ಚಿಕ್ಕಬಳ್ಳಾಪುರದಲ್ಲಿ ನಡೆದ ಜೆಡಿಎಸ್ ಮುಖಂಡ ಎನ್. ವೆಂಕಟೇಶ್ ಅವರ ಬರ್ಬರ ಹತ್ಯೆ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಧನು ಅಲಿಯಾಸ್ ಧನರಾಜ್ ಹಾಗೂ ಆತನ ಸಹಚರ ಸತೀಶ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಹತ್ಯೆ ನಡೆದ ದಿನವೆ, ವಿಕ್ಟಿಮ್ ವೆಂಕಟೇಶ್ ಸ್ಕೂಟರ್ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ, ಧನರಾಜ್ ಮತ್ತು ಸತೀಶ್ ಸ್ಕೂಟರ್ ಅಡ್ಡಗಟ್ಟಿ ಮೊದಲು ಹಂದಿ ಕೊಯ್ಯುವ ಚಾಕುವಿನಿಂದ ಬೆನ್ನಿಗೆ ಇರಿದಿದ್ದರು. ನಂತರ ಹೊಟ್ಟೆ ಹಾಗೂ ಮುಖದ ಭಾಗಕ್ಕೆ ಮೂರು ಬಾರಿ ಹಲ್ಲೆ ನಡೆಸಿದ್ದರು. ಕ್ರೌರ್ಯದಿಂದ ಕೈ ಕಟ್ ಮಾಡಿ, ಸ್ಥಳದಿಂದ ಪರಾರಿಯಾಗಿದ್ದರು.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಹತ್ಯೆಗೆ ಹಿಂದಿನ ಕಾರಣವಾಗಿ 2023ರ ಎಂಪಿ ಚುನಾವಣೆಯಲ್ಲಿ ನಡೆದ ಗಲಾಟೆ ಕಾರಣವಾಗಿರಬಹುದು. ಆ ಗಲಾಟೆಯ ಸಂದರ್ಭದಲ್ಲಿ ವೆಂಕಟೇಶ್, ಆರೋಪಿಗಳಾದ ಧನು, ಸತೀಶ್ ಹಾಗೂ ಇನ್ನೊಬ್ಬ ಅರವಿಂದ್ ಅವರನ್ನು ಹಿಗ್ಗಾಮುಗ್ಗಾ ಹೊಡೆದಿದ್ದರು. ಧನು ಪರವಾಗಿ ವೆಂಕಟೇಶ್ನ್ನು ರಾಜಿ ಮಾಡಲು ಹೋಗಿದ್ದ ಸತೀಶ್ ಕೂಡ ವೆಂಕಟೇಶ್ ಕೋಪಕ್ಕೆ ಗುರಿಯಾಗಿದ್ದ.
ವೇಂಕಟೇಶ್ ನಿರಂತರವಾಗಿ ಈ ಮೂರು ಮಂದಿಯನ್ನು ಒತ್ತಡಕ್ಕೊಳಪಡಿಸುತ್ತಿದ್ದು, “ನನ್ನ ವಿರುದ್ಧ ಏನು ದೂರು ಕೊಟ್ಟರೂ ನಿಮ್ಮಿಂದ ಏನೂ ಸಾಧ್ಯವಿಲ್ಲ” ಎಂಬ ಧೈರ್ಯವನ್ನು ಪ್ರದರ್ಶಿಸುತ್ತಿದ್ದರು. ಇದು ಸಹ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಪೊಲೀಸರು ಶಂಕಿಸುತ್ತಿದ್ದಾರೆ.
ಹತ್ಯೆಯ ನಂತರ ಧನು ಮತ್ತು ಸತೀಶ್ ಬೆಂಗಳೂರಿಗೆ ಓಡಿಹೋಗಿ, ಅಲ್ಲಿನ ಒಂದು ರೂಮಲ್ಲಿ ತಂಗಿದ್ದಾಗ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇಬ್ಬರನ್ನು ಈಗ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಇಡೀ ಪ್ರಕರಣದ ಹಿನ್ನೆಲೆಯನ್ನು ತಿಳಿಯಲು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…
ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…
ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…