ಜೆಡಿಎಸ್ ರೈತ ಸಾಂತ್ವನ ಯಾತ್ರೆ: ಯಾತ್ರೆಯ ವರದಿಯನ್ನ ಕೇಂದ್ರಕ್ಕೂ ಕಳುಹಿಸಿ ಪರಿಹಾರ ನೀಡುವಂತೆ ಒತ್ತಾಯ ಮಾಡಲಿ- ಸಿಎಂ‌ ಸಿದ್ದರಾಮಯ್ಯ

ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ತಿಳಿಸಿದ್ದಾರೆ.

ಹೊಸ ಬೆಳವಣಿಗೆಯಲ್ಲಿ ಸನ್ಮಾನ್ಯ ಹೆಚ್.ಡಿ.ಕುಮಾರಸ್ವಾಮಿ ಅವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ ಎಂದರು‌.

ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು ರೂ.33,710 ಕೋಟಿ ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ ರೂ.17,901 ಕೋಟಿ ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಸನ್ಮಾನ್ಯ ಹೆಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು ಎಂದರು.

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

44 minutes ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

2 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

10 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

11 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

11 hours ago