಲ ಎಂದು ತಿಳಿಸಿದರು

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಕುರಿತಂತೆ ರಾಜ್ಯ ಸರ್ಕಾರ ಈಗಾಗಲೇ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿದೆ ನಿಮ್ಮದೇ ಪಕ್ಷದ ರಾಜ್ಯ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು, ತಪ್ಪು ಮಾಡಿದ್ದರೆ ಈ ನೆಲದ ಕಾನೂನು ಎಲ್ಲರಿಗೂ ಒಂದೇ ಶಿಕ್ಷೆಯಾಗುತ್ತದೆ, ಸರ್ಕಾರ ತನಿಖೆಗೆ ವಹಿಸಿದೆ, ತನಿಖೆಯಾಗಿ ವಾಸ್ತವಾಂಶ ಹೊರಬರಲಿ ಎಂದಿದ್ದರೂ ಇವತ್ತು ಯಾಕೆ ಪ್ರಜ್ವಲ್ ಅವರನ್ನು ತನಿಖೆಗೆ ಒಪ್ಪಸಲು ಹಿಂದೇಟು ಹಾಕಲಾಗುತ್ತಾ ಇದೆ ಇದರಿಂದ ಸತ್ಯ ಹೊರಬರುತ್ತದೆ ಎಂದು ಏನಾದರೂ ಭಯವೇ ಎಂದು ಬಣಕನಹಳ್ಳಿ ನಟರಾಜ್ ಅವರಿಗೆ ಗೋಪಾಲಗೌಡ ಟಾಂಗ್ ನೀಡಿದರು

Ramesh Babu

Journalist

Recent Posts

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

3 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

4 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

6 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

7 hours ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

8 hours ago

Ставки на спорт в Украине_ основы и стратегии(1)

Ставки на спорт UA: советы и стратегии для успеха Ставки на спорт в Украине: основы…

18 hours ago