ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕರುನಾಡ ಜನರಿಗೆ ಜೆಡಿಎಸ್ ಪರಿಹಾರ ಭರವಸೆ ಪತ್ರವನ್ನು ಬೆಂಗಳೂರಿನ ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ಬಿಡುಗಡೆ ಮಾಡಿದರು.
ಜೆಡಿಎಸ್ ಪರಿಹಾರ ಭರವಸೆ ಅಂಶಗಳು
1) ಮಕ್ಕಳಿಗೆ ಉಚಿತ ಶಿಕ್ಷಣ, ಉಚಿತ ಆರೋಗ್ಯದ ಭರವಸೆ.
2) ಗ್ಯಾಸ್ ಮೇಲೆ ಶೇ.50% ಸಬ್ಸಿಡಿ (5-10 ಸಿಲಿಂಡರ್ಗೆ ಸಬ್ಸಿಡಿ).
3) ರೈತರ ಮಕ್ಕಳ ಮದುವೆಗೆ 2 ಲಕ್ಷ ಸಹಾಯಧನ.
4) ವೃದ್ಧಾಪ್ಯ, ವಿಧವಾ ವೇತನ 900 ರೂ.ಯಿಂದ 2 ಸಾವಿರ ರೂ. ಹೆಚ್ಚಳ .
5)ಅಂಗನವಾಡಿ ಕಾರ್ಯಕರ್ತೆಯರಿಗೆ 5 ಸಾವಿರ ವೇತನ.
6)ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ನಿವೃತ್ತವಾದವ್ರಿಗೆ ಪಿಂಚಣಿ.
7)ಹಿರಿಯ ನಾಗರಿಕರಿಗೆ ಮಾಸಾಶನ 1200 ರೂ.ಯಿಂದ 5 ಸಾವಿರ ರೂ. ಏರಿಕೆ.
8)ವಿಶೇಷ ಚೇತನರಿಗೆ ಪಿಂಚಣಿ 600 ರೂ.ಯಿಂದ 2500 ರೂ.ಗೆ ಏರಿಕೆ.
9)ಸಾಮಾಜಿಕ ಭದ್ರತೆಗಳ ಮಾಸಾಶನ 5 ಸಾವಿರಕ್ಕೆ ಹೆಚ್ಚಳ.
10)ತೆಲಂಗಾಣ ಮಾದರಿಯಲ್ಲಿ ಕೃಷಿಬಂಧು ಯೋಜನೆ ಜಾರಿ.
11)6.8 ಲಕ್ಷ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್.
12)ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಆದ್ಯತೆ.
13)ಹಿಂದುಳಿದ 18 ವರ್ಷ ತುಂಬಿದ ವಿದ್ಯಾರ್ಥಿನಿಯರಿಗೆ ವಿದ್ಯುತ್ ಚಾಲಿತ ಮೊಪೆಡ್.
14)ಜಯದೇವ ಮಾದರಿ ಜಿಲ್ಲೆಗೊಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ .
15)ನಿಮ್ಹಾನ್ಸ್ ಮಾದರಿ 500 ಹಾಸಿಗೆಯುಳ್ಳ ಆಧುನಿಕ ನರವಿಜ್ಞಾನ ವೈದ್ಯಕೀಯ ಸಂಸ್ಥೆ .
16)ವೃತ್ತಿನಿರತ ವಕೀಲರಿಗೆ ರಕ್ಷಣೆ ಕಾಯ್ದೆ ಜಾರಿ.
17)ವಕೀಲರಿಗೆ ನೀಡುವ ಮಾಸಿಕ ಭತ್ಯೆ 2 ಸಾವಿರದಿಂದ 3 ಸಾವಿರಕ್ಕೆ ಏರಿಕೆ.
18)ಸಣ್ಣ ಉದ್ಯೋಗ ವ್ಯಾಪಾರ ನಡೆಸುವವರಿಗೆ 2 ಲಕ್ಷ ರೂ.ವರೆಗೆ ಸಹಾಯಧನ.
19)ಸಣ್ಣ ಉದ್ಯೋಗ ನಡೆಸುವ ಮಹಿಳಾ ಉದ್ಯಮಿಗಳಿಗೆ ಭದ್ರತೆ ರಹಿತ 2 ಕೋಟಿ ರೂ.ವರೆಗೆ ಬ್ಯಾಂಕ್ಗಳ ಮುಖೇನ ಸಾಲ.
20)ಒಂದು ವರ್ಷ ಕೌಶಲ್ಯ ತರಬೇತಿಯಲ್ಲಿ ತೊಡಗಿಸಿಕೊಳ್ಳುವ ಯುವಕ-ಯುವತಿಯರಿಗೆ ಮಾಸಿಕ 8 ಸಾವಿರ ರೂ.ಭತ್ಯೆ.
21)ರೈತ ಯುವಕರನ್ನು ಮದುವೆಯಾಗೋ ಯುವತಿಯರಿಗೆ 2 ಲಕ್ಷ ಪ್ರೋತ್ಸಾಹ ಧನ.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…