ಜೆಡಿಎಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ ಕನ್ನಡ ಪಕ್ಷ: ನೆಲ, ಜಲ, ಭಾಷೆಯ ರಕ್ಷಣೆಗಾಗಿ ಪ್ರಾದೇಶಿಕ ಪಕ್ಷಕ್ಕೆ ಬೆಂಬಲ – ಹಿರಿಯ ಕನ್ನಡ ಪರ ಹೋರಾಟಗಾರ ಸಂಜೀವ್ ನಾಯಕ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಜೆ.ಡಿ.ಎಸ್ ಪಕ್ಷಕ್ಕೆ ಕನ್ನಡ ಪಕ್ಷ ಯಾವುದೇ ಷರತ್ತುಗಳಿಲ್ಲದೆ ಸಂಪೂರ್ಣವಾಗಿ ಬೆಂಬಲಿಸುವುದಾಗಿ ಕನ್ನಡ ಪಕ್ಷದ ರಾಜ್ಯ ಸಮಿತಿಯ ಸದಸ್ಯ ಸಂಜೀವ್ ನಾಯಕ್ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕನ್ನಡ ಪಕ್ಷ ಮೊದಲಿನಿಂದಲೂ ಕನ್ನಡ ನಾಡು, ನುಡಿ, ನೆಲ, ಜಲದ ಉಳಿವಿಗಾಗಿ ಹೊರಾಡಿದ‌ ಪಕ್ಷವಾಗಿದೆ. ಜೊತೆಗೆ ಜ್ಯಾತ್ಯಾತೀತ ನಿಲುವಿಗೆ ಬದ್ದವಾಗಿದೆ. ಪ್ರಸ್ತುತ ರಾಜ್ಯ ಹಾಗೂ ರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ಜನ ಸಾಮಾನ್ಯರ ಬದುಕಿನ ಜೊತೆ ಆಟವಾಡುತ್ತಿರುವ ಭ್ರಷ್ಟ ಬಿಜೆ.ಪಿ ಪಕ್ಷವನ್ನು ಧಿಕ್ಕರಿಸುವ ಸಲುವಾಗಿ ತಾಲ್ಲೂಕು ಕನ್ನಡ ಪಕ್ಷ ಜ್ಯಾತ್ಯಾತೀತ ಹಾಗು ಪ್ರಾದೇಶಿಕ ನಿಲುವಿಗೆ ಹತ್ತಿರವಾಗಿರುವ ಜ್ಯಾತ್ಯಾತೀತ ಜನತಾದಳದ ಅಭ್ಯರ್ಥಿ ಬಿ.ಮುನೇಗೌಡರನ್ನು ಬೆಂಬಲಿಸಿ ಚುನಾವಣೆಯಲ್ಲಿ ದುಡಿಯಲಾಗುವುದು ಎಂದರು.

ಕನ್ನಡ ಪಕ್ಷದ ಹಿರಿಯ ಮುಖಂಡ ಡಿ.ಪಿ ಆಂಜಿನೇಯ ಮಾತನಾಡಿ ನಾಲ್ಕು ದಶಕಗಳ ಹಿನ್ನೆಲೆ ಇರುವ ಕನ್ನಡ ಪಕ್ಷ ಮೊದಲಿನಿಂದಲೂ ಬಡವರ, ದೀನ ದಲಿತರ ಪರವಾಗಿರುವ ಪಕ್ಷ. ಸ್ಥಳೀಯ ವಿಚಾರಗಳಿಗೆ ಅನುಸಾರವಾಗಿ ತಾಲ್ಲೂಕಿನ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಂದರ್ಭಾನುಸಾರ ಕೆಲವು ಪಕ್ಷಗಳ ಜೊತೆ ಕನ್ನಡ ಪಕ್ಷ ಹೊಂದಾಣಿಕೆ ಮಾಡಿಕೊಂಡು ಬಂದಿದೆ . ಪ್ರಸ್ತುತ ಪ್ರಾದೇಶಿಕ ಚಿಂತನೆಯಲ್ಲಿರುವ ಜಾತ್ಯಾತೀತ ಜನತಾ ದಳಕ್ಕೆ ಬೆಂಬಲಿಸುವ ಸಲುವಾಗಿ ಕನ್ನಡ ಪಕ್ಷದ ಸರ್ವ ಸಮ್ಮತದ ತೀರ್ಮಾನಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಮುನೇಗೌಡರಿಗೆ ಕನ್ನಡ ಪಕ್ಷ ಬೇಷರತ್ತು ಬೆಂಬಲ ಸೂಚಿಸಿದೆ ಎಂದು ಹೇಳಿದರು.

ಪ್ರಾದೇಶಿಕ ತತ್ವದಡಿ ಮತ್ತು ಮೂರು ಬಾರಿ ಸೋತಿರುವ ಮುನೇಗೌಡ ಜಕ್ಕಲಮಡಗು ಬತ್ತಿಹೋಗಿ ನೀರಿಗೆ ಹಾಹಾಕಾರ ಉಂಟಾಗಿದ್ದ ಕಾಲದಲ್ಲಿ ಜನತೆಗೆ ನೀರಿನ ವ್ಯವಸ್ಥೆ ಮಾಡಿದ್ದಾರೆ. ಕನ್ನಡ ಪಕ್ಷ ಪದಾಧಿಕಾರಿಗಳ ಸರ್ವಸಮ್ಮತದೊಂದಿಗೆ ಈ ಬಾರಿ ಜೆಡಿಎಸ್ ಗೆ ಬೆಂಬಲ ಸೂಚಿಸಲಾಗಿದೆ ಎಂದು ಕನ್ನಡ ಪಕ್ಷದ ತಾಲ್ಲೂಕು ಅಧ್ಯಕ್ಷ ಡಿ.ವೆಂಕಟೇಶ್ ಹೇಳಿದರು.

ಜೆಡಿಎಸ್ ಸಿದ್ದಾಂತ ಮತ್ತು ಸ್ಥಳೀಯ ರಾಜಕೀಯ ಬದಲಾವಣೆಗಳಿಂದಾಗಿ ಧರ್ಮಾತೀತವಾಗಿ, ಜಾತ್ಯಾತೀತವಾಗಿ ಹಲವರು ಪಕ್ಷಕ್ಕೆ ಬೆಂಬಲ ಸೂಚಿಸುತ್ತಿರುವುದು ಸಂತೋಷ, ಅವರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇವೆ ಎಂದು ಜೆಡಿಎಸ್ ತಾಲ್ಲೂಕು ಗೌರವಾಧ್ಯಕ್ಷ ಕೆಂಪರಾಜು ಹೇಳಿದರು.

ಈ ವೇಳೆ ಜಿಲ್ಲಾ ಕಾರ್ಯದರ್ಶಿ ಮುನಿಪಾಪಯ್ಯ, ಗೌರವಾದ್ಯಕ್ಷ ರಂಗನಾಥ್, ಮುಖುಂಡರಾದ ಕೇಬಲ್ ಮುನಿರಾಜು, ಕುಮಾರ್ ಮಂಜುನಾಥ್, ಜಯರಾಮ್, ಮನು, ಅಂಜನ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

2 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

6 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

21 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

22 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago