ಜೆಡಿಎಸ್ ರೈತ ಸಾಂತ್ವನ ಯಾತ್ರೆ: ಯಾತ್ರೆಯ ವರದಿಯನ್ನ ಕೇಂದ್ರಕ್ಕೂ ಕಳುಹಿಸಿ ಪರಿಹಾರ ನೀಡುವಂತೆ ಒತ್ತಾಯ ಮಾಡಲಿ- ಸಿಎಂ‌ ಸಿದ್ದರಾಮಯ್ಯ

ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ತಿಳಿಸಿದ್ದಾರೆ.

ಹೊಸ ಬೆಳವಣಿಗೆಯಲ್ಲಿ ಸನ್ಮಾನ್ಯ ಹೆಚ್.ಡಿ.ಕುಮಾರಸ್ವಾಮಿ ಅವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ ಎಂದರು‌.

ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು ರೂ.33,710 ಕೋಟಿ ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ ರೂ.17,901 ಕೋಟಿ ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಸನ್ಮಾನ್ಯ ಹೆಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು ಎಂದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

2 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

9 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

10 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

23 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

23 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

23 hours ago