ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ದುರಾಡಳಿತ, ಬೇಜವಾಬ್ದಾರಿತನದಿಂದ ಬೇಸತ್ತು ಇಂದು ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸಿದ್ಧಾಂತ, ಆಡಳಿತ ವೈಖರಿ ಒಪ್ಪಿ ಪಕ್ಷ ಸೇರ್ಪಡೆಗೊಂಡಿರುವುದು ಪಕ್ಷ ಬಲಿಷ್ಠವಾಗಲು ಇನ್ನಷ್ಟು ಪುಷ್ಠಿ ನೀಡಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ತಿಳಿಸಿದರು.
ಇಂದು ನಗರದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನದಲ್ಲಿ ಅಳವಡಿಸಿದ್ದ ಮೀಸಲಾತಿಯನ್ನು ತೆಗೆಯುವುದಕ್ಕೆ ಹೊರಟಿರುವ ಬಿಜೆಪಿ ಸರ್ಕಾರ ನಡೆ ಖಂಡಿಸಿ ಕಾಂಗ್ರೆಸ್ ಪಕ್ಷವನ್ನ ಸೇರಿದ್ದಾರೆ.
ಬಿಜೆಪಿಯ ಸುಳ್ಳು ಭರವಸೆ, ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಾ ಬಂದಿದೆ ಎಂದು ಆರೋಪ ಮಾಡಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ನ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಇಷ್ಟರ್ ಅಹಮದ್ ಪಚೋಡಿ ವಾಲಾ, ನಗರ ಬಿಜೆಪಿಯ ಅಧ್ಯಕ್ಷ ಇನ್ಯತ್ ಆದಿಲ್ ಭಕ್ಷು ಶಹಿಂಸಾ ಸಿಕಂದರ್ ಪಾಷಾ ಮತ್ತು ಸಂಗಡಿಗರು, ಸಿರಾಜ್ ಪಾಷಾ, ಅಸ್ಲಾಂ ಪಾಶ ಮತ್ತು 300ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…