ಜೆಡಿಎಸ್ ಮುಖಂಡ ವೆಂಕಟೇಶ್ ಹತ್ಯೆ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

ಚಿಕ್ಕಬಳ್ಳಾಪುರದಲ್ಲಿ ನಡೆದ ಜೆಡಿಎಸ್ ಮುಖಂಡ ಎನ್. ವೆಂಕಟೇಶ್ ಅವರ ಬರ್ಬರ ಹತ್ಯೆ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಧನು ಅಲಿಯಾಸ್ ಧನರಾಜ್ ಹಾಗೂ ಆತನ ಸಹಚರ ಸತೀಶ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಹತ್ಯೆ ನಡೆದ ದಿನವೆ, ವಿಕ್ಟಿಮ್ ವೆಂಕಟೇಶ್ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ, ಧನರಾಜ್ ಮತ್ತು ಸತೀಶ್ ಸ್ಕೂಟರ್ ಅಡ್ಡಗಟ್ಟಿ ಮೊದಲು ಹಂದಿ ಕೊಯ್ಯುವ ಚಾಕುವಿನಿಂದ ಬೆನ್ನಿಗೆ ಇರಿದಿದ್ದರು. ನಂತರ ಹೊಟ್ಟೆ ಹಾಗೂ ಮುಖದ ಭಾಗಕ್ಕೆ ಮೂರು ಬಾರಿ ಹಲ್ಲೆ ನಡೆಸಿದ್ದರು. ಕ್ರೌರ್ಯದಿಂದ ಕೈ ಕಟ್ ಮಾಡಿ, ಸ್ಥಳದಿಂದ ಪರಾರಿಯಾಗಿದ್ದರು.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಹತ್ಯೆಗೆ ಹಿಂದಿನ ಕಾರಣವಾಗಿ 2023ರ ಎಂಪಿ ಚುನಾವಣೆಯಲ್ಲಿ ನಡೆದ ಗಲಾಟೆ ಕಾರಣವಾಗಿರಬಹುದು. ಆ ಗಲಾಟೆಯ ಸಂದರ್ಭದಲ್ಲಿ ವೆಂಕಟೇಶ್, ಆರೋಪಿಗಳಾದ ಧನು, ಸತೀಶ್ ಹಾಗೂ ಇನ್ನೊಬ್ಬ ಅರವಿಂದ್ ಅವರನ್ನು ಹಿಗ್ಗಾಮುಗ್ಗಾ ಹೊಡೆದಿದ್ದರು. ಧನು ಪರವಾಗಿ ವೆಂಕಟೇಶ್‌ನ್ನು ರಾಜಿ ಮಾಡಲು ಹೋಗಿದ್ದ ಸತೀಶ್ ಕೂಡ ವೆಂಕಟೇಶ್ ಕೋಪಕ್ಕೆ ಗುರಿಯಾಗಿದ್ದ.

ವೇಂಕಟೇಶ್ ನಿರಂತರವಾಗಿ ಈ ಮೂರು ಮಂದಿಯನ್ನು ಒತ್ತಡಕ್ಕೊಳಪಡಿಸುತ್ತಿದ್ದು, “ನನ್ನ ವಿರುದ್ಧ ಏನು ದೂರು ಕೊಟ್ಟರೂ ನಿಮ್ಮಿಂದ ಏನೂ ಸಾಧ್ಯವಿಲ್ಲ” ಎಂಬ ಧೈರ್ಯವನ್ನು ಪ್ರದರ್ಶಿಸುತ್ತಿದ್ದರು. ಇದು ಸಹ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಪೊಲೀಸರು ಶಂಕಿಸುತ್ತಿದ್ದಾರೆ.

ಹತ್ಯೆಯ ನಂತರ ಧನು ಮತ್ತು ಸತೀಶ್ ಬೆಂಗಳೂರಿಗೆ ಓಡಿಹೋಗಿ, ಅಲ್ಲಿನ ಒಂದು ರೂಮಲ್ಲಿ ತಂಗಿದ್ದಾಗ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇಬ್ಬರನ್ನು ಈಗ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಇಡೀ ಪ್ರಕರಣದ ಹಿನ್ನೆಲೆಯನ್ನು ತಿಳಿಯಲು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

11 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

23 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

24 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 day ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

1 day ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago