ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ದುರಾಡಳಿತ, ಬೇಜವಾಬ್ದಾರಿತನದಿಂದ ಬೇಸತ್ತು ಇಂದು ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸಿದ್ಧಾಂತ, ಆಡಳಿತ ವೈಖರಿ ಒಪ್ಪಿ ಪಕ್ಷ ಸೇರ್ಪಡೆಗೊಂಡಿರುವುದು ಪಕ್ಷ ಬಲಿಷ್ಠವಾಗಲು ಇನ್ನಷ್ಟು ಪುಷ್ಠಿ ನೀಡಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ತಿಳಿಸಿದರು.
ಇಂದು ನಗರದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನದಲ್ಲಿ ಅಳವಡಿಸಿದ್ದ ಮೀಸಲಾತಿಯನ್ನು ತೆಗೆಯುವುದಕ್ಕೆ ಹೊರಟಿರುವ ಬಿಜೆಪಿ ಸರ್ಕಾರ ನಡೆ ಖಂಡಿಸಿ ಕಾಂಗ್ರೆಸ್ ಪಕ್ಷವನ್ನ ಸೇರಿದ್ದಾರೆ.
ಬಿಜೆಪಿಯ ಸುಳ್ಳು ಭರವಸೆ, ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಾ ಬಂದಿದೆ ಎಂದು ಆರೋಪ ಮಾಡಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ನ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಇಷ್ಟರ್ ಅಹಮದ್ ಪಚೋಡಿ ವಾಲಾ, ನಗರ ಬಿಜೆಪಿಯ ಅಧ್ಯಕ್ಷ ಇನ್ಯತ್ ಆದಿಲ್ ಭಕ್ಷು ಶಹಿಂಸಾ ಸಿಕಂದರ್ ಪಾಷಾ ಮತ್ತು ಸಂಗಡಿಗರು, ಸಿರಾಜ್ ಪಾಷಾ, ಅಸ್ಲಾಂ ಪಾಶ ಮತ್ತು 300ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…