Categories: ಕೋಲಾರ

ಜೆಡಿಎಸ್‌-ಬಿಜೆಪಿ ಮೈತ್ರಿಗೆ ಮುಖಭಂಗ: ಕಾಂಗ್ರೆಸ್ ತೆಕ್ಕೆಗೆ ಕೋಲಾರ ಪಿಎಲ್ಡಿ ಬ್ಯಾಂಕ್

ಕೋಲಾರ:‌ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ ನಿಯಮಿತದ ನೂತನ ಅಧ್ಯಕ್ಷರಾಗಿ ಜೆಡಿಎಸ್‌ ಪಕ್ಷದಿಂದ ಗೆದ್ದು ಕಾಂಗ್ರೆಸ್ ಪಕ್ಷಕೆ ಸೇರ್ಪಡೆಯಾದ ಕೆಂದಟ್ಟಿ ಎ ಶಿವಕುಮಾರ್, ಉಪಾಧ್ಯಕ್ಷರಾಗಿ ಸರ್ಕಾರದಿಂದ ನಾಮನಿರ್ದೇಶನವಾದ ಜಂಬಾಪುರ ವೆಂಕಟರಾಮ್ ಆಯ್ಕೆಯಾದರು.

ನಗರದ ಪಿಎಲ್‌ಡಿ ಬ್ಯಾಂಕ್‌ ಕಾರ್ಯಾಲಯದಲ್ಲಿ ಗುರುವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲದಿಂದ ಎ ಶಿವಕುಮಾರ್, ಜೆಡಿಎಸ್‌ ಬಿಜೆಪಿ ಮೈತ್ರಿಯಿಂದ ವಿ.ಎಂ ವೆಂಕಟೇಶಪ್ಪ ನಾಮಪತ್ರ ಸಲ್ಲಿಸಿದರು ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಜಂಜಾಪುರ ವೆಂಕಟರಾಮ್ ಉಪಾಧ್ಯಕ್ಷ ಸ್ಥಾನಕ್ಕೆ ಮೈತ್ರಿಯಿಂದ ಅಂಬಿಕಾ ನಾಮಪತ್ರ ಸಲ್ಲಿಸಿದರು ಚುನಾವಣೆ ನಡೆದು ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಇಬ್ಬರು ಕೇವಲ ಒಂದು ಮತದ ಅಂತರದಲ್ಲಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾದರು

ಈ ಸಂದರ್ಭದಲ್ಲಿ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದನೆ ಸಲ್ಲಿಸಿ ಮಾತನಾಡಿದ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಿದ್ದು ಜಿಲ್ಲೆಯ ಎಲ್ಲಾ ನಗರಸಭೆ ಹಾಗೂ ಪುರಸಭೆ ಕಾಂಗ್ರೆಸ್ ಅಧಿಕಾರ ಹಿಡಿದಿದೆ ಅದೇ ರೀತಿ ಜಿಲ್ಲೆಯ ಎಲ್ಲಾ ಪಿಎಲ್ಡಿ ಬ್ಯಾಂಕ್ ಆಡಳಿತ ಮಂಡಳಿಯು ಕಾಂಗ್ರೆಸ್ ಬೆಂಬಲಿಗರು ಆಯ್ಕೆಯಾಗಲಿದ್ದಾರೆ ಕಾಂಗ್ರೆಸ್ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ ಎಂಬುದನ್ನು ಚುನಾವಣೆಯಲ್ಲಿ ಸಾಬೀತಾಗಿದೆ ಎಂದರು.

ನೂತನ ಅಧ್ಯಕ್ಷ ಎ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಬ್ಯಾಂಕ್ ಅಭಿವೃದ್ಧಿ ಸಾಧ್ಯವಿದ್ದು ಅನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಸರಕಾರದಿಂದ ರೈತರಿಗೆ ಸಿಗುವ ಸಾಲ ಸೌಲಭ್ಯ ಒದಗಿಸುವಲ್ಲಿ ಮತ್ತು ಬ್ಯಾಂಕ್‌ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ನನ್ನನ್ನು ಬ್ಯಾಂಕ್‌ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಹಾಗೂ ಕಾಂಗ್ರೆಸ್ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾದ ಎನ್.ಜಿ ಬ್ಯಾಟಪ್ಪ, ವೆಲಗಲಬುರ್ರೆ ಶಶಿಧರ್, ಟಿ.ಕೆ ಬೈರೇಗೌಡ, ವೆಂಕಟಲಕ್ಷ್ಮಮ್ಮ, ಮುನಿರತ್ನ, ಲಕ್ಷ್ಮಮ್ಮ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಮುಖಂಡರಾದ ನಾಗನಾಳ ಸೋಮಣ್ಣ, ಖಾಜಿಕಲ್ಲಹಳ್ಳಿ ಮುನಿರಾಜು, ಚಂಜಿಮಲೆ ರಮೇಶ್, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ,ಷಂಷೀರ್ ಸಿಎಂಎಂ ಮಂಜುನಾಥ್, ಚಂದ್ರಮೌಳಿ, ಮುಂತಾದವರು ಇದ್ದರು ಚುನಾವಣಾಧಿಕಾರಿಯಾಗಿ ಮುಸ್ತಫಾ ಕಾರ್ಯನಿರ್ವಹಿಸಿದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

17 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago