Categories: ಕೋಲಾರ

ಜೆಡಿಎಸ್‌-ಬಿಜೆಪಿ ಮೈತ್ರಿಗೆ ಮುಖಭಂಗ: ಕಾಂಗ್ರೆಸ್ ತೆಕ್ಕೆಗೆ ಕೋಲಾರ ಪಿಎಲ್ಡಿ ಬ್ಯಾಂಕ್

ಕೋಲಾರ:‌ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ ನಿಯಮಿತದ ನೂತನ ಅಧ್ಯಕ್ಷರಾಗಿ ಜೆಡಿಎಸ್‌ ಪಕ್ಷದಿಂದ ಗೆದ್ದು ಕಾಂಗ್ರೆಸ್ ಪಕ್ಷಕೆ ಸೇರ್ಪಡೆಯಾದ ಕೆಂದಟ್ಟಿ ಎ ಶಿವಕುಮಾರ್, ಉಪಾಧ್ಯಕ್ಷರಾಗಿ ಸರ್ಕಾರದಿಂದ ನಾಮನಿರ್ದೇಶನವಾದ ಜಂಬಾಪುರ ವೆಂಕಟರಾಮ್ ಆಯ್ಕೆಯಾದರು.

ನಗರದ ಪಿಎಲ್‌ಡಿ ಬ್ಯಾಂಕ್‌ ಕಾರ್ಯಾಲಯದಲ್ಲಿ ಗುರುವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲದಿಂದ ಎ ಶಿವಕುಮಾರ್, ಜೆಡಿಎಸ್‌ ಬಿಜೆಪಿ ಮೈತ್ರಿಯಿಂದ ವಿ.ಎಂ ವೆಂಕಟೇಶಪ್ಪ ನಾಮಪತ್ರ ಸಲ್ಲಿಸಿದರು ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಜಂಜಾಪುರ ವೆಂಕಟರಾಮ್ ಉಪಾಧ್ಯಕ್ಷ ಸ್ಥಾನಕ್ಕೆ ಮೈತ್ರಿಯಿಂದ ಅಂಬಿಕಾ ನಾಮಪತ್ರ ಸಲ್ಲಿಸಿದರು ಚುನಾವಣೆ ನಡೆದು ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಇಬ್ಬರು ಕೇವಲ ಒಂದು ಮತದ ಅಂತರದಲ್ಲಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾದರು

ಈ ಸಂದರ್ಭದಲ್ಲಿ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದನೆ ಸಲ್ಲಿಸಿ ಮಾತನಾಡಿದ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಿದ್ದು ಜಿಲ್ಲೆಯ ಎಲ್ಲಾ ನಗರಸಭೆ ಹಾಗೂ ಪುರಸಭೆ ಕಾಂಗ್ರೆಸ್ ಅಧಿಕಾರ ಹಿಡಿದಿದೆ ಅದೇ ರೀತಿ ಜಿಲ್ಲೆಯ ಎಲ್ಲಾ ಪಿಎಲ್ಡಿ ಬ್ಯಾಂಕ್ ಆಡಳಿತ ಮಂಡಳಿಯು ಕಾಂಗ್ರೆಸ್ ಬೆಂಬಲಿಗರು ಆಯ್ಕೆಯಾಗಲಿದ್ದಾರೆ ಕಾಂಗ್ರೆಸ್ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ ಎಂಬುದನ್ನು ಚುನಾವಣೆಯಲ್ಲಿ ಸಾಬೀತಾಗಿದೆ ಎಂದರು.

ನೂತನ ಅಧ್ಯಕ್ಷ ಎ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಬ್ಯಾಂಕ್ ಅಭಿವೃದ್ಧಿ ಸಾಧ್ಯವಿದ್ದು ಅನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಸರಕಾರದಿಂದ ರೈತರಿಗೆ ಸಿಗುವ ಸಾಲ ಸೌಲಭ್ಯ ಒದಗಿಸುವಲ್ಲಿ ಮತ್ತು ಬ್ಯಾಂಕ್‌ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ನನ್ನನ್ನು ಬ್ಯಾಂಕ್‌ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಹಾಗೂ ಕಾಂಗ್ರೆಸ್ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾದ ಎನ್.ಜಿ ಬ್ಯಾಟಪ್ಪ, ವೆಲಗಲಬುರ್ರೆ ಶಶಿಧರ್, ಟಿ.ಕೆ ಬೈರೇಗೌಡ, ವೆಂಕಟಲಕ್ಷ್ಮಮ್ಮ, ಮುನಿರತ್ನ, ಲಕ್ಷ್ಮಮ್ಮ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಮುಖಂಡರಾದ ನಾಗನಾಳ ಸೋಮಣ್ಣ, ಖಾಜಿಕಲ್ಲಹಳ್ಳಿ ಮುನಿರಾಜು, ಚಂಜಿಮಲೆ ರಮೇಶ್, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ,ಷಂಷೀರ್ ಸಿಎಂಎಂ ಮಂಜುನಾಥ್, ಚಂದ್ರಮೌಳಿ, ಮುಂತಾದವರು ಇದ್ದರು ಚುನಾವಣಾಧಿಕಾರಿಯಾಗಿ ಮುಸ್ತಫಾ ಕಾರ್ಯನಿರ್ವಹಿಸಿದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

5 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

6 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

7 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

8 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

10 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

16 hours ago