ಜೆಡಿಎಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ ಕನ್ನಡ ಪಕ್ಷ: ನೆಲ, ಜಲ, ಭಾಷೆಯ ರಕ್ಷಣೆಗಾಗಿ ಪ್ರಾದೇಶಿಕ ಪಕ್ಷಕ್ಕೆ ಬೆಂಬಲ – ಹಿರಿಯ ಕನ್ನಡ ಪರ ಹೋರಾಟಗಾರ ಸಂಜೀವ್ ನಾಯಕ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಜೆ.ಡಿ.ಎಸ್ ಪಕ್ಷಕ್ಕೆ ಕನ್ನಡ ಪಕ್ಷ ಯಾವುದೇ ಷರತ್ತುಗಳಿಲ್ಲದೆ ಸಂಪೂರ್ಣವಾಗಿ ಬೆಂಬಲಿಸುವುದಾಗಿ ಕನ್ನಡ ಪಕ್ಷದ ರಾಜ್ಯ ಸಮಿತಿಯ ಸದಸ್ಯ ಸಂಜೀವ್ ನಾಯಕ್ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕನ್ನಡ ಪಕ್ಷ ಮೊದಲಿನಿಂದಲೂ ಕನ್ನಡ ನಾಡು, ನುಡಿ, ನೆಲ, ಜಲದ ಉಳಿವಿಗಾಗಿ ಹೊರಾಡಿದ‌ ಪಕ್ಷವಾಗಿದೆ. ಜೊತೆಗೆ ಜ್ಯಾತ್ಯಾತೀತ ನಿಲುವಿಗೆ ಬದ್ದವಾಗಿದೆ. ಪ್ರಸ್ತುತ ರಾಜ್ಯ ಹಾಗೂ ರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ಜನ ಸಾಮಾನ್ಯರ ಬದುಕಿನ ಜೊತೆ ಆಟವಾಡುತ್ತಿರುವ ಭ್ರಷ್ಟ ಬಿಜೆ.ಪಿ ಪಕ್ಷವನ್ನು ಧಿಕ್ಕರಿಸುವ ಸಲುವಾಗಿ ತಾಲ್ಲೂಕು ಕನ್ನಡ ಪಕ್ಷ ಜ್ಯಾತ್ಯಾತೀತ ಹಾಗು ಪ್ರಾದೇಶಿಕ ನಿಲುವಿಗೆ ಹತ್ತಿರವಾಗಿರುವ ಜ್ಯಾತ್ಯಾತೀತ ಜನತಾದಳದ ಅಭ್ಯರ್ಥಿ ಬಿ.ಮುನೇಗೌಡರನ್ನು ಬೆಂಬಲಿಸಿ ಚುನಾವಣೆಯಲ್ಲಿ ದುಡಿಯಲಾಗುವುದು ಎಂದರು.

ಕನ್ನಡ ಪಕ್ಷದ ಹಿರಿಯ ಮುಖಂಡ ಡಿ.ಪಿ ಆಂಜಿನೇಯ ಮಾತನಾಡಿ ನಾಲ್ಕು ದಶಕಗಳ ಹಿನ್ನೆಲೆ ಇರುವ ಕನ್ನಡ ಪಕ್ಷ ಮೊದಲಿನಿಂದಲೂ ಬಡವರ, ದೀನ ದಲಿತರ ಪರವಾಗಿರುವ ಪಕ್ಷ. ಸ್ಥಳೀಯ ವಿಚಾರಗಳಿಗೆ ಅನುಸಾರವಾಗಿ ತಾಲ್ಲೂಕಿನ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಂದರ್ಭಾನುಸಾರ ಕೆಲವು ಪಕ್ಷಗಳ ಜೊತೆ ಕನ್ನಡ ಪಕ್ಷ ಹೊಂದಾಣಿಕೆ ಮಾಡಿಕೊಂಡು ಬಂದಿದೆ . ಪ್ರಸ್ತುತ ಪ್ರಾದೇಶಿಕ ಚಿಂತನೆಯಲ್ಲಿರುವ ಜಾತ್ಯಾತೀತ ಜನತಾ ದಳಕ್ಕೆ ಬೆಂಬಲಿಸುವ ಸಲುವಾಗಿ ಕನ್ನಡ ಪಕ್ಷದ ಸರ್ವ ಸಮ್ಮತದ ತೀರ್ಮಾನಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಮುನೇಗೌಡರಿಗೆ ಕನ್ನಡ ಪಕ್ಷ ಬೇಷರತ್ತು ಬೆಂಬಲ ಸೂಚಿಸಿದೆ ಎಂದು ಹೇಳಿದರು.

ಪ್ರಾದೇಶಿಕ ತತ್ವದಡಿ ಮತ್ತು ಮೂರು ಬಾರಿ ಸೋತಿರುವ ಮುನೇಗೌಡ ಜಕ್ಕಲಮಡಗು ಬತ್ತಿಹೋಗಿ ನೀರಿಗೆ ಹಾಹಾಕಾರ ಉಂಟಾಗಿದ್ದ ಕಾಲದಲ್ಲಿ ಜನತೆಗೆ ನೀರಿನ ವ್ಯವಸ್ಥೆ ಮಾಡಿದ್ದಾರೆ. ಕನ್ನಡ ಪಕ್ಷ ಪದಾಧಿಕಾರಿಗಳ ಸರ್ವಸಮ್ಮತದೊಂದಿಗೆ ಈ ಬಾರಿ ಜೆಡಿಎಸ್ ಗೆ ಬೆಂಬಲ ಸೂಚಿಸಲಾಗಿದೆ ಎಂದು ಕನ್ನಡ ಪಕ್ಷದ ತಾಲ್ಲೂಕು ಅಧ್ಯಕ್ಷ ಡಿ.ವೆಂಕಟೇಶ್ ಹೇಳಿದರು.

ಜೆಡಿಎಸ್ ಸಿದ್ದಾಂತ ಮತ್ತು ಸ್ಥಳೀಯ ರಾಜಕೀಯ ಬದಲಾವಣೆಗಳಿಂದಾಗಿ ಧರ್ಮಾತೀತವಾಗಿ, ಜಾತ್ಯಾತೀತವಾಗಿ ಹಲವರು ಪಕ್ಷಕ್ಕೆ ಬೆಂಬಲ ಸೂಚಿಸುತ್ತಿರುವುದು ಸಂತೋಷ, ಅವರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇವೆ ಎಂದು ಜೆಡಿಎಸ್ ತಾಲ್ಲೂಕು ಗೌರವಾಧ್ಯಕ್ಷ ಕೆಂಪರಾಜು ಹೇಳಿದರು.

ಈ ವೇಳೆ ಜಿಲ್ಲಾ ಕಾರ್ಯದರ್ಶಿ ಮುನಿಪಾಪಯ್ಯ, ಗೌರವಾದ್ಯಕ್ಷ ರಂಗನಾಥ್, ಮುಖುಂಡರಾದ ಕೇಬಲ್ ಮುನಿರಾಜು, ಕುಮಾರ್ ಮಂಜುನಾಥ್, ಜಯರಾಮ್, ಮನು, ಅಂಜನ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

6 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

6 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

7 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

8 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

11 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

11 hours ago