ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕರುನಾಡ ಜನರಿಗೆ ಜೆಡಿಎಸ್ ಪರಿಹಾರ ಭರವಸೆ ಪತ್ರವನ್ನು ಬೆಂಗಳೂರಿನ ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ಬಿಡುಗಡೆ ಮಾಡಿದರು.
ಜೆಡಿಎಸ್ ಪರಿಹಾರ ಭರವಸೆ ಅಂಶಗಳು
1) ಮಕ್ಕಳಿಗೆ ಉಚಿತ ಶಿಕ್ಷಣ, ಉಚಿತ ಆರೋಗ್ಯದ ಭರವಸೆ.
2) ಗ್ಯಾಸ್ ಮೇಲೆ ಶೇ.50% ಸಬ್ಸಿಡಿ (5-10 ಸಿಲಿಂಡರ್ಗೆ ಸಬ್ಸಿಡಿ).
3) ರೈತರ ಮಕ್ಕಳ ಮದುವೆಗೆ 2 ಲಕ್ಷ ಸಹಾಯಧನ.
4) ವೃದ್ಧಾಪ್ಯ, ವಿಧವಾ ವೇತನ 900 ರೂ.ಯಿಂದ 2 ಸಾವಿರ ರೂ. ಹೆಚ್ಚಳ .
5)ಅಂಗನವಾಡಿ ಕಾರ್ಯಕರ್ತೆಯರಿಗೆ 5 ಸಾವಿರ ವೇತನ.
6)ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ನಿವೃತ್ತವಾದವ್ರಿಗೆ ಪಿಂಚಣಿ.
7)ಹಿರಿಯ ನಾಗರಿಕರಿಗೆ ಮಾಸಾಶನ 1200 ರೂ.ಯಿಂದ 5 ಸಾವಿರ ರೂ. ಏರಿಕೆ.
8)ವಿಶೇಷ ಚೇತನರಿಗೆ ಪಿಂಚಣಿ 600 ರೂ.ಯಿಂದ 2500 ರೂ.ಗೆ ಏರಿಕೆ.
9)ಸಾಮಾಜಿಕ ಭದ್ರತೆಗಳ ಮಾಸಾಶನ 5 ಸಾವಿರಕ್ಕೆ ಹೆಚ್ಚಳ.
10)ತೆಲಂಗಾಣ ಮಾದರಿಯಲ್ಲಿ ಕೃಷಿಬಂಧು ಯೋಜನೆ ಜಾರಿ.
11)6.8 ಲಕ್ಷ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್.
12)ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಆದ್ಯತೆ.
13)ಹಿಂದುಳಿದ 18 ವರ್ಷ ತುಂಬಿದ ವಿದ್ಯಾರ್ಥಿನಿಯರಿಗೆ ವಿದ್ಯುತ್ ಚಾಲಿತ ಮೊಪೆಡ್.
14)ಜಯದೇವ ಮಾದರಿ ಜಿಲ್ಲೆಗೊಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ .
15)ನಿಮ್ಹಾನ್ಸ್ ಮಾದರಿ 500 ಹಾಸಿಗೆಯುಳ್ಳ ಆಧುನಿಕ ನರವಿಜ್ಞಾನ ವೈದ್ಯಕೀಯ ಸಂಸ್ಥೆ .
16)ವೃತ್ತಿನಿರತ ವಕೀಲರಿಗೆ ರಕ್ಷಣೆ ಕಾಯ್ದೆ ಜಾರಿ.
17)ವಕೀಲರಿಗೆ ನೀಡುವ ಮಾಸಿಕ ಭತ್ಯೆ 2 ಸಾವಿರದಿಂದ 3 ಸಾವಿರಕ್ಕೆ ಏರಿಕೆ.
18)ಸಣ್ಣ ಉದ್ಯೋಗ ವ್ಯಾಪಾರ ನಡೆಸುವವರಿಗೆ 2 ಲಕ್ಷ ರೂ.ವರೆಗೆ ಸಹಾಯಧನ.
19)ಸಣ್ಣ ಉದ್ಯೋಗ ನಡೆಸುವ ಮಹಿಳಾ ಉದ್ಯಮಿಗಳಿಗೆ ಭದ್ರತೆ ರಹಿತ 2 ಕೋಟಿ ರೂ.ವರೆಗೆ ಬ್ಯಾಂಕ್ಗಳ ಮುಖೇನ ಸಾಲ.
20)ಒಂದು ವರ್ಷ ಕೌಶಲ್ಯ ತರಬೇತಿಯಲ್ಲಿ ತೊಡಗಿಸಿಕೊಳ್ಳುವ ಯುವಕ-ಯುವತಿಯರಿಗೆ ಮಾಸಿಕ 8 ಸಾವಿರ ರೂ.ಭತ್ಯೆ.
21)ರೈತ ಯುವಕರನ್ನು ಮದುವೆಯಾಗೋ ಯುವತಿಯರಿಗೆ 2 ಲಕ್ಷ ಪ್ರೋತ್ಸಾಹ ಧನ.
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…