ಜೆಡಿಎಸ್ ರೈತ ಸಾಂತ್ವನ ಯಾತ್ರೆ: ಯಾತ್ರೆಯ ವರದಿಯನ್ನ ಕೇಂದ್ರಕ್ಕೂ ಕಳುಹಿಸಿ ಪರಿಹಾರ ನೀಡುವಂತೆ ಒತ್ತಾಯ ಮಾಡಲಿ- ಸಿಎಂ‌ ಸಿದ್ದರಾಮಯ್ಯ

ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ತಿಳಿಸಿದ್ದಾರೆ.

ಹೊಸ ಬೆಳವಣಿಗೆಯಲ್ಲಿ ಸನ್ಮಾನ್ಯ ಹೆಚ್.ಡಿ.ಕುಮಾರಸ್ವಾಮಿ ಅವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ ಎಂದರು‌.

ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು ರೂ.33,710 ಕೋಟಿ ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ ರೂ.17,901 ಕೋಟಿ ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಸನ್ಮಾನ್ಯ ಹೆಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು ಎಂದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

7 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

13 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

15 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago