ಚಿಕ್ಕಬಳ್ಳಾಪುರದಲ್ಲಿ ನಡೆದ ಜೆಡಿಎಸ್ ಮುಖಂಡ ಎನ್. ವೆಂಕಟೇಶ್ ಅವರ ಬರ್ಬರ ಹತ್ಯೆ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಧನು ಅಲಿಯಾಸ್ ಧನರಾಜ್ ಹಾಗೂ ಆತನ ಸಹಚರ ಸತೀಶ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಹತ್ಯೆ ನಡೆದ ದಿನವೆ, ವಿಕ್ಟಿಮ್ ವೆಂಕಟೇಶ್ ಸ್ಕೂಟರ್ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ, ಧನರಾಜ್ ಮತ್ತು ಸತೀಶ್ ಸ್ಕೂಟರ್ ಅಡ್ಡಗಟ್ಟಿ ಮೊದಲು ಹಂದಿ ಕೊಯ್ಯುವ ಚಾಕುವಿನಿಂದ ಬೆನ್ನಿಗೆ ಇರಿದಿದ್ದರು. ನಂತರ ಹೊಟ್ಟೆ ಹಾಗೂ ಮುಖದ ಭಾಗಕ್ಕೆ ಮೂರು ಬಾರಿ ಹಲ್ಲೆ ನಡೆಸಿದ್ದರು. ಕ್ರೌರ್ಯದಿಂದ ಕೈ ಕಟ್ ಮಾಡಿ, ಸ್ಥಳದಿಂದ ಪರಾರಿಯಾಗಿದ್ದರು.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಹತ್ಯೆಗೆ ಹಿಂದಿನ ಕಾರಣವಾಗಿ 2023ರ ಎಂಪಿ ಚುನಾವಣೆಯಲ್ಲಿ ನಡೆದ ಗಲಾಟೆ ಕಾರಣವಾಗಿರಬಹುದು. ಆ ಗಲಾಟೆಯ ಸಂದರ್ಭದಲ್ಲಿ ವೆಂಕಟೇಶ್, ಆರೋಪಿಗಳಾದ ಧನು, ಸತೀಶ್ ಹಾಗೂ ಇನ್ನೊಬ್ಬ ಅರವಿಂದ್ ಅವರನ್ನು ಹಿಗ್ಗಾಮುಗ್ಗಾ ಹೊಡೆದಿದ್ದರು. ಧನು ಪರವಾಗಿ ವೆಂಕಟೇಶ್ನ್ನು ರಾಜಿ ಮಾಡಲು ಹೋಗಿದ್ದ ಸತೀಶ್ ಕೂಡ ವೆಂಕಟೇಶ್ ಕೋಪಕ್ಕೆ ಗುರಿಯಾಗಿದ್ದ.
ವೇಂಕಟೇಶ್ ನಿರಂತರವಾಗಿ ಈ ಮೂರು ಮಂದಿಯನ್ನು ಒತ್ತಡಕ್ಕೊಳಪಡಿಸುತ್ತಿದ್ದು, “ನನ್ನ ವಿರುದ್ಧ ಏನು ದೂರು ಕೊಟ್ಟರೂ ನಿಮ್ಮಿಂದ ಏನೂ ಸಾಧ್ಯವಿಲ್ಲ” ಎಂಬ ಧೈರ್ಯವನ್ನು ಪ್ರದರ್ಶಿಸುತ್ತಿದ್ದರು. ಇದು ಸಹ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಪೊಲೀಸರು ಶಂಕಿಸುತ್ತಿದ್ದಾರೆ.
ಹತ್ಯೆಯ ನಂತರ ಧನು ಮತ್ತು ಸತೀಶ್ ಬೆಂಗಳೂರಿಗೆ ಓಡಿಹೋಗಿ, ಅಲ್ಲಿನ ಒಂದು ರೂಮಲ್ಲಿ ತಂಗಿದ್ದಾಗ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇಬ್ಬರನ್ನು ಈಗ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಇಡೀ ಪ್ರಕರಣದ ಹಿನ್ನೆಲೆಯನ್ನು ತಿಳಿಯಲು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…
ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…
ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…