ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕರುನಾಡ ಜನರಿಗೆ ಜೆಡಿಎಸ್ ಪರಿಹಾರ ಭರವಸೆ ಪತ್ರವನ್ನು ಬೆಂಗಳೂರಿನ ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ಬಿಡುಗಡೆ ಮಾಡಿದರು.
ಜೆಡಿಎಸ್ ಪರಿಹಾರ ಭರವಸೆ ಅಂಶಗಳು
1) ಮಕ್ಕಳಿಗೆ ಉಚಿತ ಶಿಕ್ಷಣ, ಉಚಿತ ಆರೋಗ್ಯದ ಭರವಸೆ.
2) ಗ್ಯಾಸ್ ಮೇಲೆ ಶೇ.50% ಸಬ್ಸಿಡಿ (5-10 ಸಿಲಿಂಡರ್ಗೆ ಸಬ್ಸಿಡಿ).
3) ರೈತರ ಮಕ್ಕಳ ಮದುವೆಗೆ 2 ಲಕ್ಷ ಸಹಾಯಧನ.
4) ವೃದ್ಧಾಪ್ಯ, ವಿಧವಾ ವೇತನ 900 ರೂ.ಯಿಂದ 2 ಸಾವಿರ ರೂ. ಹೆಚ್ಚಳ .
5)ಅಂಗನವಾಡಿ ಕಾರ್ಯಕರ್ತೆಯರಿಗೆ 5 ಸಾವಿರ ವೇತನ.
6)ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ನಿವೃತ್ತವಾದವ್ರಿಗೆ ಪಿಂಚಣಿ.
7)ಹಿರಿಯ ನಾಗರಿಕರಿಗೆ ಮಾಸಾಶನ 1200 ರೂ.ಯಿಂದ 5 ಸಾವಿರ ರೂ. ಏರಿಕೆ.
8)ವಿಶೇಷ ಚೇತನರಿಗೆ ಪಿಂಚಣಿ 600 ರೂ.ಯಿಂದ 2500 ರೂ.ಗೆ ಏರಿಕೆ.
9)ಸಾಮಾಜಿಕ ಭದ್ರತೆಗಳ ಮಾಸಾಶನ 5 ಸಾವಿರಕ್ಕೆ ಹೆಚ್ಚಳ.
10)ತೆಲಂಗಾಣ ಮಾದರಿಯಲ್ಲಿ ಕೃಷಿಬಂಧು ಯೋಜನೆ ಜಾರಿ.
11)6.8 ಲಕ್ಷ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್.
12)ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಆದ್ಯತೆ.
13)ಹಿಂದುಳಿದ 18 ವರ್ಷ ತುಂಬಿದ ವಿದ್ಯಾರ್ಥಿನಿಯರಿಗೆ ವಿದ್ಯುತ್ ಚಾಲಿತ ಮೊಪೆಡ್.
14)ಜಯದೇವ ಮಾದರಿ ಜಿಲ್ಲೆಗೊಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ .
15)ನಿಮ್ಹಾನ್ಸ್ ಮಾದರಿ 500 ಹಾಸಿಗೆಯುಳ್ಳ ಆಧುನಿಕ ನರವಿಜ್ಞಾನ ವೈದ್ಯಕೀಯ ಸಂಸ್ಥೆ .
16)ವೃತ್ತಿನಿರತ ವಕೀಲರಿಗೆ ರಕ್ಷಣೆ ಕಾಯ್ದೆ ಜಾರಿ.
17)ವಕೀಲರಿಗೆ ನೀಡುವ ಮಾಸಿಕ ಭತ್ಯೆ 2 ಸಾವಿರದಿಂದ 3 ಸಾವಿರಕ್ಕೆ ಏರಿಕೆ.
18)ಸಣ್ಣ ಉದ್ಯೋಗ ವ್ಯಾಪಾರ ನಡೆಸುವವರಿಗೆ 2 ಲಕ್ಷ ರೂ.ವರೆಗೆ ಸಹಾಯಧನ.
19)ಸಣ್ಣ ಉದ್ಯೋಗ ನಡೆಸುವ ಮಹಿಳಾ ಉದ್ಯಮಿಗಳಿಗೆ ಭದ್ರತೆ ರಹಿತ 2 ಕೋಟಿ ರೂ.ವರೆಗೆ ಬ್ಯಾಂಕ್ಗಳ ಮುಖೇನ ಸಾಲ.
20)ಒಂದು ವರ್ಷ ಕೌಶಲ್ಯ ತರಬೇತಿಯಲ್ಲಿ ತೊಡಗಿಸಿಕೊಳ್ಳುವ ಯುವಕ-ಯುವತಿಯರಿಗೆ ಮಾಸಿಕ 8 ಸಾವಿರ ರೂ.ಭತ್ಯೆ.
21)ರೈತ ಯುವಕರನ್ನು ಮದುವೆಯಾಗೋ ಯುವತಿಯರಿಗೆ 2 ಲಕ್ಷ ಪ್ರೋತ್ಸಾಹ ಧನ.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…