ಜೆಡಿಎಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ ಕನ್ನಡ ಪಕ್ಷ: ನೆಲ, ಜಲ, ಭಾಷೆಯ ರಕ್ಷಣೆಗಾಗಿ ಪ್ರಾದೇಶಿಕ ಪಕ್ಷಕ್ಕೆ ಬೆಂಬಲ – ಹಿರಿಯ ಕನ್ನಡ ಪರ ಹೋರಾಟಗಾರ ಸಂಜೀವ್ ನಾಯಕ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಜೆ.ಡಿ.ಎಸ್ ಪಕ್ಷಕ್ಕೆ ಕನ್ನಡ ಪಕ್ಷ ಯಾವುದೇ ಷರತ್ತುಗಳಿಲ್ಲದೆ ಸಂಪೂರ್ಣವಾಗಿ ಬೆಂಬಲಿಸುವುದಾಗಿ ಕನ್ನಡ ಪಕ್ಷದ ರಾಜ್ಯ ಸಮಿತಿಯ ಸದಸ್ಯ ಸಂಜೀವ್ ನಾಯಕ್ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕನ್ನಡ ಪಕ್ಷ ಮೊದಲಿನಿಂದಲೂ ಕನ್ನಡ ನಾಡು, ನುಡಿ, ನೆಲ, ಜಲದ ಉಳಿವಿಗಾಗಿ ಹೊರಾಡಿದ‌ ಪಕ್ಷವಾಗಿದೆ. ಜೊತೆಗೆ ಜ್ಯಾತ್ಯಾತೀತ ನಿಲುವಿಗೆ ಬದ್ದವಾಗಿದೆ. ಪ್ರಸ್ತುತ ರಾಜ್ಯ ಹಾಗೂ ರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ಜನ ಸಾಮಾನ್ಯರ ಬದುಕಿನ ಜೊತೆ ಆಟವಾಡುತ್ತಿರುವ ಭ್ರಷ್ಟ ಬಿಜೆ.ಪಿ ಪಕ್ಷವನ್ನು ಧಿಕ್ಕರಿಸುವ ಸಲುವಾಗಿ ತಾಲ್ಲೂಕು ಕನ್ನಡ ಪಕ್ಷ ಜ್ಯಾತ್ಯಾತೀತ ಹಾಗು ಪ್ರಾದೇಶಿಕ ನಿಲುವಿಗೆ ಹತ್ತಿರವಾಗಿರುವ ಜ್ಯಾತ್ಯಾತೀತ ಜನತಾದಳದ ಅಭ್ಯರ್ಥಿ ಬಿ.ಮುನೇಗೌಡರನ್ನು ಬೆಂಬಲಿಸಿ ಚುನಾವಣೆಯಲ್ಲಿ ದುಡಿಯಲಾಗುವುದು ಎಂದರು.

ಕನ್ನಡ ಪಕ್ಷದ ಹಿರಿಯ ಮುಖಂಡ ಡಿ.ಪಿ ಆಂಜಿನೇಯ ಮಾತನಾಡಿ ನಾಲ್ಕು ದಶಕಗಳ ಹಿನ್ನೆಲೆ ಇರುವ ಕನ್ನಡ ಪಕ್ಷ ಮೊದಲಿನಿಂದಲೂ ಬಡವರ, ದೀನ ದಲಿತರ ಪರವಾಗಿರುವ ಪಕ್ಷ. ಸ್ಥಳೀಯ ವಿಚಾರಗಳಿಗೆ ಅನುಸಾರವಾಗಿ ತಾಲ್ಲೂಕಿನ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಂದರ್ಭಾನುಸಾರ ಕೆಲವು ಪಕ್ಷಗಳ ಜೊತೆ ಕನ್ನಡ ಪಕ್ಷ ಹೊಂದಾಣಿಕೆ ಮಾಡಿಕೊಂಡು ಬಂದಿದೆ . ಪ್ರಸ್ತುತ ಪ್ರಾದೇಶಿಕ ಚಿಂತನೆಯಲ್ಲಿರುವ ಜಾತ್ಯಾತೀತ ಜನತಾ ದಳಕ್ಕೆ ಬೆಂಬಲಿಸುವ ಸಲುವಾಗಿ ಕನ್ನಡ ಪಕ್ಷದ ಸರ್ವ ಸಮ್ಮತದ ತೀರ್ಮಾನಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಮುನೇಗೌಡರಿಗೆ ಕನ್ನಡ ಪಕ್ಷ ಬೇಷರತ್ತು ಬೆಂಬಲ ಸೂಚಿಸಿದೆ ಎಂದು ಹೇಳಿದರು.

ಪ್ರಾದೇಶಿಕ ತತ್ವದಡಿ ಮತ್ತು ಮೂರು ಬಾರಿ ಸೋತಿರುವ ಮುನೇಗೌಡ ಜಕ್ಕಲಮಡಗು ಬತ್ತಿಹೋಗಿ ನೀರಿಗೆ ಹಾಹಾಕಾರ ಉಂಟಾಗಿದ್ದ ಕಾಲದಲ್ಲಿ ಜನತೆಗೆ ನೀರಿನ ವ್ಯವಸ್ಥೆ ಮಾಡಿದ್ದಾರೆ. ಕನ್ನಡ ಪಕ್ಷ ಪದಾಧಿಕಾರಿಗಳ ಸರ್ವಸಮ್ಮತದೊಂದಿಗೆ ಈ ಬಾರಿ ಜೆಡಿಎಸ್ ಗೆ ಬೆಂಬಲ ಸೂಚಿಸಲಾಗಿದೆ ಎಂದು ಕನ್ನಡ ಪಕ್ಷದ ತಾಲ್ಲೂಕು ಅಧ್ಯಕ್ಷ ಡಿ.ವೆಂಕಟೇಶ್ ಹೇಳಿದರು.

ಜೆಡಿಎಸ್ ಸಿದ್ದಾಂತ ಮತ್ತು ಸ್ಥಳೀಯ ರಾಜಕೀಯ ಬದಲಾವಣೆಗಳಿಂದಾಗಿ ಧರ್ಮಾತೀತವಾಗಿ, ಜಾತ್ಯಾತೀತವಾಗಿ ಹಲವರು ಪಕ್ಷಕ್ಕೆ ಬೆಂಬಲ ಸೂಚಿಸುತ್ತಿರುವುದು ಸಂತೋಷ, ಅವರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇವೆ ಎಂದು ಜೆಡಿಎಸ್ ತಾಲ್ಲೂಕು ಗೌರವಾಧ್ಯಕ್ಷ ಕೆಂಪರಾಜು ಹೇಳಿದರು.

ಈ ವೇಳೆ ಜಿಲ್ಲಾ ಕಾರ್ಯದರ್ಶಿ ಮುನಿಪಾಪಯ್ಯ, ಗೌರವಾದ್ಯಕ್ಷ ರಂಗನಾಥ್, ಮುಖುಂಡರಾದ ಕೇಬಲ್ ಮುನಿರಾಜು, ಕುಮಾರ್ ಮಂಜುನಾಥ್, ಜಯರಾಮ್, ಮನು, ಅಂಜನ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

5 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

5 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

9 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

11 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

14 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

18 hours ago