ಜೆಡಿಎಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ ಕನ್ನಡ ಪಕ್ಷ: ನೆಲ, ಜಲ, ಭಾಷೆಯ ರಕ್ಷಣೆಗಾಗಿ ಪ್ರಾದೇಶಿಕ ಪಕ್ಷಕ್ಕೆ ಬೆಂಬಲ – ಹಿರಿಯ ಕನ್ನಡ ಪರ ಹೋರಾಟಗಾರ ಸಂಜೀವ್ ನಾಯಕ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಜೆ.ಡಿ.ಎಸ್ ಪಕ್ಷಕ್ಕೆ ಕನ್ನಡ ಪಕ್ಷ ಯಾವುದೇ ಷರತ್ತುಗಳಿಲ್ಲದೆ ಸಂಪೂರ್ಣವಾಗಿ ಬೆಂಬಲಿಸುವುದಾಗಿ ಕನ್ನಡ ಪಕ್ಷದ ರಾಜ್ಯ ಸಮಿತಿಯ ಸದಸ್ಯ ಸಂಜೀವ್ ನಾಯಕ್ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕನ್ನಡ ಪಕ್ಷ ಮೊದಲಿನಿಂದಲೂ ಕನ್ನಡ ನಾಡು, ನುಡಿ, ನೆಲ, ಜಲದ ಉಳಿವಿಗಾಗಿ ಹೊರಾಡಿದ‌ ಪಕ್ಷವಾಗಿದೆ. ಜೊತೆಗೆ ಜ್ಯಾತ್ಯಾತೀತ ನಿಲುವಿಗೆ ಬದ್ದವಾಗಿದೆ. ಪ್ರಸ್ತುತ ರಾಜ್ಯ ಹಾಗೂ ರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ಜನ ಸಾಮಾನ್ಯರ ಬದುಕಿನ ಜೊತೆ ಆಟವಾಡುತ್ತಿರುವ ಭ್ರಷ್ಟ ಬಿಜೆ.ಪಿ ಪಕ್ಷವನ್ನು ಧಿಕ್ಕರಿಸುವ ಸಲುವಾಗಿ ತಾಲ್ಲೂಕು ಕನ್ನಡ ಪಕ್ಷ ಜ್ಯಾತ್ಯಾತೀತ ಹಾಗು ಪ್ರಾದೇಶಿಕ ನಿಲುವಿಗೆ ಹತ್ತಿರವಾಗಿರುವ ಜ್ಯಾತ್ಯಾತೀತ ಜನತಾದಳದ ಅಭ್ಯರ್ಥಿ ಬಿ.ಮುನೇಗೌಡರನ್ನು ಬೆಂಬಲಿಸಿ ಚುನಾವಣೆಯಲ್ಲಿ ದುಡಿಯಲಾಗುವುದು ಎಂದರು.

ಕನ್ನಡ ಪಕ್ಷದ ಹಿರಿಯ ಮುಖಂಡ ಡಿ.ಪಿ ಆಂಜಿನೇಯ ಮಾತನಾಡಿ ನಾಲ್ಕು ದಶಕಗಳ ಹಿನ್ನೆಲೆ ಇರುವ ಕನ್ನಡ ಪಕ್ಷ ಮೊದಲಿನಿಂದಲೂ ಬಡವರ, ದೀನ ದಲಿತರ ಪರವಾಗಿರುವ ಪಕ್ಷ. ಸ್ಥಳೀಯ ವಿಚಾರಗಳಿಗೆ ಅನುಸಾರವಾಗಿ ತಾಲ್ಲೂಕಿನ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಂದರ್ಭಾನುಸಾರ ಕೆಲವು ಪಕ್ಷಗಳ ಜೊತೆ ಕನ್ನಡ ಪಕ್ಷ ಹೊಂದಾಣಿಕೆ ಮಾಡಿಕೊಂಡು ಬಂದಿದೆ . ಪ್ರಸ್ತುತ ಪ್ರಾದೇಶಿಕ ಚಿಂತನೆಯಲ್ಲಿರುವ ಜಾತ್ಯಾತೀತ ಜನತಾ ದಳಕ್ಕೆ ಬೆಂಬಲಿಸುವ ಸಲುವಾಗಿ ಕನ್ನಡ ಪಕ್ಷದ ಸರ್ವ ಸಮ್ಮತದ ತೀರ್ಮಾನಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಮುನೇಗೌಡರಿಗೆ ಕನ್ನಡ ಪಕ್ಷ ಬೇಷರತ್ತು ಬೆಂಬಲ ಸೂಚಿಸಿದೆ ಎಂದು ಹೇಳಿದರು.

ಪ್ರಾದೇಶಿಕ ತತ್ವದಡಿ ಮತ್ತು ಮೂರು ಬಾರಿ ಸೋತಿರುವ ಮುನೇಗೌಡ ಜಕ್ಕಲಮಡಗು ಬತ್ತಿಹೋಗಿ ನೀರಿಗೆ ಹಾಹಾಕಾರ ಉಂಟಾಗಿದ್ದ ಕಾಲದಲ್ಲಿ ಜನತೆಗೆ ನೀರಿನ ವ್ಯವಸ್ಥೆ ಮಾಡಿದ್ದಾರೆ. ಕನ್ನಡ ಪಕ್ಷ ಪದಾಧಿಕಾರಿಗಳ ಸರ್ವಸಮ್ಮತದೊಂದಿಗೆ ಈ ಬಾರಿ ಜೆಡಿಎಸ್ ಗೆ ಬೆಂಬಲ ಸೂಚಿಸಲಾಗಿದೆ ಎಂದು ಕನ್ನಡ ಪಕ್ಷದ ತಾಲ್ಲೂಕು ಅಧ್ಯಕ್ಷ ಡಿ.ವೆಂಕಟೇಶ್ ಹೇಳಿದರು.

ಜೆಡಿಎಸ್ ಸಿದ್ದಾಂತ ಮತ್ತು ಸ್ಥಳೀಯ ರಾಜಕೀಯ ಬದಲಾವಣೆಗಳಿಂದಾಗಿ ಧರ್ಮಾತೀತವಾಗಿ, ಜಾತ್ಯಾತೀತವಾಗಿ ಹಲವರು ಪಕ್ಷಕ್ಕೆ ಬೆಂಬಲ ಸೂಚಿಸುತ್ತಿರುವುದು ಸಂತೋಷ, ಅವರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇವೆ ಎಂದು ಜೆಡಿಎಸ್ ತಾಲ್ಲೂಕು ಗೌರವಾಧ್ಯಕ್ಷ ಕೆಂಪರಾಜು ಹೇಳಿದರು.

ಈ ವೇಳೆ ಜಿಲ್ಲಾ ಕಾರ್ಯದರ್ಶಿ ಮುನಿಪಾಪಯ್ಯ, ಗೌರವಾದ್ಯಕ್ಷ ರಂಗನಾಥ್, ಮುಖುಂಡರಾದ ಕೇಬಲ್ ಮುನಿರಾಜು, ಕುಮಾರ್ ಮಂಜುನಾಥ್, ಜಯರಾಮ್, ಮನು, ಅಂಜನ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

8 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

11 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

13 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago