ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಜೆ.ಡಿ.ಎಸ್ ಪಕ್ಷಕ್ಕೆ ಕನ್ನಡ ಪಕ್ಷ ಯಾವುದೇ ಷರತ್ತುಗಳಿಲ್ಲದೆ ಸಂಪೂರ್ಣವಾಗಿ ಬೆಂಬಲಿಸುವುದಾಗಿ ಕನ್ನಡ ಪಕ್ಷದ ರಾಜ್ಯ ಸಮಿತಿಯ ಸದಸ್ಯ ಸಂಜೀವ್ ನಾಯಕ್ ತಿಳಿಸಿದ್ದಾರೆ.
ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕನ್ನಡ ಪಕ್ಷ ಮೊದಲಿನಿಂದಲೂ ಕನ್ನಡ ನಾಡು, ನುಡಿ, ನೆಲ, ಜಲದ ಉಳಿವಿಗಾಗಿ ಹೊರಾಡಿದ ಪಕ್ಷವಾಗಿದೆ. ಜೊತೆಗೆ ಜ್ಯಾತ್ಯಾತೀತ ನಿಲುವಿಗೆ ಬದ್ದವಾಗಿದೆ. ಪ್ರಸ್ತುತ ರಾಜ್ಯ ಹಾಗೂ ರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ಜನ ಸಾಮಾನ್ಯರ ಬದುಕಿನ ಜೊತೆ ಆಟವಾಡುತ್ತಿರುವ ಭ್ರಷ್ಟ ಬಿಜೆ.ಪಿ ಪಕ್ಷವನ್ನು ಧಿಕ್ಕರಿಸುವ ಸಲುವಾಗಿ ತಾಲ್ಲೂಕು ಕನ್ನಡ ಪಕ್ಷ ಜ್ಯಾತ್ಯಾತೀತ ಹಾಗು ಪ್ರಾದೇಶಿಕ ನಿಲುವಿಗೆ ಹತ್ತಿರವಾಗಿರುವ ಜ್ಯಾತ್ಯಾತೀತ ಜನತಾದಳದ ಅಭ್ಯರ್ಥಿ ಬಿ.ಮುನೇಗೌಡರನ್ನು ಬೆಂಬಲಿಸಿ ಚುನಾವಣೆಯಲ್ಲಿ ದುಡಿಯಲಾಗುವುದು ಎಂದರು.
ಕನ್ನಡ ಪಕ್ಷದ ಹಿರಿಯ ಮುಖಂಡ ಡಿ.ಪಿ ಆಂಜಿನೇಯ ಮಾತನಾಡಿ ನಾಲ್ಕು ದಶಕಗಳ ಹಿನ್ನೆಲೆ ಇರುವ ಕನ್ನಡ ಪಕ್ಷ ಮೊದಲಿನಿಂದಲೂ ಬಡವರ, ದೀನ ದಲಿತರ ಪರವಾಗಿರುವ ಪಕ್ಷ. ಸ್ಥಳೀಯ ವಿಚಾರಗಳಿಗೆ ಅನುಸಾರವಾಗಿ ತಾಲ್ಲೂಕಿನ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಂದರ್ಭಾನುಸಾರ ಕೆಲವು ಪಕ್ಷಗಳ ಜೊತೆ ಕನ್ನಡ ಪಕ್ಷ ಹೊಂದಾಣಿಕೆ ಮಾಡಿಕೊಂಡು ಬಂದಿದೆ . ಪ್ರಸ್ತುತ ಪ್ರಾದೇಶಿಕ ಚಿಂತನೆಯಲ್ಲಿರುವ ಜಾತ್ಯಾತೀತ ಜನತಾ ದಳಕ್ಕೆ ಬೆಂಬಲಿಸುವ ಸಲುವಾಗಿ ಕನ್ನಡ ಪಕ್ಷದ ಸರ್ವ ಸಮ್ಮತದ ತೀರ್ಮಾನಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಮುನೇಗೌಡರಿಗೆ ಕನ್ನಡ ಪಕ್ಷ ಬೇಷರತ್ತು ಬೆಂಬಲ ಸೂಚಿಸಿದೆ ಎಂದು ಹೇಳಿದರು.
ಪ್ರಾದೇಶಿಕ ತತ್ವದಡಿ ಮತ್ತು ಮೂರು ಬಾರಿ ಸೋತಿರುವ ಮುನೇಗೌಡ ಜಕ್ಕಲಮಡಗು ಬತ್ತಿಹೋಗಿ ನೀರಿಗೆ ಹಾಹಾಕಾರ ಉಂಟಾಗಿದ್ದ ಕಾಲದಲ್ಲಿ ಜನತೆಗೆ ನೀರಿನ ವ್ಯವಸ್ಥೆ ಮಾಡಿದ್ದಾರೆ. ಕನ್ನಡ ಪಕ್ಷ ಪದಾಧಿಕಾರಿಗಳ ಸರ್ವಸಮ್ಮತದೊಂದಿಗೆ ಈ ಬಾರಿ ಜೆಡಿಎಸ್ ಗೆ ಬೆಂಬಲ ಸೂಚಿಸಲಾಗಿದೆ ಎಂದು ಕನ್ನಡ ಪಕ್ಷದ ತಾಲ್ಲೂಕು ಅಧ್ಯಕ್ಷ ಡಿ.ವೆಂಕಟೇಶ್ ಹೇಳಿದರು.
ಜೆಡಿಎಸ್ ಸಿದ್ದಾಂತ ಮತ್ತು ಸ್ಥಳೀಯ ರಾಜಕೀಯ ಬದಲಾವಣೆಗಳಿಂದಾಗಿ ಧರ್ಮಾತೀತವಾಗಿ, ಜಾತ್ಯಾತೀತವಾಗಿ ಹಲವರು ಪಕ್ಷಕ್ಕೆ ಬೆಂಬಲ ಸೂಚಿಸುತ್ತಿರುವುದು ಸಂತೋಷ, ಅವರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇವೆ ಎಂದು ಜೆಡಿಎಸ್ ತಾಲ್ಲೂಕು ಗೌರವಾಧ್ಯಕ್ಷ ಕೆಂಪರಾಜು ಹೇಳಿದರು.
ಈ ವೇಳೆ ಜಿಲ್ಲಾ ಕಾರ್ಯದರ್ಶಿ ಮುನಿಪಾಪಯ್ಯ, ಗೌರವಾದ್ಯಕ್ಷ ರಂಗನಾಥ್, ಮುಖುಂಡರಾದ ಕೇಬಲ್ ಮುನಿರಾಜು, ಕುಮಾರ್ ಮಂಜುನಾಥ್, ಜಯರಾಮ್, ಮನು, ಅಂಜನ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…