ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ದುರಾಡಳಿತ, ಬೇಜವಾಬ್ದಾರಿತನದಿಂದ ಬೇಸತ್ತು ಇಂದು ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸಿದ್ಧಾಂತ, ಆಡಳಿತ ವೈಖರಿ ಒಪ್ಪಿ ಪಕ್ಷ ಸೇರ್ಪಡೆಗೊಂಡಿರುವುದು ಪಕ್ಷ ಬಲಿಷ್ಠವಾಗಲು ಇನ್ನಷ್ಟು ಪುಷ್ಠಿ ನೀಡಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ತಿಳಿಸಿದರು.
ಇಂದು ನಗರದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನದಲ್ಲಿ ಅಳವಡಿಸಿದ್ದ ಮೀಸಲಾತಿಯನ್ನು ತೆಗೆಯುವುದಕ್ಕೆ ಹೊರಟಿರುವ ಬಿಜೆಪಿ ಸರ್ಕಾರ ನಡೆ ಖಂಡಿಸಿ ಕಾಂಗ್ರೆಸ್ ಪಕ್ಷವನ್ನ ಸೇರಿದ್ದಾರೆ.
ಬಿಜೆಪಿಯ ಸುಳ್ಳು ಭರವಸೆ, ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಾ ಬಂದಿದೆ ಎಂದು ಆರೋಪ ಮಾಡಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ನ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಇಷ್ಟರ್ ಅಹಮದ್ ಪಚೋಡಿ ವಾಲಾ, ನಗರ ಬಿಜೆಪಿಯ ಅಧ್ಯಕ್ಷ ಇನ್ಯತ್ ಆದಿಲ್ ಭಕ್ಷು ಶಹಿಂಸಾ ಸಿಕಂದರ್ ಪಾಷಾ ಮತ್ತು ಸಂಗಡಿಗರು, ಸಿರಾಜ್ ಪಾಷಾ, ಅಸ್ಲಾಂ ಪಾಶ ಮತ್ತು 300ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…