ಚಿಕ್ಕಬಳ್ಳಾಪುರ : ಜೆಡಿಎಸ್ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ಕೊಲೆ ಮಾಡಿರುವ ಘಟನೆ ಶುಕ್ರವಾರ (ಜ.03) ರಾತ್ರಿ 9.30 ರ ಆಸುಪಾಸಿನಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಶಿಡ್ಲಘಟ್ಟ ರಸ್ತೆಯ ತಮ್ಮನಾಯಕನಹಳ್ಳಿ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ.
ಕೊಲೆಗೀಡಾದ ವ್ಯಕ್ತಿಯನ್ನು ತಮ್ಮನಾಯಕನಹಳ್ಳಿ ಗ್ರಾಮದ ನಿವಾಸಿ ವೆಂಕಟೇಶ್ ಅಲಿಯಾಸ್ ವಾಚ್ ವೆಂಕಟೇಶ್ ಎಂದು ಗುರುತಿಸಲಾಗಿದೆ.
ಕೂಡಲೇ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ವೆಂಕಟೇಶ್ ಸಣ್ಣ ಪುಟ್ಟದಾಗಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಶ್ವಾನದಳ ಬೆರಳಚ್ಚು ತಜ್ಞರು ಭೇಟಿ ನೀಡಿ ತಪಾಸನೆ ನಡೆಸಿದ್ದಾರೆ. ಜೊತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…