ಜೆಡಿಎಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ ಕನ್ನಡ ಪಕ್ಷ: ನೆಲ, ಜಲ, ಭಾಷೆಯ ರಕ್ಷಣೆಗಾಗಿ ಪ್ರಾದೇಶಿಕ ಪಕ್ಷಕ್ಕೆ ಬೆಂಬಲ – ಹಿರಿಯ ಕನ್ನಡ ಪರ ಹೋರಾಟಗಾರ ಸಂಜೀವ್ ನಾಯಕ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಜೆ.ಡಿ.ಎಸ್ ಪಕ್ಷಕ್ಕೆ ಕನ್ನಡ ಪಕ್ಷ ಯಾವುದೇ ಷರತ್ತುಗಳಿಲ್ಲದೆ ಸಂಪೂರ್ಣವಾಗಿ ಬೆಂಬಲಿಸುವುದಾಗಿ ಕನ್ನಡ ಪಕ್ಷದ ರಾಜ್ಯ ಸಮಿತಿಯ ಸದಸ್ಯ ಸಂಜೀವ್ ನಾಯಕ್ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕನ್ನಡ ಪಕ್ಷ ಮೊದಲಿನಿಂದಲೂ ಕನ್ನಡ ನಾಡು, ನುಡಿ, ನೆಲ, ಜಲದ ಉಳಿವಿಗಾಗಿ ಹೊರಾಡಿದ‌ ಪಕ್ಷವಾಗಿದೆ. ಜೊತೆಗೆ ಜ್ಯಾತ್ಯಾತೀತ ನಿಲುವಿಗೆ ಬದ್ದವಾಗಿದೆ. ಪ್ರಸ್ತುತ ರಾಜ್ಯ ಹಾಗೂ ರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ಜನ ಸಾಮಾನ್ಯರ ಬದುಕಿನ ಜೊತೆ ಆಟವಾಡುತ್ತಿರುವ ಭ್ರಷ್ಟ ಬಿಜೆ.ಪಿ ಪಕ್ಷವನ್ನು ಧಿಕ್ಕರಿಸುವ ಸಲುವಾಗಿ ತಾಲ್ಲೂಕು ಕನ್ನಡ ಪಕ್ಷ ಜ್ಯಾತ್ಯಾತೀತ ಹಾಗು ಪ್ರಾದೇಶಿಕ ನಿಲುವಿಗೆ ಹತ್ತಿರವಾಗಿರುವ ಜ್ಯಾತ್ಯಾತೀತ ಜನತಾದಳದ ಅಭ್ಯರ್ಥಿ ಬಿ.ಮುನೇಗೌಡರನ್ನು ಬೆಂಬಲಿಸಿ ಚುನಾವಣೆಯಲ್ಲಿ ದುಡಿಯಲಾಗುವುದು ಎಂದರು.

ಕನ್ನಡ ಪಕ್ಷದ ಹಿರಿಯ ಮುಖಂಡ ಡಿ.ಪಿ ಆಂಜಿನೇಯ ಮಾತನಾಡಿ ನಾಲ್ಕು ದಶಕಗಳ ಹಿನ್ನೆಲೆ ಇರುವ ಕನ್ನಡ ಪಕ್ಷ ಮೊದಲಿನಿಂದಲೂ ಬಡವರ, ದೀನ ದಲಿತರ ಪರವಾಗಿರುವ ಪಕ್ಷ. ಸ್ಥಳೀಯ ವಿಚಾರಗಳಿಗೆ ಅನುಸಾರವಾಗಿ ತಾಲ್ಲೂಕಿನ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಂದರ್ಭಾನುಸಾರ ಕೆಲವು ಪಕ್ಷಗಳ ಜೊತೆ ಕನ್ನಡ ಪಕ್ಷ ಹೊಂದಾಣಿಕೆ ಮಾಡಿಕೊಂಡು ಬಂದಿದೆ . ಪ್ರಸ್ತುತ ಪ್ರಾದೇಶಿಕ ಚಿಂತನೆಯಲ್ಲಿರುವ ಜಾತ್ಯಾತೀತ ಜನತಾ ದಳಕ್ಕೆ ಬೆಂಬಲಿಸುವ ಸಲುವಾಗಿ ಕನ್ನಡ ಪಕ್ಷದ ಸರ್ವ ಸಮ್ಮತದ ತೀರ್ಮಾನಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಮುನೇಗೌಡರಿಗೆ ಕನ್ನಡ ಪಕ್ಷ ಬೇಷರತ್ತು ಬೆಂಬಲ ಸೂಚಿಸಿದೆ ಎಂದು ಹೇಳಿದರು.

ಪ್ರಾದೇಶಿಕ ತತ್ವದಡಿ ಮತ್ತು ಮೂರು ಬಾರಿ ಸೋತಿರುವ ಮುನೇಗೌಡ ಜಕ್ಕಲಮಡಗು ಬತ್ತಿಹೋಗಿ ನೀರಿಗೆ ಹಾಹಾಕಾರ ಉಂಟಾಗಿದ್ದ ಕಾಲದಲ್ಲಿ ಜನತೆಗೆ ನೀರಿನ ವ್ಯವಸ್ಥೆ ಮಾಡಿದ್ದಾರೆ. ಕನ್ನಡ ಪಕ್ಷ ಪದಾಧಿಕಾರಿಗಳ ಸರ್ವಸಮ್ಮತದೊಂದಿಗೆ ಈ ಬಾರಿ ಜೆಡಿಎಸ್ ಗೆ ಬೆಂಬಲ ಸೂಚಿಸಲಾಗಿದೆ ಎಂದು ಕನ್ನಡ ಪಕ್ಷದ ತಾಲ್ಲೂಕು ಅಧ್ಯಕ್ಷ ಡಿ.ವೆಂಕಟೇಶ್ ಹೇಳಿದರು.

ಜೆಡಿಎಸ್ ಸಿದ್ದಾಂತ ಮತ್ತು ಸ್ಥಳೀಯ ರಾಜಕೀಯ ಬದಲಾವಣೆಗಳಿಂದಾಗಿ ಧರ್ಮಾತೀತವಾಗಿ, ಜಾತ್ಯಾತೀತವಾಗಿ ಹಲವರು ಪಕ್ಷಕ್ಕೆ ಬೆಂಬಲ ಸೂಚಿಸುತ್ತಿರುವುದು ಸಂತೋಷ, ಅವರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇವೆ ಎಂದು ಜೆಡಿಎಸ್ ತಾಲ್ಲೂಕು ಗೌರವಾಧ್ಯಕ್ಷ ಕೆಂಪರಾಜು ಹೇಳಿದರು.

ಈ ವೇಳೆ ಜಿಲ್ಲಾ ಕಾರ್ಯದರ್ಶಿ ಮುನಿಪಾಪಯ್ಯ, ಗೌರವಾದ್ಯಕ್ಷ ರಂಗನಾಥ್, ಮುಖುಂಡರಾದ ಕೇಬಲ್ ಮುನಿರಾಜು, ಕುಮಾರ್ ಮಂಜುನಾಥ್, ಜಯರಾಮ್, ಮನು, ಅಂಜನ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು

Ramesh Babu

Journalist

Recent Posts

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

7 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

8 hours ago

“ಬದುಕಿನ ಬೆಳದಿಂಗಳು”

ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…

9 hours ago

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…

9 hours ago

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…

11 hours ago

ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…

11 hours ago