Categories: ರಾಜ್ಯ

ಜೆಡಿಎಸ್ ಪರಿಹಾರ ಭರವಸೆ ಪತ್ರ ಬಿಡುಗಡೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಂದ ಬಿಡುಗಡೆ

 

ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕರುನಾಡ ಜನರಿಗೆ ಜೆಡಿಎಸ್ ಪರಿಹಾರ ಭರವಸೆ ಪತ್ರವನ್ನು ಬೆಂಗಳೂರಿನ ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ಬಿಡುಗಡೆ ಮಾಡಿದರು.

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ, ಜನತಾ ಪ್ರಣಾಳಿಕೆ ಕರುಡು ರಚನಾ ಸಮಿತಿಯ ಅಧ್ಯಕ್ಷರಾದ ಬಿ.ಎಂ.ಫಾರೂಕ್, ಸದಸ್ಯರಾದ ಬಂಡೆಪ್ಪ ಕಾಶೆಂಪೂರ್, ಕುಪೇಂದ್ರ ರೆಡ್ಡಿ, ಕೆ.ಎನ್.ತಿಪ್ಪೇಸ್ವಾಮಿ ಅವರು ಉಪಸ್ಥಿತರಿದ್ದರು.

ಜೆಡಿಎಸ್ ಪರಿಹಾರ ಭರವಸೆ ಅಂಶಗಳು

1) ಮಕ್ಕಳಿಗೆ ಉಚಿತ ಶಿಕ್ಷಣ, ಉಚಿತ ಆರೋಗ್ಯದ ಭರವಸೆ.

2) ಗ್ಯಾಸ್ ಮೇಲೆ ಶೇ.50% ಸಬ್ಸಿಡಿ (5-10 ಸಿಲಿಂಡರ್​ಗೆ ಸಬ್ಸಿಡಿ).

3) ರೈತರ ಮಕ್ಕಳ ಮದುವೆಗೆ 2 ಲಕ್ಷ ಸಹಾಯಧನ.

4) ವೃದ್ಧಾಪ್ಯ, ವಿಧವಾ ವೇತನ 900 ರೂ.ಯಿಂದ 2 ಸಾವಿರ ರೂ. ಹೆಚ್ಚಳ .

5)ಅಂಗನವಾಡಿ ಕಾರ್ಯಕರ್ತೆಯರಿಗೆ 5 ಸಾವಿರ ವೇತನ.

6)ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ನಿವೃತ್ತವಾದವ್ರಿಗೆ ಪಿಂಚಣಿ.

7)ಹಿರಿಯ ನಾಗರಿಕರಿಗೆ ಮಾಸಾಶನ 1200 ರೂ.ಯಿಂದ 5 ಸಾವಿರ ರೂ. ಏರಿಕೆ.

8)ವಿಶೇಷ ಚೇತನರಿಗೆ ಪಿಂಚಣಿ 600 ರೂ.ಯಿಂದ 2500 ರೂ.ಗೆ ಏರಿಕೆ.

9)ಸಾಮಾಜಿಕ ಭದ್ರತೆಗಳ ಮಾಸಾಶನ 5 ಸಾವಿರಕ್ಕೆ ಹೆಚ್ಚಳ.

10)ತೆಲಂಗಾಣ ಮಾದರಿಯಲ್ಲಿ ಕೃಷಿಬಂಧು ಯೋಜನೆ ಜಾರಿ.

11)6.8 ಲಕ್ಷ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್.

12)ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಆದ್ಯತೆ.

13)ಹಿಂದುಳಿದ 18 ವರ್ಷ ತುಂಬಿದ ವಿದ್ಯಾರ್ಥಿನಿಯರಿಗೆ ವಿದ್ಯುತ್ ಚಾಲಿತ ಮೊಪೆಡ್.

14)ಜಯದೇವ ಮಾದರಿ ಜಿಲ್ಲೆಗೊಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ .

15)ನಿಮ್ಹಾನ್ಸ್ ಮಾದರಿ 500 ಹಾಸಿಗೆಯುಳ್ಳ ಆಧುನಿಕ ನರವಿಜ್ಞಾನ ವೈದ್ಯಕೀಯ ಸಂಸ್ಥೆ .

16)ವೃತ್ತಿನಿರತ ವಕೀಲರಿಗೆ ರಕ್ಷಣೆ ಕಾಯ್ದೆ ಜಾರಿ.

17)ವಕೀಲರಿಗೆ ನೀಡುವ ಮಾಸಿಕ ಭತ್ಯೆ 2 ಸಾವಿರದಿಂದ 3 ಸಾವಿರಕ್ಕೆ ಏರಿಕೆ.

18)ಸಣ್ಣ ಉದ್ಯೋಗ ವ್ಯಾಪಾರ ನಡೆಸುವವರಿಗೆ 2 ಲಕ್ಷ ರೂ.ವರೆಗೆ ಸಹಾಯಧನ.

19)ಸಣ್ಣ ಉದ್ಯೋಗ ನಡೆಸುವ ಮಹಿಳಾ ಉದ್ಯಮಿಗಳಿಗೆ ಭದ್ರತೆ ರಹಿತ 2 ಕೋಟಿ ರೂ.ವರೆಗೆ ಬ್ಯಾಂಕ್​​ಗಳ ಮುಖೇನ ಸಾಲ.

20)ಒಂದು ವರ್ಷ ಕೌಶಲ್ಯ ತರಬೇತಿಯಲ್ಲಿ ತೊಡಗಿಸಿಕೊಳ್ಳುವ ಯುವಕ-ಯುವತಿಯರಿಗೆ ಮಾಸಿಕ 8 ಸಾವಿರ ರೂ.ಭತ್ಯೆ.

21)ರೈತ ಯುವಕರನ್ನು ಮದುವೆಯಾಗೋ ಯುವತಿಯರಿಗೆ 2 ಲಕ್ಷ ಪ್ರೋತ್ಸಾಹ ಧನ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

55 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago