ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕರುನಾಡ ಜನರಿಗೆ ಜೆಡಿಎಸ್ ಪರಿಹಾರ ಭರವಸೆ ಪತ್ರವನ್ನು ಬೆಂಗಳೂರಿನ ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ಬಿಡುಗಡೆ ಮಾಡಿದರು.
ಜೆಡಿಎಸ್ ಪರಿಹಾರ ಭರವಸೆ ಅಂಶಗಳು
1) ಮಕ್ಕಳಿಗೆ ಉಚಿತ ಶಿಕ್ಷಣ, ಉಚಿತ ಆರೋಗ್ಯದ ಭರವಸೆ.
2) ಗ್ಯಾಸ್ ಮೇಲೆ ಶೇ.50% ಸಬ್ಸಿಡಿ (5-10 ಸಿಲಿಂಡರ್ಗೆ ಸಬ್ಸಿಡಿ).
3) ರೈತರ ಮಕ್ಕಳ ಮದುವೆಗೆ 2 ಲಕ್ಷ ಸಹಾಯಧನ.
4) ವೃದ್ಧಾಪ್ಯ, ವಿಧವಾ ವೇತನ 900 ರೂ.ಯಿಂದ 2 ಸಾವಿರ ರೂ. ಹೆಚ್ಚಳ .
5)ಅಂಗನವಾಡಿ ಕಾರ್ಯಕರ್ತೆಯರಿಗೆ 5 ಸಾವಿರ ವೇತನ.
6)ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ನಿವೃತ್ತವಾದವ್ರಿಗೆ ಪಿಂಚಣಿ.
7)ಹಿರಿಯ ನಾಗರಿಕರಿಗೆ ಮಾಸಾಶನ 1200 ರೂ.ಯಿಂದ 5 ಸಾವಿರ ರೂ. ಏರಿಕೆ.
8)ವಿಶೇಷ ಚೇತನರಿಗೆ ಪಿಂಚಣಿ 600 ರೂ.ಯಿಂದ 2500 ರೂ.ಗೆ ಏರಿಕೆ.
9)ಸಾಮಾಜಿಕ ಭದ್ರತೆಗಳ ಮಾಸಾಶನ 5 ಸಾವಿರಕ್ಕೆ ಹೆಚ್ಚಳ.
10)ತೆಲಂಗಾಣ ಮಾದರಿಯಲ್ಲಿ ಕೃಷಿಬಂಧು ಯೋಜನೆ ಜಾರಿ.
11)6.8 ಲಕ್ಷ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್.
12)ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಆದ್ಯತೆ.
13)ಹಿಂದುಳಿದ 18 ವರ್ಷ ತುಂಬಿದ ವಿದ್ಯಾರ್ಥಿನಿಯರಿಗೆ ವಿದ್ಯುತ್ ಚಾಲಿತ ಮೊಪೆಡ್.
14)ಜಯದೇವ ಮಾದರಿ ಜಿಲ್ಲೆಗೊಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ .
15)ನಿಮ್ಹಾನ್ಸ್ ಮಾದರಿ 500 ಹಾಸಿಗೆಯುಳ್ಳ ಆಧುನಿಕ ನರವಿಜ್ಞಾನ ವೈದ್ಯಕೀಯ ಸಂಸ್ಥೆ .
16)ವೃತ್ತಿನಿರತ ವಕೀಲರಿಗೆ ರಕ್ಷಣೆ ಕಾಯ್ದೆ ಜಾರಿ.
17)ವಕೀಲರಿಗೆ ನೀಡುವ ಮಾಸಿಕ ಭತ್ಯೆ 2 ಸಾವಿರದಿಂದ 3 ಸಾವಿರಕ್ಕೆ ಏರಿಕೆ.
18)ಸಣ್ಣ ಉದ್ಯೋಗ ವ್ಯಾಪಾರ ನಡೆಸುವವರಿಗೆ 2 ಲಕ್ಷ ರೂ.ವರೆಗೆ ಸಹಾಯಧನ.
19)ಸಣ್ಣ ಉದ್ಯೋಗ ನಡೆಸುವ ಮಹಿಳಾ ಉದ್ಯಮಿಗಳಿಗೆ ಭದ್ರತೆ ರಹಿತ 2 ಕೋಟಿ ರೂ.ವರೆಗೆ ಬ್ಯಾಂಕ್ಗಳ ಮುಖೇನ ಸಾಲ.
20)ಒಂದು ವರ್ಷ ಕೌಶಲ್ಯ ತರಬೇತಿಯಲ್ಲಿ ತೊಡಗಿಸಿಕೊಳ್ಳುವ ಯುವಕ-ಯುವತಿಯರಿಗೆ ಮಾಸಿಕ 8 ಸಾವಿರ ರೂ.ಭತ್ಯೆ.
21)ರೈತ ಯುವಕರನ್ನು ಮದುವೆಯಾಗೋ ಯುವತಿಯರಿಗೆ 2 ಲಕ್ಷ ಪ್ರೋತ್ಸಾಹ ಧನ.
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…