Categories: ಕೋಲಾರ

ಜೆಡಿಎಸ್‌ ಪಕ್ಷಕ್ಕೆ ನೈತಿಕತೆ ಇದ್ದರೆ ಪ್ರಜ್ವಲ್ ಅವರನ್ನು ಎಸ್ಐಟಿ ತನಿಖೆಗೆ ಒಪ್ಪಿಸಿ: ಕಾಂಗ್ರೆಸ್ ಪಕ್ಷದ ಬಗ್ಗೆ ಮಾತಾಡುವ ನೈತಿಕತೆ ಬಣಕನಹಳ್ಳಿ ನಟರಾಜ್ ಗೆ ಇಲ್ಲ: ಸೀಸಂದ್ರ ಗೋಪಾಲಗೌಡ ಟಾಂಗ್

ಕೋಲಾರ: ಮಾಜಿ ಸ್ಪೀಕರ್ ಹಾಗೂ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಮಾಜಿ‌ ಶಾಸಕ ಕೆ.ಆರ್ ರಮೇಶ್ ಕುಮಾರ್ ಅವರು ಒಕ್ಕಲಿಗ ಸಮುದಾಯದ ಬಗ್ಗೆ ಬಹಳ ನೋವಿನಿಂದ ಮಾತಾಡಿದ್ದಾರೆ ಅದಕ್ಕೆ ಸಂಬಂದಿಸಿದಂತೆ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅದಕ್ಕೆ ಉತ್ತರವು ಕೊಟ್ಟಿದ್ದಾರೆ ನಿಮ್ಮಿಂದ ಒಕ್ಕಲಿಗರ ಬಗ್ಗೆ ಹೇಳಿಸಿಕೊಳ್ಳುವ ಅಗತ್ಯ ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ಬಂದಿಲ್ಲ ಎಂದು ಜೆಡಿಎಸ್‌ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಹೇಳಿಕೆಗೆ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ತಿರುಗೇಟು ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಒಕ್ಕಲಿಗರು ಅಂದ ತಕ್ಷಣ ರೈತರು ಅಂತಹ ರೈತರಿಗೆ ಇವತ್ತು ಶ್ರೀನಿವಾಸಪುರ ಕ್ಷೇತ್ರದಲ್ಲಿ ಅನ್ಯಾಯವಾಗಿದೆ ಕೆಸಿ ವ್ಯಾಲಿ ನೀರು ಕೂಡ ಬರಲಿಲ್ಲ ರೈತರಿಗೆ ಸಹಕಾರಿ ಬ್ಯಾಂಕುಗಳಿಂದ ಸಾಲ ಸಿಗುತ್ತಾ ಇಲ್ಲ ಜಾತಿಯನ್ನು ಇಟ್ಟುಕೊಂಡು ವಿಧಾನಸಭಾ ಚುನಾವಣೆಯಲ್ಲಿ ಮತ ಕೇಳಿದ್ದೀರಾ ಅಲ್ಲವೇ ಯಾಕೆ ಇವತ್ತು ನೀರಿನ ಬಗ್ಗೆ ರೈತರ ಸಾಲಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಮಾಡಲಿಲ್ಲ ಎಂದು ರಮೇಶ್ ಕುಮಾರ್ ನೋವಿನಿಂದ ಮಾತಾಡಿದ್ದಾರೆ ಒಕ್ಕಲಿಗ ಸಮುದಾಯಕ್ಕೆ ನೋವು ಅವಮಾನವಾಗುವ ರೀತಿಯಲ್ಲಿ ಅವರು ಮಾತಾಡಿಲ್ಲ ಆದರೆ ಜೆಡಿಎಸ್‌ ಬಿಜೆಪಿ ಪಕ್ಷದವರು ಚುನಾವಣಾ ಬಂಡವಾಳವಾಗಿ ಮಾಡಿಕೊಳ್ಳಲು ಅಪ್ರಚಾರ ಮಾಡಿದ್ದನ್ನು ಎಂಎಲ್ಸಿ ಅನಿಲ್ ಕುಮಾರ್ ಅದಕ್ಕೆ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್, ರಮೇಶ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತಾಡುವ ನೈತಿಕ ಬಣಕನಹಳ್ಳಿ ನಟರಾಜ್ ಆಗಲಿ ಜೆಡಿಎಸ್‌ ಪಕ್ಷಕ್ಕೆ ಇಲ್ಲ ಜೆಡಿಎಸ್‌ ಪಕ್ಷದವರಿಗೆ ಏನಾದರೂ ನೈತಿಕತೆ ಇದ್ದರೆ ರಾಜ್ಯದ ಬಗ್ಗೆ ಗೌರವ ಇದ್ದು ಸಂವಿಧಾನಕ್ಕೆ ತಲೆಬಾಗಿದ್ದೇ ಆದರೆ ಮೊದಲು ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಲ್ಲಿದ್ದರೂ ಕರೆತಂದು ಎಸ್ಐಟಿ ತನಿಖೆಗೆ ಒಪ್ಪಿಸಿ ಅದನ್ನು ಬಿಟ್ಟು ಸುಖಾಸುಮ್ಮನೆ ಹೇಳಿಕೆ ಕೊಡುವುದು ಪ್ರತಿಭಟನೆ ನಡೆಸುವುದು ದೇಶದ ಪ್ರಧಾನ ಮಂತ್ರಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಪಕ್ಷಕ್ಕೆ ಶೋಭೆ ತರಲ್ಲ ಎಂದು ತಿಳಿಸಿದರು

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಕುರಿತಂತೆ ರಾಜ್ಯ ಸರ್ಕಾರ ಈಗಾಗಲೇ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿದೆ ನಿಮ್ಮದೇ ಪಕ್ಷದ ರಾಜ್ಯ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು, ತಪ್ಪು ಮಾಡಿದ್ದರೆ ಈ ನೆಲದ ಕಾನೂನು ಎಲ್ಲರಿಗೂ ಒಂದೇ ಶಿಕ್ಷೆಯಾಗುತ್ತದೆ, ಸರ್ಕಾರ ತನಿಖೆಗೆ ವಹಿಸಿದೆ, ತನಿಖೆಯಾಗಿ ವಾಸ್ತವಾಂಶ ಹೊರಬರಲಿ ಎಂದಿದ್ದರೂ ಇವತ್ತು ಯಾಕೆ ಪ್ರಜ್ವಲ್ ಅವರನ್ನು ತನಿಖೆಗೆ ಒಪ್ಪಸಲು ಹಿಂದೇಟು ಹಾಕಲಾಗುತ್ತಾ ಇದೆ ಇದರಿಂದ ಸತ್ಯ ಹೊರಬರುತ್ತದೆ ಎಂದು ಏನಾದರೂ ಭಯವೇ ಎಂದು ಬಣಕನಹಳ್ಳಿ ನಟರಾಜ್ ಅವರಿಗೆ ಗೋಪಾಲಗೌಡ ಟಾಂಗ್ ನೀಡಿದರು

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

4 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

5 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

14 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago