Categories: ಕೋಲಾರ

ಜೆಡಿಎಸ್‌ ಪಕ್ಷಕ್ಕೆ ನೈತಿಕತೆ ಇದ್ದರೆ ಪ್ರಜ್ವಲ್ ಅವರನ್ನು ಎಸ್ಐಟಿ ತನಿಖೆಗೆ ಒಪ್ಪಿಸಿ: ಕಾಂಗ್ರೆಸ್ ಪಕ್ಷದ ಬಗ್ಗೆ ಮಾತಾಡುವ ನೈತಿಕತೆ ಬಣಕನಹಳ್ಳಿ ನಟರಾಜ್ ಗೆ ಇಲ್ಲ: ಸೀಸಂದ್ರ ಗೋಪಾಲಗೌಡ ಟಾಂಗ್

ಕೋಲಾರ: ಮಾಜಿ ಸ್ಪೀಕರ್ ಹಾಗೂ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಮಾಜಿ‌ ಶಾಸಕ ಕೆ.ಆರ್ ರಮೇಶ್ ಕುಮಾರ್ ಅವರು ಒಕ್ಕಲಿಗ ಸಮುದಾಯದ ಬಗ್ಗೆ ಬಹಳ ನೋವಿನಿಂದ ಮಾತಾಡಿದ್ದಾರೆ ಅದಕ್ಕೆ ಸಂಬಂದಿಸಿದಂತೆ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅದಕ್ಕೆ ಉತ್ತರವು ಕೊಟ್ಟಿದ್ದಾರೆ ನಿಮ್ಮಿಂದ ಒಕ್ಕಲಿಗರ ಬಗ್ಗೆ ಹೇಳಿಸಿಕೊಳ್ಳುವ ಅಗತ್ಯ ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ಬಂದಿಲ್ಲ ಎಂದು ಜೆಡಿಎಸ್‌ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಹೇಳಿಕೆಗೆ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ತಿರುಗೇಟು ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಒಕ್ಕಲಿಗರು ಅಂದ ತಕ್ಷಣ ರೈತರು ಅಂತಹ ರೈತರಿಗೆ ಇವತ್ತು ಶ್ರೀನಿವಾಸಪುರ ಕ್ಷೇತ್ರದಲ್ಲಿ ಅನ್ಯಾಯವಾಗಿದೆ ಕೆಸಿ ವ್ಯಾಲಿ ನೀರು ಕೂಡ ಬರಲಿಲ್ಲ ರೈತರಿಗೆ ಸಹಕಾರಿ ಬ್ಯಾಂಕುಗಳಿಂದ ಸಾಲ ಸಿಗುತ್ತಾ ಇಲ್ಲ ಜಾತಿಯನ್ನು ಇಟ್ಟುಕೊಂಡು ವಿಧಾನಸಭಾ ಚುನಾವಣೆಯಲ್ಲಿ ಮತ ಕೇಳಿದ್ದೀರಾ ಅಲ್ಲವೇ ಯಾಕೆ ಇವತ್ತು ನೀರಿನ ಬಗ್ಗೆ ರೈತರ ಸಾಲಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಮಾಡಲಿಲ್ಲ ಎಂದು ರಮೇಶ್ ಕುಮಾರ್ ನೋವಿನಿಂದ ಮಾತಾಡಿದ್ದಾರೆ ಒಕ್ಕಲಿಗ ಸಮುದಾಯಕ್ಕೆ ನೋವು ಅವಮಾನವಾಗುವ ರೀತಿಯಲ್ಲಿ ಅವರು ಮಾತಾಡಿಲ್ಲ ಆದರೆ ಜೆಡಿಎಸ್‌ ಬಿಜೆಪಿ ಪಕ್ಷದವರು ಚುನಾವಣಾ ಬಂಡವಾಳವಾಗಿ ಮಾಡಿಕೊಳ್ಳಲು ಅಪ್ರಚಾರ ಮಾಡಿದ್ದನ್ನು ಎಂಎಲ್ಸಿ ಅನಿಲ್ ಕುಮಾರ್ ಅದಕ್ಕೆ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್, ರಮೇಶ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತಾಡುವ ನೈತಿಕ ಬಣಕನಹಳ್ಳಿ ನಟರಾಜ್ ಆಗಲಿ ಜೆಡಿಎಸ್‌ ಪಕ್ಷಕ್ಕೆ ಇಲ್ಲ ಜೆಡಿಎಸ್‌ ಪಕ್ಷದವರಿಗೆ ಏನಾದರೂ ನೈತಿಕತೆ ಇದ್ದರೆ ರಾಜ್ಯದ ಬಗ್ಗೆ ಗೌರವ ಇದ್ದು ಸಂವಿಧಾನಕ್ಕೆ ತಲೆಬಾಗಿದ್ದೇ ಆದರೆ ಮೊದಲು ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಲ್ಲಿದ್ದರೂ ಕರೆತಂದು ಎಸ್ಐಟಿ ತನಿಖೆಗೆ ಒಪ್ಪಿಸಿ ಅದನ್ನು ಬಿಟ್ಟು ಸುಖಾಸುಮ್ಮನೆ ಹೇಳಿಕೆ ಕೊಡುವುದು ಪ್ರತಿಭಟನೆ ನಡೆಸುವುದು ದೇಶದ ಪ್ರಧಾನ ಮಂತ್ರಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಪಕ್ಷಕ್ಕೆ ಶೋಭೆ ತರಲ್ಲ ಎಂದು ತಿಳಿಸಿದರು

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಕುರಿತಂತೆ ರಾಜ್ಯ ಸರ್ಕಾರ ಈಗಾಗಲೇ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿದೆ ನಿಮ್ಮದೇ ಪಕ್ಷದ ರಾಜ್ಯ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು, ತಪ್ಪು ಮಾಡಿದ್ದರೆ ಈ ನೆಲದ ಕಾನೂನು ಎಲ್ಲರಿಗೂ ಒಂದೇ ಶಿಕ್ಷೆಯಾಗುತ್ತದೆ, ಸರ್ಕಾರ ತನಿಖೆಗೆ ವಹಿಸಿದೆ, ತನಿಖೆಯಾಗಿ ವಾಸ್ತವಾಂಶ ಹೊರಬರಲಿ ಎಂದಿದ್ದರೂ ಇವತ್ತು ಯಾಕೆ ಪ್ರಜ್ವಲ್ ಅವರನ್ನು ತನಿಖೆಗೆ ಒಪ್ಪಸಲು ಹಿಂದೇಟು ಹಾಕಲಾಗುತ್ತಾ ಇದೆ ಇದರಿಂದ ಸತ್ಯ ಹೊರಬರುತ್ತದೆ ಎಂದು ಏನಾದರೂ ಭಯವೇ ಎಂದು ಬಣಕನಹಳ್ಳಿ ನಟರಾಜ್ ಅವರಿಗೆ ಗೋಪಾಲಗೌಡ ಟಾಂಗ್ ನೀಡಿದರು

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

5 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

6 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago